ಆರೋಗ್ಯ ವಿಚಾರಕ್ಕೆ ಪ್ರಚಾರ ಕೊರತೆ


Team Udayavani, Apr 7, 2017, 1:11 PM IST

hub1.jpg

ಹುಬ್ಬಳ್ಳಿ: ಭಾರತದಲ್ಲಿ ಉತ್ಪನ್ನಗಳಿಗೆ ಪ್ರಚಾರ ಸಿಗುವಷ್ಟು ಆರೋಗ್ಯ ರಕ್ಷಣೆ ಕುರಿತ ವಿಷಯಗಳಿಗೆ ಪ್ರಚಾರ ಸಿಗದಿರುವುದು ದುರದೃಷ್ಟಕರ ಸಂಗತಿ ಎಂದು ಇಂಡೋಸಿಸ್‌ ಲೈಫ್ ಸಾಯನ್ಸ್‌ ಸಂಸ್ಥೆಯ ಚೇರನ್‌ ಹಾಗೂ ಅಂತಾರಾಷ್ಟ್ರೀಯ ಆಹಾರ ತಜ್ಞ ಡಾ| ಎಸ್‌. ಎಚ್‌.ಕುಲಕರ್ಣಿ ಹೇಳಿದರು. 

ಗುರುವಾರ ವಕೀಲರ ಸಂಘದ ಸಭಾಭವನದಲ್ಲಿ ಆರೋಗ್ಯ ಚಿಂತನ ಕುರಿತು ಅವರು ಉಪನ್ಯಾಸ ನೀಡಿದರು.  ಬೇರೆ ದೇಶಗಳಲ್ಲಿ ಉತ್ಪನ್ನಗಳೊಂದಿಗೆ ಆರೋಗ್ಯ ರಕ್ಷಣೆ ಕುರಿತು ಪ್ರಚಾರ ಮಾಡಲಾಗುತ್ತದೆ. ಆದರೆ ನಮ್ಮಲ್ಲಿ ಸೆಲೆಬ್ರಿಟಿಗಳನ್ನು ಬಳಸಿಕೊಂಡು ಕಂಪನಿಗಳು  ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುತ್ತವೆ. 

ಆರೋಗ್ಯ ರಕ್ಷಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ವಿರಳ ಎಂದರು. ರೋಗ ಬಂದ ನಂತರ ವೈದ್ಯರ ಬಳಿಗೆ ಎಡತಾಕುವುದಕ್ಕಿಂತ ರೋಗ ಬರದಂತೆ ತಡೆಯುವುದು ಹೇಗೆ ಎಂಬುದರ ಬಗ್ಗೆ ತಿಳಿಯುವುದು ಅವಶ್ಯ. ಆಹಾರ, ನೀರು, ವ್ಯಾಯಾಮ, ಜೀವನಶೈಲಿಯಿಂದ ಹೆಚ್ಚಿನ ರೋಗಗಳು ಬರದಂತೆ ತಡೆಯಬಹುದು ಎಂದರು.

ಪ್ರತಿದಿನ ನಾವು ಸೇವಿಸುವ ಆಹಾರದ ಮೂಲಕ ರಾಸಾಯನಿಕ ನಮ್ಮ ದೇಹಕ್ಕೆ ಸೇರುವುದರಿಂದ ಜೀವಕೋಶಗಳ ಸಾಮರ್ಥ್ಯ ಕಡಿಮೆಯಾಗುತ್ತಿದೆ. ಇದು ರೋಗಗಳಿಗೆ ಕಾರಣವಾಗಿದೆ.  ಎಲ್ಲ ರೋಗಗಳಿಗೂ ಜೀವಕೋಶಗಳು ಹಾಳಾಗುವುದೇ ಕಾರಣ ಎಂದರು. ಅಡುಗೆ ಅನಿಲ ಬಳಸಿ ಅಡುಗೆ ಮಾಡುವುದರಿಂದ ಹಲವು ರೋಗಗಳು ಬರುವ ಸಾಧ್ಯತೆ ಇರುತ್ತದೆ.

ಅಡುಗೆ ಅನಿಲದಲ್ಲಿರುವ ಕೆಲ ರಾಸಾಯನಿಕಗಳಿಂದ ಹೆಚ್ಚು ಹೊತ್ತು ಅಡುಗೆ ಮನೆಯಲ್ಲಿ ಕಳೆಯುವ ಮಹಿಳೆಯರಲ್ಲಿ 40-45 ವರ್ಷಕ್ಕೆ ಸಂದು ನೋವು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ ಎಂದರು. ಭಾರತದಲ್ಲಿ ಆರೋಗ್ಯಕ್ಕೆ ಪೂರಕವಾಗುವ ಹಲವಾರು ಉತ್ಪನ್ನಗಳು ಸಿದ್ಧವಾಗುತ್ತಿದ್ದರೂ ಅವುಗಳನ್ನು ವಿದೇಶಗಳಿಗೆ ರಫ್ತು ಮಾಡುವುದೇ ಅಧಿಕ.

ಭಾರತದಲ್ಲಿ ಉತ್ಪಾದಿಸುವ ಚಹಾಗಳಲ್ಲಿ ಶೇ.15ರಷ್ಟು ಚಹಾಗಳಲ್ಲಿ ಆರೋಗ್ಯ ಪೂರಕ ಅಂಶಗಳಿವೆ. ಆದರೆ ಅದು ಭಾರತದಲ್ಲಿ ಅದರ ಮಾರಾಟ ಅತಿ ಕಡಿಮೆ. ದೇಹಕ್ಕೆ ಮಾರಕವಾಗುವ ಶೇ.85 ಚಹಾ ಮಾರುಕಟ್ಟೆಯಲ್ಲಿ ಬಿಕರಿಯಾಗುತ್ತಿದೆ ಎಂದರು. ಜೀವಕೋಶಗಳು ಸಶಕ್ತವಾಗಿರಲು ಪ್ರತಿಯೊಂದು ಮನೆಗಳಲ್ಲಿ ಅಡುಗೆ ವೇಳಾಪಟ್ಟಿ ಹಾಕಿಕೊಳ್ಳಬೇಕು.

ಒಂದೇ ರೀತಿಯ ತರಕಾರಿ, ಧಾನ್ಯ ಬಳಕೆ ಮಾಡುವುದಕ್ಕಿಂತ 2-3 ರೀತಿಯ ತರಕಾರಿ, ಸೊಪ್ಪು, ಧಾನ್ಯ, ಹಣ್ಣು ಬಳಕೆ ಮಾಡುವುದು ಒಳಿತು. ನೋನಿ ಹಣ್ಣಿನ ಜ್ಯೂಸ್‌ ಬಳಕೆ ಮಾಡುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದರು. ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಅಶೋಕ ಅಣವೇಕರ, ಸಿ.ವಿ.ಮಲ್ಲಾಪುರ ವೇದಿಕೆ ಮೇಲಿದ್ದರು.   

ಟಾಪ್ ನ್ಯೂಸ್

HDK-1

Political: ರಾಜ್ಯದಲ್ಲಿ ಕೈಗಾರಿಕಾಭಿವೃದ್ಧಿಗೆ ಕಾಂಗ್ರೆಸ್‌ ಸರ್ಕಾರದಿಂದ ಅಸಹಕಾರ: ಎಚ್‌ಡಿಕೆ

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

1-JMM

Jharkhand; ಸೀಟು ಹಂಚಿಕೆ ಪ್ರಕಟಿಸಿದ ಎನ್ ಡಿಎ: ಬಿಜೆಪಿಗೆ 68 ಸ್ಥಾನ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

1-rss

Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

HDK-1

Political: ರಾಜ್ಯದಲ್ಲಿ ಕೈಗಾರಿಕಾಭಿವೃದ್ಧಿಗೆ ಕಾಂಗ್ರೆಸ್‌ ಸರ್ಕಾರದಿಂದ ಅಸಹಕಾರ: ಎಚ್‌ಡಿಕೆ

1-dcc

Udupi;ವಿಧಾನಪರಿಷತ್‌ ಉಪಚುನಾವಣೆ: ನಿಷೇಧಾಜ್ಞೆ ಜಾರಿ

man-a

Siddapura: ಪುತ್ರನ ಮನೆ ಸಾಲದಿಂದ ತಂದೆ ಆತ್ಮಹ*ತ್ಯೆ

police

Bangla ಅಕ್ರಮ ವಲಸೆ : ಸಂತೆಕಟ್ಟೆಯಲ್ಲಿ ಮತ್ತೋರ್ವನ ಬಂಧನ

ACT

Kinnigoli: ವಿದ್ಯಾರ್ಥಿನಿಗೆ ಕಿರುಕುಳ; ಆರೋಪಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.