ಮಾಹಿತಿ-ಭಾಷಣ-ಪ್ರಸಾದ


Team Udayavani, Oct 24, 2017, 12:52 PM IST

h3-deshpande-siddu.jpg

ಧಾರವಾಡ: ಸೌಲಭ್ಯಗಳ ವಿತರಣಾ ಸಮಾವೇಶದಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ಜನರು ಪಾಲ್ಗೊಂಡು ಕಾಂಗ್ರೆಸ್‌ ಸರ್ಕಾರದ ಸಾಧನೆಗಳಿಗೆ ಜೈಕಾರ ಹಾಕಿದರು. ಒಂದರ್ಥದಲ್ಲಿ ಚುನಾವಣೆಗೆ ಸಿದ್ಧತಾ ಸಮಾವೇಶದಂತೆ ಕಂಡುಬಂತು. ಈ ಜನಸ್ತೋಮಕ್ಕೆ ಅಗತ್ಯ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡಲಾಗಿತ್ತು.

ಏಳು ಜಿಲ್ಲೆಗಳಿಂದ 35 ಸಾವಿರ ಫಲಾನುಭವಿಗಳನ್ನು ಕರೆ ತರಲಾಗಿತ್ತು. ಆಯಾ ಕ್ಷೇತ್ರದ ಶಾಸಕರು, ಜನಪ್ರತಿನಿಧಿಗಳಿಗೆ ತಮ್ಮ ಕ್ಷೇತ್ರದಿಂದ ಜನ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರನ್ನು ಕರೆತರುವಂತೆ ಹೇಳಿದ್ದರಿಂದ ಅವರ ಬ್ಯಾನರ್‌ ಅಡಿಯ ವಾಹನಗಳಲ್ಲೂ ಜನರನ್ನು ಕರೆ ತರಲಾಗಿತ್ತು. 

ಮಾಹಿತಿ ಮಳಿಗೆಗಳು: ಸರಕಾರದ ಸಾಧನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನ ಮಳಿಗೆಗಳು ಜನರನ್ನು ಸೆಳೆದವು. ಮುಖ್ಯ ವೇದಿಕೆಯ ಬಳಿ ನಿರ್ಮಿಸಲಾಗಿದ್ದ ವೀರರಾಣಿ ಕಿತ್ತೂರು ಚೆನ್ನಮ್ಮ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಷ್ಪಾರ್ಪಣೆ ಮಾಡಿದರು.

ಬಳಿಕ ಏಳು ಜಿಲ್ಲೆಗಳ ಸಾಧನೆ ಬಿಂಬಿಸುವ ಮಾಹಿತಿ ಮಳಿಗೆಗಳಿಗೆ ಭೇಟಿ ನೀಡಿ ವೀಕ್ಷಿಸಿದರು. ಹಾವೇರಿಯ ಕುರಿ ಉಣ್ಣೆಯಿಂದ ತಯಾರಿಸಿದ ರಜಾಯಿಗಳು, ತುಂಗಾ ಮೇಲ್ದಂಡೆ ಯೋಜನೆಯ ನೀರಾವರಿ ಯೋಜನೆಯ ಪ್ರತಿಕೃತಿ ವೀಕ್ಷಿಸಿ ಮಾಹಿತಿ ಪಡೆದರು. ಸಿಆರ್‌ಸಿ ಯೋಜನೆಯಡಿ ಪೌಷ್ಟಿಕ ಬಿಸ್ಕಿಟ್‌ಗಳನ್ನು ತಯಾರಿಸಿ ವಿತರಿಸುವ ಮಾಹಿತಿ ಕೇಳಿದ ಸಿದ್ದರಾಮಯ್ಯ, ಸಚಿವ ಆರ್‌.ವಿ.ದೇಶಪಾಂಡೆ ಅವರಿಂದ ಬಿಸ್ಕಿಟ್‌ ಪಡೆದು ಸವಿದರು.

ಬೃಹತ್‌ ಎಲ್‌ಇಡಿ ಪರದೆ ಬಳಸಿ ಸರ್ಕಾರದ ಯೋಜನೆಗಳ ಬಗ್ಗೆ ತಯಾರಿಸಿದ ಸಾಕ್ಷéಚಿತ್ರಗಳ ಪ್ರದರ್ಶನ ನಡೆಯಿತು. ಕೃಷಿ ವಿವಿಗೆ ತೆರಳುವ ಮುಖ್ಯ ಮಾರ್ಗದಲ್ಲಿ ಧಾರವಾಡ ಜಿಲ್ಲೆಯ ಹತ್ತಕ್ಕೂ ಹೆಚ್ಚು ಇಲಾಖೆಗಳು ಸ್ಥಾಪಿಸಿದ್ದ ಮಳಿಗೆಗಳಲ್ಲಿ ಜನರಿಗೆ ಯೋಜನೆಗಳ ಮಾಹಿತಿ ನೀಡುವ ವ್ಯವಸ್ಥೆ ಮಾಡಲಾಗಿತ್ತು. 

ಅಚ್ಚುಕಟ್ಟು ವ್ಯವಸ್ಥೆ: ಎರಡು ಕಡೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಒಂದೆಡೆ 101 ಹಾಗೂ ಮತ್ತೂಂದೆಡೆ 70 ಕೌಂಟರ್‌ಗಳ ಪೈಕಿ ಒಟ್ಟು 150 ಕೌಂಟರ್‌ಗಳನ್ನು ಬೆಳಗ್ಗೆಯಿಂದಲೇ ತೆರೆಯಲಾಗಿತ್ತು. ಪುರುಷರಿಗೆ ಹಾಗೂ ಮಹಿಳೆಯರಿಗೆ ಪ್ರತ್ಯೇಕ ಕೌಂಟರ್‌ ವ್ಯವಸ್ಥೆ ಕಲ್ಪಿಸಲಾಗಿತ್ತು.

ಜನದಟ್ಟಣೆ ತಡೆಯಲು ಕಾಲೇಜಿನ ಎನ್ನೆಸ್ಸೆಸ್‌ ಶಿಬಿರದ ವಿದ್ಯಾರ್ಥಿಗಳನ್ನು ಬಳಕೆ ಮಾಡಿಕೊಂಡಿದ್ದು ಕಂಡು ಬಂತು. ಕೌಂಟರ್‌ ಗಳ ಪಕ್ಕದಲ್ಲಿಯೇ ಅಡುಗೆ ತಯಾರಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ಜೊತೆಗೆ ಅಗತ್ಯ ಸ್ವತ್ಛತಾ ಸಿಬ್ಬಂದಿ ನಿಯೋಜಿಸಲಾಗಿತ್ತು. ಅಲ್ಲಲ್ಲಿ ಸಿದ್ಧ ಶೌಚಾಲಯಗಳ ವ್ಯವಸ್ಥೆಯನ್ನೂ ಕಲ್ಪಿಸಲಾಗಿತ್ತು. ಪಾರ್ಕಿಂಗ್‌ ವ್ಯವಸ್ಥೆ: ಸಾರಿಗೆ ಹಾಗೂ ಖಾಸಗಿ ವಾಹನಗಳಿಗೆ ನಿಗದಿತ ಪಾರ್ಕಿಂಗ್‌ ವ್ಯವಸ್ಥೆ ಕಲ್ಲಿಸಲಾಗಿತ್ತು.

ಸಿಎಂ ಆಗಮನ ಹಾಗೂ ನಿರ್ಗಮನ ವೇಳೆ ಸಂಚಾರದಲ್ಲಿ ಅಸ್ತವ್ಯಸ್ತ ಆಗಿದ್ದು ಬಿಟ್ಟರೆ ಉಳಿದಂತೆ ಅಚ್ಚುಕಟ್ಟಾಗಿತ್ತು. ಕೃಷಿ ವಿವಿಯಿಂದ ಹಿಡಿದು ಬೆಳಗಾವಿ ಹೋಗುವ ಬೈಪಾಸ್‌ವರೆಗೂ ಸೇರಿದಂತೆ ಟೋಲ್‌ಗೇಟ್‌ ಬಳಿಯ ಜಾಗದಲ್ಲೂ ಸಾರಿಗೆ ಬಸ್‌ಗಳನ್ನು ಪಾರ್ಕಿಂಗ್‌ ಮಾಡಲಾಗಿತ್ತು.  

ಟಾಪ್ ನ್ಯೂಸ್

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

8

Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು

Successful Operation: ಅಪಘಾತದಲ್ಲಿ ಎದೆಗೆ ಹೊಕ್ಕ ಪೈಪ್‌-ಯುವಕನಿಗೆ ಮರುಜನ್ಮ

Successful Operation: ಅಪಘಾತದಲ್ಲಿ ಎದೆಗೆ ಹೊಕ್ಕ ಪೈಪ್‌-ಯುವಕನಿಗೆ ಮರುಜನ್ಮ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

5-belthanagdy

Belthanagdy:ಹಿರಿಯ ಸಹಕಾರಿ,ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸೇವಾಸಂಘದ ಅಧ್ಯಕ್ಷ ನಿಧನ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ

Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.