ರಾಯನಾಳದಲ್ಲೇ ಜಯದೇವ ಆಸ್ಪತ್ರೆ

ಕುಷ್ಠರೋಗ ಆಸ್ಪತ್ರೆ ಜಾಗದಲ್ಲಿ 10 ಎಕರೆ ಮಂಜೂರು

Team Udayavani, Apr 12, 2022, 11:29 AM IST

1

ಧಾರವಾಡ: ಕಿತ್ತೂರು ಕರ್ನಾಟಕ ಭಾಗದ ಬಹುನಿರೀಕ್ಷಿತ ಜಯದೇವ ಹೃದ್ರೋಗ ಚಿಕಿತ್ಸಾ ಆಸ್ಪತ್ರೆಯ ಶಾಖೆ ಸ್ಥಾಪಿಸಲು ಮುಖ್ಯಮಂತ್ರಿಗಳು ಬಜೆಟ್‌ ನಲ್ಲಿ ಘೋಷಣೆ ಮಾಡಿದ ಬೆನ್ನಲ್ಲೇ ಜಿಲ್ಲಾಡಳಿತ ಅಗತ್ಯ ಭೂಮಿ ಮಂಜೂರು ಮಾಡಿದೆ.

ಮೊಟ್ಟಮೊದಲ ಬಾರಿಗೆ ಬಜೆಟ್‌ನಲ್ಲಿ ಘೋಷಣೆಯಾದ ಉತ್ತರ ಕರ್ನಾಟಕ ಭಾಗದ ಯೋಜನೆಯೊಂದಕ್ಕೆ ಆಡಳಿತ ಯಂತ್ರ ತೀವ್ರ ಪ್ರಗತಿಯ ಸ್ವರೂಪ ನೀಡಿದಂತಾಗಿದ್ದು, ಅಂತಿಮವಾಗಿ ರಾಯನಾಳ ಗ್ರಾಮದಲ್ಲಿ ಆಸ್ಪತ್ರೆ ತಲೆ ಎತ್ತುವುದು ಪಕ್ಕಾ ಆಗಿದೆ.

2022-23ರ ರಾಜ್ಯ ಬಜೆಟ್‌ನಲ್ಲಿ 250 ಕೋಟಿ ರೂ.ಗಳನ್ನು ಮುಖ್ಯಮಂತ್ರಿಗಳು ನೀಡಿದ ಬೆನ್ನಲ್ಲೇ ಅದರ ಸ್ಥಾಪನೆ ಕೆಲಸಕ್ಕೂ ವೇಗ ಸಿಕ್ಕಿದೆ. ಹುಬ್ಬಳ್ಳಿ ಸಮೀಪದ ರಾಯನಾಳ ಗ್ರಾಮದಲ್ಲಿ ಈಗಾಗಲೇ ಅಸ್ತಿತ್ವದಲ್ಲಿದ್ದ ಕುಷ್ಠರೋಗ ಆಸ್ಪತ್ರೆಗೆ ಮೀಸಲಿದ್ದ 20 ಎಕರೆ ಜಾಗದಲ್ಲಿ 10 ಎಕರೆ ಪ್ರದೇಶವನ್ನು ಜಯದೇವ ಹೃದ್ರೋಗ ಆಸ್ಪತ್ರೆಗೆ ಮಂಜೂರಾತಿ ನೀಡಲಾಗಿದ್ದು, ಜಿಲ್ಲಾಡಳಿತ ಅಧಿಕೃತವಾಗಿ ಈ ಕುರಿತು ಸರ್ಕಾರಕ್ಕೆ ಪತ್ರ ಮತ್ತು ಅಗತ್ಯ ಕಾಗದ ಪತ್ರಗಳನ್ನು ರವಾನೆ ಮಾಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕನಸಿನ ಕೂಸಾಗಿರುವ ಹೃದ್ರೋಗ ಸಂಸ್ಥೆಯನ್ನು ಕಿಮ್ಸ್‌ ಆಸ್ಪತ್ರೆ ಆವರಣದಲ್ಲಿ ಸ್ಥಾಪಿಸಲಾಗುತ್ತದೆ ಎನ್ನುವ ಮಾತುಗಳು ಕೇಳಿ ಬರುತ್ತಿದ್ದವು. ಆದರೆ ಸಾರಿಗೆ-ಸಂಪರ್ಕ, ಸಂವಹನ ಮತ್ತು ನುರಿತ ವೈದ್ಯರ ಲಭ್ಯತೆಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವೇ ಜಯದೇವ ಹೃದ್ರೋಗ ಸಂಸ್ಥೆ ಇದ್ದರೆ ಸೂಕ್ತ ಎನ್ನುವ ಸಲಹೆಯನ್ನು ನುರಿತ ವೈದ್ಯರು ನೀಡಿದ್ದರಿಂದ ರಾಯನಾಳವನ್ನು ಅಂತಿಮಗೊಳಿಸಲಾಗಿದೆ.

25 ಸಾವಿರ ಹೃದ್ರೋಗಿಗಳು: ಪ್ರತಿವರ್ಷ ಅಂದಾಜು 25 ಸಾವಿರಕ್ಕೂ ಅಧಿಕ ಹೃದ್ರೋಗಿಗಳು ಚಿಕಿತ್ಸೆ ಅರಸಿ ಬೆಂಗಳೂರು ಜಯದೇವ ಮತ್ತು ಖಾಸಗಿ ಹೃದ್ರೋಗ ಆಸ್ಪತ್ರೆಗಳ ಕದ ತಟ್ಟುತ್ತಿದ್ದಾರೆ. ಬಡವರು ಮತ್ತು ಅನಕ್ಷರಸ್ಥರಿಗಂತೂ ಬೆಂಗಳೂರಿನ ಹೃದ್ರೋಗ ಚಿಕಿತ್ಸೆ ದೊಡ್ಡ ಹಿಂಸೆಯಾಗುತ್ತಿದ್ದು, ಚಿಕಿತ್ಸೆಗಿಂತ ಅಲ್ಲಿಗೆ ಹೋಗಿ ಬರುವುದೇ ದೊಡ್ಡ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಹೃದ್ರೋಗ ಸಂಸ್ಥೆ ಕಾಲಿಟ್ಟಿದ್ದಕ್ಕೆ ಉತ್ತರ ಕರ್ನಾಟಕ ಭಾಗದ ಬಡ ಹಾಗೂ ಮಧ್ಯಮ ವರ್ಗದ ಜನರು ಸರ್ಕಾರವನ್ನು ಅಭಿನಂದಿಸಿದ್ದಾರೆ.

ಸ್ಥಳ ಪರಿಶೀಲಿಸಿದ ಕಾರ್ಯದರ್ಶಿ: ಜಯದೇವ ಹೃದ್ರೋಗ ಸಂಸ್ಥೆ ಸ್ಥಾಪನೆ ಕುರಿತು ಆರೋಗ್ಯ ಇಲಾಖೆ ಕಾರ್ಯದರ್ಶಿ ನವೀನರಾಜ್‌ ಸಿಂಗ್‌ ಅವರು ಹಿರಿಯ ಅಧಿಕಾರಿಗಳ ಜೊತೆಗೆ ಕಳೆದ ವಾರ ರಾಯನಾಳಕ್ಕೆ ಭೇಟಿಕೊಟ್ಟು ಜಾಗ ಪರಿಶೀಲನೆ ಮಾಡಿದ್ದಾರೆ. ಈಗಾಗಲೇ ಹುಬ್ಬಳ್ಳಿ ನಗರದ ಹೊರವಲಯ ಸಾಕಷ್ಟು ಬೆಳೆದಿದ್ದು, ರಾಯನಾಳ ಆಸ್ಪತ್ರೆಗೆ ಸೂಕ್ತ ಎನ್ನುವ ಅಭಿಮತಕ್ಕೆ ಅಧಿಕಾರಿಗಳೂ ಬಂದಿದ್ದಾರೆ ಎನ್ನಲಾಗಿದೆ.

ನಗರ ಮಧ್ಯದಲ್ಲಿರುವ ಕಿಮ್ಸ್‌ ಆಸ್ಪತ್ರೆಯ ಆವರಣದಲ್ಲಿ ಈಗಾಗಲೇ ಹೈಟೆಕ್‌ ಆಸ್ಪತ್ರೆ ಗುತ್ಛಗಳೇ ತಲೆ ಎತ್ತುತ್ತಿದ್ದು, ಹೃದ್ರೋಗ ಆಸ್ಪತ್ರೆಗೆ ಸಾಕಷ್ಟು ಸ್ಥಳಾವಕಾಶ ಮತ್ತು ಪ್ರತ್ಯೇಕ ವ್ಯವಸ್ಥೆ ಸೂಕ್ತ ಎನ್ನುವ ಅಭಿಮತದ ಹಿನ್ನೆಲೆಯಲ್ಲಿ ರಾಯನಾಳಕ್ಕೆ ಅಧಿಕಾರಿ ವರ್ಗವೂ ಹಸಿರು ನಿಶಾನೆ ತೋರಿಸಿದೆ ಎನ್ನಲಾಗಿದೆ.

ಸ್ವಂತ ಕಟ್ಟಡಕ್ಕೂ ಮುನ್ನವೇ ಆಸ್ಪತ್ರೆ? ಜಯದೇವ ಹೃದ್ರೋಗ ಸಂಸ್ಥೆ ಸ್ವಂತ ಕಟ್ಟಡ ನಿರ್ಮಾಣಕ್ಕೂ ಮುನ್ನವೇ ಜಿಲ್ಲೆಯಲ್ಲಿ ತಾತ್ಕಾಲಿಕವಾಗಿ ಎಲ್ಲಿಯಾದರೂ ಆಸ್ಪತ್ರೆ ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ. ಸಣ್ಣ ಪ್ರಮಾಣದ ಯಂತ್ರೋಪಕರಣ ಮತ್ತು ವೈದ್ಯರ ತಂಡ ರಚಿಸಿ ತಾತ್ಕಾಲಿಕವಾಗಿ ವೈದ್ಯಕೀಯ ಸೇವೆ ಆರಂಭಿಸುವ ಚಿಂತನೆ ನಡೆದಿದ್ದು, ಈ ಕುರಿತು ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ಜಿಲ್ಲಾಡಳಿತದ ಜೊತೆ ಸಂಪರ್ಕ ನಡೆಸಿದ್ದಾರೆ ಎನ್ನಲಾಗಿದೆ. ಐಐಟಿಯನ್ನು ವಾಲ್ಮಿ ಕಟ್ಟಡದಲ್ಲಿ ನಡೆಸಿದ ಮಾದರಿಯಲ್ಲೇ ಹೃದ್ರೋಗ ಸಂಸ್ಥೆಯನ್ನು ಶೀಘ್ರವೇ ಆರಂಭಿಸಬೇಕು ಎನ್ನುವ ಒತ್ತಾಯ ಕೇಳಿಬರುತ್ತಿದೆ.

ಷಟ್ಪಥ ಕಾಮಗಾರಿಗೂ ಚುರುಕು: ಹು-ಧಾ ಬೈಪಾಸ್‌ ಷಟ್ಪಥ ಕಾಮಗಾರಿಯೂ ತೀವ್ರತೆ ಪಡೆದುಕೊಂಡಿದ್ದು ಈ ಸಂಬಂಧದ ಭೂ ಸ್ವಾಧೀನ ಪ್ರಕ್ರಿಯೆ ಚುರುಕು ಪಡೆದುಕೊಂಡಿದೆ. ಈಗಾಗಲೇ 67 ಎಕರೆ ಭೂಮಿಯನ್ನು ಹೆದ್ದಾರಿ ನಿರ್ಮಾಣಕ್ಕೆ ಜಿಲ್ಲಾಡಳಿತ ಭೂ ಸ್ವಾಧೀನ ಮಾಡಿಕೊಂಡಿದ್ದು, ಕಾಮಗಾರಿಯೂ ಶೀಘ್ರವೇ ಆರಂಭಗೊಳ್ಳುವ ಸಾಧ್ಯತೆ ಇದೆ. ಅಷ್ಟೇಯಲ್ಲ, 2024ರ ಒಳಗಾಗಿಯೇ ಹೆದ್ದಾರಿ ನಿರ್ಮಾಣ ಕಾಮಗಾರಿಯನ್ನೂ ಮುಕ್ತಾಯಗೊಳಿಸುವ ಯೋಜನೆ ರೂಪಿಸಲಾಗಿದೆ. ಈ ಹೆದ್ದಾರಿ ಹೃದ್ರೋಗ ಆಸ್ಪತ್ರೆ ಸಂಪರ್ಕವನ್ನು ಇನ್ನಷ್ಟು ಸರಳಗೊಳಿಸಲಿದೆ.

ಅವಳಿನಗರ ಮಧ್ಯದ ಜಾಗದ ಹುಡುಕಾಟ: ಜಯದೇವ ಹೃದ್ರೋಗ ಸಂಸ್ಥೆಯನ್ನು ಅವಳಿನಗರದ ಯಾವ ಭಾಗದಲ್ಲಿ ಸ್ಥಾಪನೆ ಮಾಡಬೇಕು ಎನ್ನುವ ಕುರಿತು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಸಲಹೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಮೊದಲು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯಲ್ಲಿ ಸ್ಥಾಪಿಸುವ ಚಿಂತನೆ ಇತ್ತು. ನಂತರ ಅವಳಿನಗರ ಮಧ್ಯದ ಜಾಗದ ಹುಡುಕಾಟ ನಡೆಯಿತು. ಕೊನೆಗೆ ರಾಯಾಪುರ, ತಡಸಿನಕೊಪ್ಪ, ಇಟ್ಟಿಗಟ್ಟಿ, ತಾರಿಹಾಳ, ಚಿಕ್ಕಮಲ್ಲಿಗವಾಡ ಸೇರಿ ಬೈಪಾಸ್‌ ಅಕ್ಕಪಕ್ಕದ ಅನೇಕ ಜಾಗಗಳನ್ನು ಗುರುತಿಸಲಾಗಿತ್ತು. ಇದೀಗ ರಾಯನಾಳ ಸೂಕ್ತ ಸ್ಥಳ ಎಂದು ನಿಗದಿ ಮಾಡಲಾಗಿದೆ.

ಉತ್ತರ ಕರ್ನಾಟಕ ಭಾಗದ ಹೃದ್ರೋಗಿಗಳಿಗೆ ಆದಷ್ಟು ಬೇಗ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಬಜೆಟ್‌ನಲ್ಲಿ ಘೋಷಣೆಯಾದ ಬೆನ್ನಲ್ಲೇ ಆಸ್ಪತ್ರೆ ನಿರ್ಮಾಣದ ಕೆಲಸ ತೀವ್ರಗತಿಯಲ್ಲಿ ಸಾಗಿದೆ. ಎರಡು ವರ್ಷದ ಅವಧಿಯಲ್ಲಿ ಕಟ್ಟಡ ಕಾಮಗಾರಿಗಳನ್ನು ಮುಗಿಸುವ ಗುರಿ ಹೊಂದಲಾಗಿದೆ. –ಆರೋಗ್ಯ ಇಲಾಖೆ ಹಿರಿಯ ಅಧಿಕಾರಿ, ಬೆಂಗಳೂರು

ರಾಯನಾಳ ಸೇರಿದಂತೆ ಜಯದೇವ ಆಸ್ಪತ್ರೆ ಸ್ಥಾಪನೆಗೆ ಅನೇಕ ಜಾಗಗಳನ್ನು ಗುರುತಿಸಲಾಗಿದೆ. ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಜನರ ಅಭಿಮತ ಪಡೆದು ಅಂತಿಮಗೊಳಿಸಲಾಗುವುದು. ಈ ಕುರಿತು ಶೀಘ್ರವೇ ಸರ್ಕಾರದ ಆದೇಶ ಹೊರಬೀಳಲಿದೆ.  –ನಿತೇಶ ಪಾಟೀಲ್‌, ಜಿಲ್ಲಾಧಿಕಾರಿ

-ಬಸವರಾಜ ಹೊಂಗಲ್‌

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.