ಭಾರತ ಮಾತೆ ತಾಯಿಗೆ ಸಮಾನ


Team Udayavani, Jul 24, 2017, 12:21 PM IST

hub5.jpg

ಧಾರವಾಡ: ಭಾರತೀಯ ಸಂಸ್ಕೃತಿ ಪ್ರಕಾರ ಈ ನಾಡಿನಲ್ಲಿ ಜನಿಸಿದ ಪ್ರತಿಯೊಬ್ಬ ಮನುಷ್ಯನು ತನ್ನ ಹೆತ್ತ ತಾಯಿಯನ್ನು ಎಷ್ಟು ಗೌರವಿಸುತ್ತಾನೋ ಅದರಷ್ಟೆ ಭಾರತ ಮಾತೆಯನ್ನೂ ಗೌರವಿಸಿ ಪೂಜಿಸಬೇಕು ಎಂದು ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು. 

ಇಲ್ಲಿಯ ಚರಂತಿಮಠ ಗಾರ್ಡನ್‌ದಲ್ಲಿರುವ ಶ್ರೀ ಬನಶಂಕರಿ ಭವನದಲ್ಲಿ ಆಯೋಜಿಸಿದ್ದ ಭಾರತ ಮಾತಾ ಪೂಜೆ ಸಮಾರಂಭದಲ್ಲಿ ಭಾರತ ಮಾತೆ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಅವರು ಮಾತನಾಡಿದರು. ಈ ನೆಲದ ಮೇಲೆ ಜನಿಸಿದ ಪ್ರತಿಯೊಬ್ಬರು ಭಾರತ ಮಾತೆಯ ಋಣದಲ್ಲಿದ್ದೇವೆ.

ಆಹಾರ, ನೀರು, ಗಾಳಿ ಸೇರಿದಂತೆ ಮನುಷ್ಯನಿಗೆ ಬದುಕಲು ಅನುಕೂಲ ಮಾಡಿಕೊಟ್ಟು ತನ್ನ ಕಷ್ಟಗಳ ಮಧ್ಯೆಯೂ  ಜನರಿಗೆ ಸುಖ ನೀಡುತ್ತಿದ್ದಾಳೆ. ಮಾತೆಗೆ ಸಹನಾ ಶಕ್ತಿ ಜಾಸ್ತಿ ಇರುತ್ತದೆ. ಹೀಗಾಗಿ ಭೂಮಿಯನ್ನು ತಾಯಿಗೆ ಹೋಲಿಕೆ ಮಾಡಲಾಗುತ್ತಿದ್ದು, ಅಂತಹ ಮಾತೆಯನ್ನು ನಿತ್ಯ ನೆನೆಯಬೇಕು ಎಂದರು.

ಮೇಯರ್‌ ಡಿ.ಕೆ. ಚವ್ಹಾಣ ಮಾತನಾಡಿ, ಮಾನವರು ಇತ್ತೀಚೆಗೆ ಭೂಮಿ ತಾಯಿಗೆ ಹೆಚ್ಚು ಕಷ್ಟ ನೀಡುತ್ತಿದ್ದಾರೆ ಎನಿಸುತ್ತಿದೆ. ಸಸಿಗಳನ್ನು ನೆಡುವ  ಬದಲಾಗಿ ಮರಗಳನ್ನು ಹೆಚ್ಚು ಕಡಿಯಲಾಗುತ್ತಿದೆ. ಪರಿಸರ ಸಂರಕ್ಷಣೆ ಮಾಡುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದ್ದರೂ ಅನೇಕ ಕಾರಣದಿಂದ ಪರಿಸರ ನಾಶದತ್ತ ಸಾಗುತ್ತಿದೆ ಎಂದರು. 

ಮಳೆ-ಬೆಳೆಗಾಗಿ ಇಂದು ನಾವು ಭೂತಾಯಿಗೆ ಮೊರೆ ಹೋಗುತ್ತಿದ್ದು, ಸಕಾಲದಲ್ಲಿ ಮಳೆ-ಬೆಳೆ ನೀರು ದೊರಕುವಂತೆ ಮಾಡಲು ಭಗವಂತನಲ್ಲಿ ಪ್ರಾರ್ಥನೆ  ಮಾಡುತ್ತಿದ್ದೇವೆ. ಭಾರತ ಮಾತೆಯನ್ನು ಪೂಜಿಸುವುದರ ಜೊತೆಗೆ ನಮ್ಮಲ್ಲಿರುವ ಮೌಲ್ಯಗಳನ್ನು ಅನುಷ್ಠಾನಗೊಳಿಸಿಕೊಳ್ಳಬೇಕು ಎಂದರು. 

ಪಾಲಿಕೆ ಸದಸ್ಯ ಶಂಕರ ಶೇಳಕೆ, ನಿರ್ಮಲ ಜವಳಿ, ಮಾಜಿ ಶಾಸಕಿ ಸೀಮಾ ಮಸೂತಿ, ಭಾರತಿ ಮಗದುಮ್‌, ನಾಗೇಶರಾವ ಕಲಬುರ್ಗಿ, ಶಿವಾನಂದ ಲೋಲೆನವರ, ವೀರೇಶ ಅಂಚಟಗೇರಿ, ಈರಣ್ಣ ಹಪ್ಪಳಿ, ಮೋಹನ ರಾಮದುರ್ಗ, ಗೀತಾ ನವಲೆ ಇದ್ದರು. ರಾಘವೇಂದ್ರ ಸ್ವಾಗತಿಸಿದರು. ರವಿಕುಮಾರ ನಿರೂಪಿಸಿದರು. ಮಂಜುನಾಥ ವಂದಿಸಿದರು.

ಟಾಪ್ ನ್ಯೂಸ್

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ

Prabhakar-Joshi

Bantwala: ಹಿರಿಯ ವಿದ್ವಾಂಸರಾದ ಡಾ.ಪ್ರಭಾಕರ ಜೋಶಿಗೆ ಪೊಳಲಿ ಯಕ್ಷೋತ್ಸವ ಪ್ರಶಸ್ತಿ ಪ್ರದಾನ

Sowthadka

Hunger Strike: ಸರಕಾರದ ಹಿಡಿತದಿಂದ ದೇಗುಲ ಮುಕ್ತಗೊಳಿಸಿ, ಸ್ವಾಯತ್ತ ಮಂಡಳಿ ರಚಿಸಲಿ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Hubli; ದತ್ತಮೂರ್ತಿ 4 ಕೈ ಭಗ್ನ ಮಾಡಿದ ದುಷ್ಕರ್ಮಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

rape

Women; 16 ವರ್ಷಗಳಿಂದ ಮನೆಯಲ್ಲೇ ಮಹಿಳೆ ಬಂಧನ: ರಕ್ಷಣೆ

CHampai Soren

Jharkhand ಮಾಜಿ ಸಿಎಂ ಚಂಪಯಿ ಆಸ್ಪತ್ರೆಗೆ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.