Karnataka Polls ನನಗೆ ಟಿಕೆಟ್ ಕೈತಪ್ಪಲು ಬಿ.ಎಲ್ ಸಂತೋಷ್ ಕಾರಣ: ಜಗದೀಶ್ ಶೆಟ್ಟರ್ ಆರೋಪ


Team Udayavani, Apr 18, 2023, 1:29 PM IST

Karnataka Polls ನನಗೆ ಟಿಕೆಟ್ ಕೈತಪ್ಪಲು ಬಿ.ಎಲ್ ಸಂತೋಷ್ ಕಾರಣ: ಜಗದೀಶ್ ಶೆಟ್ಟರ್ ಆರೋಪ

ಹುಬ್ಬಳ್ಳಿ: ನನಗೆ ಟಿಕೆಟ್ ತಪ್ಪಲು, ರಾಜ್ಯದಲ್ಲಿ ಬಿಜೆಪಿ ಬಲಹೀನದತ್ತ ಸಾಗಲು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಗಂಭೀರ ಆರೋಪ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂತೋಷ ತಮ್ಮ ಮಾನಸ ಪುತ್ರ ಮಹೇಶ ಟೆಂಗಿನಕಾಯಿ ಅವರಿಗೆ ಟಿಕೆಟ್ ಕೊಡಿಸಲು ಹಿರಿಯ ನಾಯಕನಾದ ನನಗೆ ಟಿಕೆಟ್ ತಪ್ಪುವಂತೆ ಮಾಡಿದರು. ರಾಜ್ಯ ಕೋರ್ ಕಮಿಟಿ, ಕೇಂದ್ರ ಸ್ಕ್ರೀನಿಂಗ್ ಕಮಿಟಿನಲ್ಲೂ ನನ್ನ ಹೆಸರೇ ಶಿಫಾರಸ್ಸು ಆಗಿತ್ತು. ಸಂಸದೀಯ ಮಂಡಳಿ ಸಭೆಯಲ್ಲಿ ನನ್ನ ಹೆಸರು ಮಾಯವಾಗಿದೆ ಎಂದರು.

ಇದಕ್ಕೆ ಮುಖ್ಯ ಕಾರಣ ಬಿ.ಎಲ್. ಸಂತೋಷ ನೇರ ಕಾರಣ, ತಮ್ಮ ಮಾನಸ ಪುತ್ರನ ಮೇಲಿನ ಮಮಕಾರಕ್ಕಾಗಿ ನನ್ನಂತಹ ಹಿರಿಯ ನಾಯಕನನ್ನು ಬಲಿ ಕೊಡಲಾಗಿದೆ ಎಂದರು.

ತಳಮಟ್ಟದಿಂದ ಪಕ್ಷ ಕಟ್ಟಿದ, ಆರು ಬಾರಿ ಸತತ ಗೆಲುವು ಸಾಧಿಸಿದ ನನ್ನನ್ನು ಪಕ್ಷದಲ್ಲಿ ಮೂಲೆಗುಂಪು ಮಾಡುವ ಕುತಂತ್ರದಲ್ಲಿ ಬಿ.ಎಲ್.ಸಂತೋಷ ಪಾತ್ರ ಪ್ರಮುಖವಾಗಿದ್ದು, ರಾಜ್ಯದ ಕೆಲ ನಾಯಕರು ಇದಕ್ಕೆ ಸಾಥ್ ನೀಡಿದ್ದಾರೆ ಎಂದು ಆರೋಪಿಸಿದರು.

2018ರ ಚುನಾವಣೆಯಲ್ಲಿ ಇದೇ ಬಿ.ಎಲ್.ಸಂತೋಷ ಕಲಘಟಗಿ ಕ್ಷೇತ್ರಕ್ಕೆ ತಮ್ಮ ಮಾನಸಪುತ್ರ ಮಹೇಶ ಟೆಂಗಿನಕಾಯಿಗೆ ಟಿಕೆಟ್ ಕೊಡಿಸಿದ್ದರು. ಅಲ್ಲಿ ಸಿ.ಎಂ.ನಿಂಬಣ್ಣವರಿಗೆ ಟಿಕೆಟ್ ನೀಡಬೇಕೆಂಬ ನಮ್ಮೆಲ್ಲರ ಅನಿಸಿಕೆ ತಿರಸ್ಕರಿಸಿದ್ದರು. ಅಂತಿಮವಾಗಿ ಸಿ ಫಾರಂ ನೀಡಿ ನಿಂಬಣ್ಣವರ ಸ್ಪರ್ಧಿಸಿದ್ದರು. ನನ್ನ ಕ್ಷೇತ್ರದಲ್ಲಿ ಕಳೆದ ಆರು ತಿಂಗಳಿನಿಂದ ಟೆಂಗಿನಕಾಯಿ ರಹಸ್ಯ ಪ್ರಚಾರ ಕೈಗೊಂಡಿದ್ದು, ಈ ಬಾರಿ ನನಗೆ ಟಿಕೆಟ್ ಖಚಿತ ಎಂದು ಹೇಳಿಕೊಂಡಿದ್ದಾರೆ. ಹಿರಿಯ ನಾಯಕನಾದ ನನಗೆ ಟಿಕೆಟ್ ತಪ್ಪದು ಎಂಬ ವಿಶ್ವಾಸ ನನ್ನದಾಗಿತ್ತು. ಇವರ ಕುತಂತ್ರ ಅರಿಯದಾದೆ ಎಂದರು.

ಇದನ್ನೂ ಓದಿ:ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ನನಗೆ ಟಿಕೆಟ್ ತಪ್ಪುವ ವೇಳೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಿಎಂ ಬಸವರಾಜ ಬೊಮ್ಮಾಯಿ ಗಟ್ಟಿಯಾಗಿ ಮನವರಿಕೆ ಮಾಡಿಕೊಡಬೇಕಾಗಿತ್ತು. ಜೋಶಿರವರೆ ನಾಲ್ಕು ಬಾರಿ ನಿಮ್ಮನ್ನು ಸಂಸದರಾಗಿಸಲು ನಾನು ಪಟ್ಟ ಶ್ರಮ ನಿಮಗೆ ನೆನಪಾಗಲಿಲ್ಲವೆ, ನಾನು ಸ್ಪೀಕರ್ ಆಗಿದ್ದಾಗ ನನ್ನ ಭಾವಚಿತ್ರ ಬಳಸಲು ಬರುವುದಿಲ್ಲವೆಂದು ನನ್ನ ಪತ್ನಿ ಹೆಸರನ್ನು ಶಿಲ್ಪಾ ಜಗದೀಶ ಶೆಟ್ಟರ ಎಂದು ದೊಡ್ಡ ಅಕ್ಷರದಲ್ಲಿ ಕರಪತ್ರದಲ್ಲಿ ಹಾಕಿಸಿದ್ದು, ಪ್ರಚಾರಕ್ಕೆ ಅವರನ್ನು ಕರೆದುಕೊಂಡು ಹೋಗಿದ್ದಾದರು ನೆನಪಾಗಲಿಲ್ಲವೆ. ಸದಸ ಪ್ರಧಾನಿ ಬಳಿ ಇರುವ ನೀವು ಪ್ರಧಾನಿ ಮೋದಿಯವರು, ಅಮಿತ್ ಶಾ ಅವರಿಗೆ ಮನವರಿಕೆ ಮಾಡಿಕೊಡಬೇಕಾಗಿತ್ತಲ್ಲ ಎಂದರು.

ಬಿ.ಎಲ್.ಸಂತೋಷ ಕಾರಣದಿಂದಾಗಿ ರಾಜ್ಯದೆಲ್ಲಡೆ ಬಿಜೆಪಿಯಲ್ಲಿ ಬೆಂಕಿ ಬೀಳುವಂತಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲ್ ಅವರು ಸಂತೋಷ ಹೇಳಿದಷ್ಟು ಮಾತ್ರ ಮಾತನಾಡುತ್ತಾರೆ ಎಂದರು.

ತಮ್ಮ ಮೇಲೆ ಐಟಿ, ಇಡಿ ದಾಳಿ ನಡೆಯಲುಬಹುದು. ನನ್ನದೇನು ಸಾವಿರಾರು ಕೋಟಿ ಆಸ್ತಿ ಇಲ್ಲ .ಇರುವ ಆಸ್ತಿ ಕಾನೂನು ಚೌಕಟ್ಟಿನಲ್ಲಿಯೇ ಇದೆ ಎಂದರು.

ಬಿ.ಎಲ್.ಸಂತೋಷ ಇನ್ನು ಕೆಲವರು ಮಾಡಿದ ಅಪಮಾನ, ಮಾನಸಿಕ ಹಿಂಸೆಯಿಂದ ಸ್ವಾಭಿಮಾನ, ಗೌರವಕ್ಕಾಗಿ ಕಾಂಗ್ರೆಸ್ ಗೆ ಹೋಗಿದ್ದೇನೆ ಹೊರತು ಅಧಿಕಾರದ ಲಾಲಸೆಗಾಗಿ ಅಲ್ಲ ಎಂದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.