4ರಿಂದ ಕಲಘಟಗಿ ಜಾತ್ರೆ ಸಡಗರ

ಹೊರಬಿಡಿಕೆ ಸಂಪ್ರದಾಯ ಸಂಪನ್ನಒಂಭತ್ತು ದಿನ ದೇವಿಯರ ವೈಭವ

Team Udayavani, Feb 28, 2020, 1:35 PM IST

28-Febraury-15

ಕಲಘಟಗಿ: ಸಹ್ಯಾದ್ರಿ ಬೆಟ್ಟಗಳ ಅಂಚಿನಲ್ಲಿರುವ ಕಲಘಟಗಿ ಪಟ್ಟಣ ತನ್ನದೆಯಾದ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಇಲ್ಲಿನ ದಪ್ಪ ಅಕ್ಕಿ, ಇಟ್ಟಿಗೆ, ಕಟ್ಟಿಗೆ ತೊಟ್ಟಿಲು, ಪ್ರತಿ ಮೂರು ವರ್ಷಗಳಿಗೊಮ್ಮೆ ಜರುಗುವ ಗ್ರಾಮದೇವಿ ಜಾತ್ರೆ ದೇಶ-ವಿದೇಶಗಳಲ್ಲೂ ಪ್ರಸಿದ್ಧಿ ಹೊಂದಿವೆ.

ಮಾ. 4ರಿಂದ 12ರ ವರೆಗೆ ಒಂಭತ್ತು ದಿನಗಳ ಕಾಲ ಬಹು ವಿಜೃಂಭಣೆಯಿಂದ ಜರುಗಲಿರುವ ಪಟ್ಟಣದ ಗ್ರಾಮದೇವಿಯರ ಜಾತ್ರೆ ಹಲವಾರು ವಿಧಿ-ವಿಧಾನಗಳನ್ನು ಒಳಗೊಂಡಿದೆ. ಜಾತ್ರೆಯ ನಿಬಂಧನೆಯಂತೆ ಪಟ್ಟಣ ಹಾಗೂ ಸುತ್ತಲಿನ ಗ್ರಾಮಗಳಾದ ಮಾಚಾಪುರ, ದಾಸ್ತಿಕೊಪ್ಪ, ಬೆಂಡಿಗೇರಿ, ಕಲಕುಂಡಿ ಗ್ರಾಮಗಳಲ್ಲಿ ಹೊರಬಿಡಿಕೆ ಎಂಬ ವಿಶಿಷ್ಟ ಸಂಪ್ರದಾಯ ಆಚರಿಸಲಾಗುತ್ತಿದೆ.

ಪ್ರತಿ ಜಾತ್ರೆಯ ಪೂರ್ವದ ಐದು ವಾರವನ್ನು ಜಾತ್ರಾ ಸಂಪ್ರದಾಯದಂತೆ ಮನೆ ಹಾಗೂ ಗ್ರಾಮದಿಂದ ಹೊರಬಿಡಿಕೆ ವಾರವನ್ನಾಗಿ ಆಚರಿಸಲಾಗುತ್ತದೆ. ಕಳೆದ ಫೆ. 11ರ ಮಂಗಳವಾರ, 14ರ ಶುಕ್ರವಾರ, 18ರ ಮಂಗಳವಾರ, 21ರ ಶುಕ್ರವಾರ ಮತ್ತು 25ರ ಮಂಗಳವಾರವನ್ನು ಈಗಾಗಲೇ ಆಚರಿಸಲಾಗಿದೆ.

ಹೊರಬಿಡಿಕೆಯ ದಿನ ನಸುಕಿನಲ್ಲಿ ಎದ್ದು ಮನೆ ಅಂಗಳವನ್ನು ಸ್ವಚ್ಛಗೊಳಿಸಿ, ರಂಗವಲ್ಲಿ ಹಾಕಿ, ಮನೆ ಬಾಗಿಲಿಗೆ ತಳಿರು ತೋರಣ ಕಟ್ಟಿ, ಸ್ನಾನ, ಪೂಜೆ ಸಲ್ಲಿಸಿ, ನಂತರ ಅಡುಗೆ ಮಾಡಿಕೊಂಡು, ಕುಡಿಯುವ ನೀರು, ಕುಳಿತುಕೊಳ್ಳಲು ಬೇಕಾದ ಚಾಪೆ, ಹಾಸಿಗೆ, ಮುಂತಾದ ಸಾಮಗ್ರಿಗಳೊಂದಿಗೆ ಚಿಕ್ಕ ಮಕ್ಕಳಿಂದ ಹಿಡಿದು ವಯೋವೃದ್ಧರೆಲ್ಲ ಪಟ್ಟಣ ಹಾಗೂ ಗ್ರಾಮಗಳ ಹೊರ ವಲಯದಲ್ಲಿರುವ ತೋಟ, ಹೊಲ, ಮಠ ಹಾಗೂ ಮಂದಿರಗಳಿಗೆ ತೆರಳಿ ಇಡಿ ದಿನವನ್ನು ಅಲ್ಲಿಯೇ ಕಳೆಯುತ್ತಾರೆ.

ಮನೆಯಿಂದ ಹೋಗುವಾಗ ಬಾಗಿಲಿಗೆ ಹಾಗೂ ನೀರಿನ ತಂಬಿಗೆಯಲ್ಲಿ ಬೇವಿನ ತಪ್ಪಲನ್ನು ಇಟ್ಟು ಮನೆಗೆ ಬೀಗವನ್ನು ಹಾಕಿ ಹೋಗಿರುತ್ತಾರೆ. ಮಧ್ಯಾಹ್ನ ಗ್ರಾಮ ದೇವತೆಯರು ಮನೆ ಮತ್ತು ಊರಲ್ಲಿ ಸುತ್ತುವರು ಎಂಬ ನಂಬಿಕೆ ಅಚಲವಾಗಿದೆ. ಪಟ್ಟಣದಲ್ಲಿ ಅಂಗಡಿ ಮುಂಗಟ್ಟುಗಳವರೂ ಆಚರಣೆಯಲ್ಲಿ ತೊಡಗಿಸಿಕೊಳ್ಳುತ್ತಾರೆ. ಸಂಜೆ ಆಗುತ್ತಿದ್ದಂತೆ ತಮ್ಮ ಮನೆ ಕಡೆ ತಿರುಗಿ ಬಂದು ಮನೆ ಬಾಗಿಲಿನ ಮುಂದೆ ಇಟ್ಟ ತಂಬಿಗೆಯಲ್ಲಿನ ನೀರನ್ನು ಬೇವಿನ ತಪ್ಪಲಿನಿಂದ ಮನೆ ತುಂಬ ಸಿಂಪಡಿಸಿ ಕೈ ಮುಗಿದು ಒಳಗೆ ಹೋಗುವ ವಾಡಿಕೆ ಇದೆ. ಈ ಆಚರಣೆಯನ್ನು ಹಿಂದುಗಳು ಸೇರಿದಂತೆ ಎಲ್ಲ ಧರ್ಮೀಯರು ಅನುಸರಿಸುತ್ತಿರುವುದು ಸೌಹಾರ್ದತೆ ಹಾಗೂ ಭಾವೈಕ್ಯತೆಯ ಕೊಡುಗೆಯಾಗಿದೆ.

ಶ್ರೀ ದ್ಯಾಮವ್ವ, ಶ್ರೀ ದುರ್ಗವ್ವ ಜಾತ್ರಾ ಮಹೋತ್ಸವದ ಯಶಸ್ಸಿಗೆ ದೇವಸ್ಥಾನದ ಟ್ರಸ್ಟ್‌ ಕಮಿಟಿಯ ಅಧ್ಯಕ್ಷ ಸಿ.ಎಂ. ನಿಂಬಣ್ಣವರ, ಎಂ.ಐ. ಕಟ್ಟಿ, ಪಿ.ಜಿ. ಬಾಳಿಕಾಯಿ, ಶ್ರೀಕಾಂತ ಕಟಾವಕರ, ರಾಕೇಶ ಅಳಗವಾಡಿ, ಶಿವಕುಮಾರ ಖಂಡೇಕರ, ನಿತಿನ ಶೆವಡೆ, ಅಮೃತ ಅಂಗಡಿ ಹಾಗೂ ಜಾತ್ರಾ ಸಮಿತಿ ಅಧ್ಯಕ್ಷ ಸುಧೀರ ಬೋಳಾರ, ಪ್ರಮೋದ ಪಾಲ್ಕರ, ಗಂಗಪ್ಪ ಗೌಳಿ, ಬಾಳು ಖಾನಾಪುರ, ಶಶಿಧರ ನಿಂಬಣ್ಣವರ, ಮಂಜುನಾಥ ಸಾಬಣ್ಣವರ, ಅನಿಲ ರಂಗೊಳ್ಳಿ ಪಟ್ಟಣದ ಸಮಸ್ತ ನಾಗರಿಕರ ಸಹಕಾರದೊಂದಿಗೆ ಹಗಲಿರುಳು ಶ್ರಮಿಸಿ ಎಲ್ಲ ತಯಾರಿಗಳನ್ನು ನಡೆಸುತ್ತಿದ್ದಾರೆ. ಹಿಂದಿಗಿಂತಲೂ ವಿಶಿಷ್ಟ ಹಾಗೂ ವೈಭವಪೂರಿತವಾಗಿ ಆಚರಿಸಲು ಕಂಕಣಬದ್ಧರಾಗಿ ಕಾರ್ಯೋನ್ಮುಖರಾಗಿದ್ದಾರೆ.

ಪ್ರಭಾಕರ ನಾಯಕ

ಟಾಪ್ ನ್ಯೂಸ್

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

ShreeKanth

Meet Friends: ಧಾರವಾಡದ ಹಳೆಯ ಗೆಳೆಯರ ಭೇಟಿಯಾದ ತೆಲುಗು ನಟ ಶ್ರೀಕಾಂತ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.