ಜೋಗುರ ಬರಹಗಳು ಅನನ್ಯ: ಡಾ| ಸಿದ್ಧಲಿಂಗ


Team Udayavani, Sep 9, 2019, 9:27 AM IST

huballi-tdy-1

ಧಾರವಾಡ: ಆಲೂರು ವೆಂಕಟರಾವ್‌ ಭವನದಲ್ಲಿ ಹಮ್ಮಿಕೊಂಡಿದ್ದ ಡಾ| ಎಸ್‌.ಬಿ. ಜೋಗುರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಡಾ| ಸಿದ್ಧಲಿಂಗ ಪಟ್ಟಣಶೆಟ್ಟಿ ಮಾತನಾಡಿದರು.

ಧಾರವಾಡ: ಪ್ರಗತಿಪರ ಚಿಂತಕರಾಗಿದ್ದ ಡಾ| ಎಸ್‌. ಬಿ. ಜೋಗುರ ಅವರ ನೇರ ನುಡಿ, ನುಡಿದಂತೆ ನಡೆದ ಜೀವನ ಇಂದಿನ ಕಾಲಘಟ್ಟದಲ್ಲಿ ಅತ್ಯಂತ ಕಷ್ಟಕರವಾದದ್ದು. ಅದಕ್ಕಾಗಿ ಜೋಗುರ ಎತ್ತರದಲ್ಲಿ ನಿಲ್ಲುತ್ತಾರೆ ಎಂದು ಹಿರಿಯ ಸಾಹಿತಿ ಡಾ| ಸಿದ್ಧಲಿಂಗ ಪಟ್ಟಣಶೆಟ್ಟಿ ಹೇಳಿದರು.

ಆಲೂರು ವೆಂಕಟರಾವ್‌ ಭವನದಲ್ಲಿ ಹಮ್ಮಿಕೊಂಡಿದ್ದ ಡಾ| ಎಸ್‌.ಬಿ. ಜೋಗುರ ಶ್ರದ್ಧಾಂಜಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜೋಗುರ ಅವರ ಜೀವನದಲ್ಲಿ ಅನುಭವಿಸಿದ ನೋವು-ನಲಿವುಗಳನ್ನೇ ಅವರ ಕಥೆಗಳ, ಬರಹಗಳ ರೂಪದಲ್ಲಿ ಕಾಣಬಹುದು. ಜೀವನವನ್ನು ಲೇಖನಗಳಿಗೆ ಇಳಿಸಿದ ಅವರ ಬರಹಗಳು ಅನನ್ಯವಾದವುಗಳು. ಅವರ ಅಪೂರ್ಣಗೊಂಡ ಲೇಖನಗಳನ್ನು ಪೂರ್ಣಗೊಳಿಸುವುದು ಮತ್ತು ಅವರು ಎತ್ತಿ ಹಿಡಿದ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಮಾತ್ರ ಅವರಿಗೆ ನಿಜವಾದ ಶ್ರದ್ಧಾಂಜಲಿ ಸಲ್ಲಿಸಿದಂತಾಗುತ್ತದೆ ಎಂದರು.

ಜೋಗುರ ಅವರ ಮುಖಗಳನ್ನು ಕಂಡ ಅವರ ಗೆಳೆಯರು, ಹಿತೈಷಿಗಳು ಸೇರಿದಂತೆ ವಿದ್ಯಾರ್ಥಿಗಳು ಲೇಖನಗಳನ್ನು ಬರೆದು ಒಂದು ಪುಸ್ತಕ ಪ್ರಕಟಿಸಬೇಕು. ಜೋಗುರ ಅವರ ಪತ್ನಿ ಶೀತಲ ಅವರು 200 ಪುಟದ ಜೋಗುರ ಅವರ ಜೀವನ ಕುರಿತು ಸಮಗ್ರ ಪುಸ್ತಕ ಹೊರಗೆ ತರಬೇಕು ಎಂದು ಹೇಳಿದರು.

ಡಾ| ಶ್ಯಾಮಸುಂದರ ಬಿದರಕುಂದಿ ಮಾತನಾಡಿ, ಜೋಗುರ ಅವರಂತಹ ಸಾಹಿತಿಗಳು ಕೇವಲ ಪುಸ್ತಕದಲ್ಲಿ ಮಾತ್ರವಲ್ಲ ಬದುಕಿನಲ್ಲಿ ಜೀವಂತವಾಗಿರುತ್ತಾರೆ. ಜೋಗುರ ಅವರ ಶಕ್ತಿ, ವಿಶಿಷ್ಟತೆಯನ್ನು ಪ್ರಚುರಪಡಿಸುವ ಕೆಲಸವನ್ನು ಮುಂದೆಯೂ ಮಾಡುವಂತಾಗಬೇಕು. ಈ ನಿಟ್ಟಿನಲ್ಲಿ ಬರುವ ಅಕ್ಟೋಬರ್‌ನಲ್ಲಿ ವಿಶ್ವ ಶಿಕ್ಷಕರ ದಿನದ ಸಂದರ್ಭದಲ್ಲಿ ಅವರ ಕೃತಿಗಳು, ಬದುಕು, ಸಾಮಾಜಿಕ ಬದ್ಧತೆ, ಒಟ್ಟು ಅವರ ವ್ಯಕ್ತಿತ್ವದ ಕುರಿತು ಒಂದು ದಿನದ ವಿಚಾರ ಸಂಕಿರಣವನ್ನು ಗೆಳೆಯರ ಬಳಗದಿಂದ ಆಯೋಜಿಸುವ ಚಿಂತನೆಯಿದೆ ಎಂದರು.

ಶಂಕರ ಹಲಗತ್ತಿ ಮಾತನಾಡಿ, ಧಾರವಾಡದ ಯಾವುದೇ ಪ್ರಗತಿಪರ ಹೋರಾಟಕ್ಕೆ ಬೆಂಬಲವಾಗಿ ಜೋಗುರ ನಿಲ್ಲುತ್ತಿದ್ದರು. ಅವರ ಸಾಹಿತ್ಯ, ಬದುಕು ನಿರಂತರವಾಗಿ ಚರ್ಚೆಯಾಗಬೇಕು. ಆ ಮೂಲಕ ಈ ಪೀಳಿಗೆಗೆ ಅವರ ವಿಚಾರಗಳನ್ನು ಕೊಂಡೊಯ್ಯೋಣ ಎಂದು ಹೇಳಿದರು.

ಜೋಗುರ ಅವರ ಪತ್ನಿ ಶೀತಲ ಮಾತನಾಡಿ, ಜೋಗುರ ಅವರ ವೈಚಾರಿಕ ಚಿಂತನೆಗಳು, ಆದರ್ಶಗಳು ಮತ್ತು ಅವರ ಆಶಯಗಳನ್ನು ಜೀವಂತವಾಗಿಡುವ ಜೊತೆಗೆ ಅಪೂರ್ಣಗೊಂಡಿರುವ ಅವರ ಸಾಮಾಜಿಕ ಬದ್ಧತೆಯ ಕಾರ್ಯಗಳನ್ನು ಪೂರ್ಣಗೊಳಿಸುವ ಹೊಣೆ ಈಗ ನನ್ನ ಮೇಲಿದೆ. ಅದಕ್ಕೆ ನಿಮ್ಮೆಲ್ಲರ ಸಹಕಾರ ಬೇಕು ಎಂದರು.

ರಾಮಾಂಜನಪ್ಪ ಆಲ್ದಳ್ಳಿ, ಡಾ| ವೆಂಕನಗೌಡ ಪಾಟೀಲ, ಎಸಿ ಮಹಮದ್‌ ಜುಬೇರ, ಡಾ| ಪ್ರಜ್ಞಾ ಮತ್ತಿಹಳ್ಳಿ, ವೆಂಕಟೇಶ ಮಾಚಕನೂರ, ರಾಘವೇಂದ್ರ ಪಾಟೀಲ, ಎಂ.ಬಿ. ಕೊಳವಿ, ಎಸ್‌.ಎಸ್‌. ಹಿರೇಮಠ, ಹೇಮಾ ಪಟ್ಟಣಶೆಟ್ಟಿ, ಬಿ.ಐ. ಇಳಿಗೇರ, ಡಾ| ಜಿ.ಕೆ. ಬಡಿಗೇರ, ಡಾ| ತಲ್ಲೂರ, ಎಚ್.ಜಿ. ದೇಸಾಯಿ ಮೊದಲಾದವರು ಜೋಗುರ ಅವರೊಂದಿಗಿನ ತಮ್ಮ ಒಡನಾಟ ಹಂಚಿಕೊಂಡರು. ಕಲಾವಿದ ಬಹುರೂಪಿ ಚಿತ್ರಿಸಿದ ಜೋಗುರ ಭಾವಚಿತ್ರ ಗಮನ ಸೆಳೆಯಿತು.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.