‘ಮತ’ ಪಟ್ಟಿಗೆ ಸೇರ್ಪಡೆ ಎಲ್ಲರ ಹೊಣೆ

•ವಿಶೇಷ ಪರಿಷ್ಕರಣೆ-2020 ಕಾರ್ಯಕ್ರಮ• ಮತದಾನಕ್ಕೆ ಸಹಕಾರಿ•ಮತದಾರರ ಯಾದಿ ದಾಖಲೆ ಪರಿಶೀಲಿಸಿ

Team Udayavani, Sep 2, 2019, 9:41 AM IST

huballi-tdy-3

ಧಾರವಾಡ: ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಮತದಾರರ ಯಾದಿಯ ವಿಶೇಷ ಪರಿಷ್ಕರಣೆ-2020 ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಈಶಪ್ಪ ಭೂತೆ ಉದ್ಘಾಟಿಸಿದರು.

ಧಾರವಾಡ: ಪ್ರಜಾಪ್ರಭುತ್ವ ವ್ಯವಸ್ಥೆ ಬಲಿಷ್ಠಗೊಳಿಸುವಲ್ಲಿ ಎಲ್ಲ ಅರ್ಹ ಮತದಾರರು ಸಾರ್ವತ್ರಿಕ ಚುನಾವಣೆಗಳಲ್ಲಿ ಭಾಗವಹಿಸಿ, ತಪ್ಪದೆ ಮತದಾನ ಮಾಡಬೇಕು. ಅದಕ್ಕಾಗಿ ಅರ್ಹ ಪ್ರತಿ ಮತದಾರನ ಹೆಸರು, ವಿವರಗಳನ್ನು ಮತದಾರ ಪಟ್ಟಿಗೆ ಸೇರ್ಪಡೆಗೊಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಈಶಪ್ಪ ಭೂತೆ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಮತದಾರರ ಯಾದಿಯ ವಿಶೇಷ ಪರಿಷ್ಕರಣೆ-2020 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕೇಂದ್ರ ಚುನಾವಣಾ ಆಯೋಗ ಮತದಾರ ಸ್ನೇಹಿಯಾಗಿರುವ ಅನೇಕ ಕಾರ್ಯಕ್ರಮಗಳನ್ನು ಜಾರಿ ಮಾಡುತ್ತಿದೆ. ವಿಶೇಷ ಪರಿಷ್ಕರಣೆ ಕಾರ್ಯಕ್ರಮದ ಮೂಲಕ ಮತದಾರ ಮತದಾರರ ಯಾದಿಯಲ್ಲಿ ದಾಖಲಾಗಿರುವ ತನ್ನ ಮಾಹಿತಿ ಪರಿಶೀಲಿಸಿ ಸರಿಪಡಿಸಿಕೊಳ್ಳುವ ಅವಕಾಶ ನೀಡಿದೆ. ಇದು ಉತ್ತಮ ಕಾರ್ಯ. ಜಿಲ್ಲಾಡಳಿತ ಈ ಕಾರ್ಯಕ್ರಮ ಯಶಸ್ವಿಯಾಗುವಂತೆ ಕ್ರಮ ಜರುಗಿಸಿ, ಸಂಬಂಧಿತ ಎಲ್ಲ ಅಧಿಕಾರಿಗಳು ಸಕ್ರಿಯವಾಗಿ ತೊಡಗಿಕೊಳ್ಳುವಂತೆ ಮಾಡಬೇಕು ಎಂದರು.

ಜಿಲ್ಲಾ ಸ್ವೀಪ್‌ ಯೋಜನೆ ಮುಖ್ಯಸ್ಥರಾದ ಜಿಪಂ ಸಿಇಒ ಡಾ| ಬಿ.ಸಿ. ಸತೀಶ ಮಾತನಾಡಿ, ಕಳೆದ ಲೋಕಸಭೆಯ ಚುನಾವಣೆಯಲ್ಲಿ ಮತದಾನದ ಸಂಖ್ಯೆ ಹೆಚ್ಚಳವಾಗಿದೆ. ಈ ಕಾರ್ಯಕ್ರಮದಲ್ಲಿ ಮತದಾರರ ಸೇರ್ಪಡೆ ಗುರಿಯನ್ನು ಪೂರ್ಣವಾಗಿ ಪ್ರಗತಿ ಸಾಧಿಸಲಾಗುವುದು. ಸರಕಾರಿ ನೌಕರರು ತಮ್ಮ ಹಾಗೂ ತಮ್ಮ ಕುಟುಂಬದ ಅರ್ಹ ಸದಸ್ಯರ ಮಾಹಿತಿಯನ್ನು ಮತದಾರರ ಯಾದಿಯಲ್ಲಿ ಸೇರ್ಪಡೆ ಮಾಡಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದರು.

ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ ಮಾತನಾಡಿ, ಸಾರ್ವಜನಿಕರಿಗೆ ಚುನಾವಣಾ ಆಯೋಗ ನೀಡಿರುವ ಸಹಾಯವಾಣಿ, ಆ್ಯಪ್‌ ಮತ್ತು ಆನ್‌ಲೈನ್‌ ನೀಡಿರುವ ಅವಕಾಶ ಬಳಸಿಕೊಂಡು ಪ್ರತಿಯೊಬ್ಬರು ಮತದಾರರ ಯಾದಿಗೆ ತಮ್ಮ ಹೆಸರು, ವಿವರ ಸೇರಿಸುವಂತೆ ಪ್ರೇರೇಪಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಚುನಾವಣಾಧಿಕಾರಿಯಾದ ಡಿಸಿ ದೀಪಾ ಚೋಳನ್‌ ಮಾತನಾಡಿ, ಮತದಾರರ ಪಟ್ಟಿಯಿಂದ ಯಾವುದಾದರೂ ಹೆಸರು ಕೈಬಿಡುವ ಮೊದಲು ಮತದಾರರಿಗೆ ಇದೇ ಮೊದಲ ಬಾರಿಗೆ ಅವರ ಹೆಸರು ತೆಗೆದು ಹಾಕಿರುವ ಕುರಿತು ಏಳು ದಿನಗಳ ಕಾಲಾವಧಿಯ ನೋಟಿಸ್‌ ನೀಡಲಾಗುತ್ತದೆ ಅಥವಾ ಅವರ ಮನೆಗೆ ನೋಟಿಸ್‌ ಪ್ರತಿ ಅಂಟಿಸಲಾಗುತ್ತದೆ ಎಂದರು.

ಹಿರಿಯ ಸಿವಿಲ್ ನ್ಯಾಯಾಧಿಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್‌.ಎಸ್‌. ಚಿನ್ನಣ್ಣವರ ಮಾತನಾಡಿದರು. ಪ್ರೋಬೆಷನರಿ ಐಎಎಸ್‌ ಅಧಿಕಾರಿ ಆಕೃತಿ ಬನ್ಸಾಲ್, ಅಪರ ಡಿಸಿ ಇಬ್ರಾಹಿಂ ಮೈಗೂರ, ಹಿರಿಯ ಸಿವಿಲ್ ನ್ಯಾಯಾಧಿಧೀಶ ಚಿಣ್ಣನ್ನವರ ಆರ್‌.ಎಸ್‌., ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ಉಪ ಅರಣ್ಯ ಸಂರಕ್ಷಣಾಧಿಕಾರಿ ಮಹೇಶಕುಮಾರ, ಉಪವಿಭಾಗಾಧಿಕಾರಿ ಮಹಮ್ಮದ ಜುಬೇರ ಇದ್ದರು.

ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ ಮಾತನಾಡಿದರು. ಡಿವೈಎಸ್‌ಪಿ ರಾಮನಗೌಡ ಹಟ್ಟಿ, ಜಿ.ಪಂ. ಉಪಕಾರ್ಯದರ್ಶಿ ಎಸ್‌.ಜಿ. ಕೊರವರ, ಎಸಿಪಿ ಎಂ.ಎನ್‌. ರುದ್ರಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಜಾನನ ಮನ್ನಿಕೇರಿ, ಧಾರವಾಡ ತಹಶೀಲ್ದಾರ್‌ ಪ್ರಕಾಶ ಕುದರಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ಧಾರವಾಡ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮತದಾರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಪಂಚಾಯತ್‌ ಆವರಣದಲ್ಲಿ ಜಿಲ್ಲಾಡಳಿತದಿಂದ ಸ್ವಾಪಿಸಿರುವ ಕೇಂದ್ರವನ್ನು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಈಶಪ್ಪ ಭೂತೆ ಹಾಗೂ ಡಿಸಿ ದೀಪಾ ಚೋಳನ್‌ ಅವರು ಉದ್ಘಾಟಿಸಿ, ಸ್ವತಃ ತಮ್ಮ ವಿವರಗಳನ್ನು ಆನ್‌ಲೈನ್‌ ಮೂಲಕ ಪರಿಶೀಲಿಸಿ, ಖಚಿತ ಪಡಿಸಿಕೊಂಡರು. ಉಳಿದಂತೆ ಅಧಿಕಾರಿಗಳು, ಸಿಬ್ಬಂದಿಗಳು ಸರತಿಯಲ್ಲಿ ನಿಂತು ತಮ್ಮ ವಿವರ ಪರಿಶೀಲಿಸಿದರು.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.