ಸೇವೆಯೇ ಬದುಕಿನ ಪ್ರಧಾನ ಭಾಗವಾಗಿರಲಿ; ಸ್ನೇಹ ಸಮ್ಮಿಲನ

ಕಾಲೇಜಿನ ನಿವೃತ್ತ ಪ್ರಾಧ್ಯಾಪಕರೆಲ್ಲರನ್ನು ವಿದ್ಯಾರ್ಥಿಗಳು ಗೌರವಿಸಿದರು.

Team Udayavani, Jan 23, 2023, 4:23 PM IST

ಸೇವೆಯೇ ಬದುಕಿನ ಪ್ರಧಾನ ಭಾಗವಾಗಿರಲಿ; ಸ್ನೇಹ ಸಮ್ಮಿಲನ

ಧಾರವಾಡ: ಬದುಕು ಇರುವುದು ಸೇವೆ ಮಾಡಲಿಕ್ಕೆ ಹೊರತು ಸೇವೆ ಮಾಡಿಸಿಕೊಳ್ಳಲು ಅಲ್ಲ. ಹೀಗಾಗಿ ಜೀವನದಲ್ಲಿ ಎಷ್ಟೇ ಉನ್ನತಿ ಹೊಂದಿದರೂ ಸೇವೆಯನ್ನೇ ಪ್ರಧಾನ ಕಾಯಕವನ್ನಾಗಿ ಮಾಡಿಕೊಳ್ಳಬೇಕು ಎಂದು ಕಿಟೆಲ್‌ ಕಲಾ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯ ಪ್ರೊ| ಎಸ್‌.ಎಸ್‌. ಅಂಟೀನ್‌ ಹೇಳಿದರು.

ಕಿಟೆಲ್‌ ಕಾಲೇಜಿನಲ್ಲಿ 2000ನೇ ಸಾಲಿನ ಪದವಿ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಗುರುವಂದನೆ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪದವಿ ಮುಗಿಸಿ 22 ವರ್ಷಗಳ ನಂತರ ನೀವು ಸೇರಿದ್ದೀರಿ. ಓದುವಾಗ ಕೂಡ ನಮ್ಮ ಕಾಲೇಜಿನಲ್ಲಿ ನಾವು ನಿಮಗೆ ಸಮಾಜ ಸೇವೆ ಬಗ್ಗೆ ಬೋಧಿಸಿದ್ದೆವು. ಬಹಳಷ್ಟು ವಿದ್ಯಾರ್ಥಿಗಳು ತಮ್ಮ ವೃತ್ತಿ ಬದುಕಿನ ಜತೆಗೆ ಬಡವರಿಗೆ, ದೀನ ದಲಿತರ ಸೇವೆ ಮಾಡುತ್ತಿದ್ದೀರಿ.

ವಿದ್ಯಾರ್ಥಿ ಜೀವನದಲ್ಲಿ ನೀವು ಕಲಿತ ಉತ್ತಮ ಗುಣಗಳು ಇಂದು ಸಮಾಜಕ್ಕೆ ಅನುಕೂಲವಾಗುತ್ತಿವೆ. ಒಬ್ಬ ಗುರುವಿಗೆ ಇದಕ್ಕಿಂತಲೂ ಸಂತೋಷದ ಸಂಗತಿ ಬೇರೊಂದಿಲ್ಲ. ಮುಂದೆಯೂ ನಿಮ್ಮ ಬದುಕು ಹೀಗೆ ಸಾಗಲಿ ಎಂದು ಹಾರೈಸಿದರು.

ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಹಿರಿಯ ಸಾಹಿತಿ ಡಾ| ಜಿ.ಎಂ. ಹೆಗಡೆ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾರ್ಜನೆ ನಂತರ ಬದುಕಿನಲ್ಲಿ ಸಾಧನೆ ಮಾಡಿ ಎಂದಷ್ಟೆ ಗುರುಗಳು ಹೇಳಿರುತ್ತೇವೆ. ಅದನ್ನು ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಮತ್ತು ಉತ್ತಮ ಬದುಕು ರೂಪಿಸಿಕೊಳ್ಳುವ ಹೊಣೆ ಅವರದಾಗಿರುತ್ತದೆ. ಕಿಟೆಲ್‌ ಕಾಲೇಜಿನ 2000ನೇ ಸಾಲಿನಲ್ಲಿ ಪದವಿ ಮುಗಿಸಿದ ವಿದ್ಯಾರ್ಥಿಗಳು ಇಂದು ಸಮಾಜದ ಎಲ್ಲಾ ಕ್ಷೇತ್ರದಲ್ಲಿಯು ಮುಂಚೂಣಿಯಲ್ಲಿದ್ದಾರೆ. ಇದನ್ನು ನೋಡಲು ಸಂತೋಷವಾಗುತ್ತದೆ ಎಂದರು.

ಕಿಟೆಲ್‌ ಕಾಲೇಜಿನ ಪ್ರಾಚಾರ್ಯರಾದ ಡಾ| ರೇಖಾ ಜೊಗೂಳ ಮಾತನಾಡಿ, ಕಲಿತ ಕಾಲೇಜನ್ನು ಮರೆಯದೇ ಸ್ಮರಿಸುವ ವಿದ್ಯಾರ್ಥಿಗಳಿಗೆ ಸದಾ ಯಶಸ್ಸು ಇದ್ದೇ ಇರುತ್ತದೆ. 2000ನೇ ಸಾಲಿನ ವಿದ್ಯಾರ್ಥಿಗಳು ಇದೇ ಪ್ರಥಮ ಬಾರಿಗೆ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಂಡು ಇತರರಿಗೆ ಮಾದರಿ ಕಾರ್ಯ ಮಾಡಿದ್ದೀರಿ. ಇದೇ ರೀತಿ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘವನ್ನು ಕಟ್ಟಿ ನೋಂದಣಿ ಮಾಡಿಸಿ ಅದರ ಮೂಲಕ ಇನ್ನಷ್ಟು ಉತ್ತಮ ಕಾರ್ಯಗಳನ್ನು ನೋಡುವಂತಾದರೆ ಅನುಕೂಲವಾಗಲಿದೆ ಎಂದರು. ಕಾಲೇಜಿನ ನಿವೃತ್ತ ಪ್ರಾಧ್ಯಾಪಕರೆಲ್ಲರನ್ನು ವಿದ್ಯಾರ್ಥಿಗಳು ಗೌರವಿಸಿದರು.ಹಳೆಯ ವಿದ್ಯಾರ್ಥಿ ಸುನೀಲ್‌ ಗುಡಿ ಪ್ರಾಸ್ತಾವಿಕ ಮಾತನಾಡಿದರು. ಹಿರಿಯ ಪತ್ರಕರ್ತ ಡಾ| ಬಸವರಾಜ್‌ ಹೊಂಗಲ್‌ ನಿರೂಪಿಸಿದರು. ತುಳಜಾ ಕುಲಕರ್ಣಿ ಪ್ರಾರ್ಥಿಸಿದರು. ಶರೀಫ್‌ ರೋಣ ವಂದಿಸಿದರು.

ಕಾಲೇಜು ಆವರಣದಲ್ಲಿ ಹಬ್ಬದ ವಾತಾವರಣ
ಕಿಟೆಲ್‌ ಕಾಲೇಜು ಆವರಣ ಬಾಳೆದಿಂಡು, ತಳಿರು ತೋರಣ, ಬಗೆಬಗೆಯ ಹೂವುಗಳಿಂದ ಅಲಂಕೃತಗೊಂಡಿತ್ತು. ಹಳೇ ವಿದ್ಯಾರ್ಥಿಗಳು ತಲೆಗೆ ಪೇಟಾ ಸುತ್ತಿ ಕೈಯಲ್ಲಿ ಹೂ ಹಿಡಿದು ತಮಗೆ ಕಲಿಸಿದ ಗುರುಗಳ ಸ್ವಾಗತಕ್ಕೆ ಕಾಯುತ್ತಿದ್ದರು. ಬಂದ ಗುರುಗಳ ಪಾದಗಳಿಗೆ ನಮಸ್ಕರಿಸಿ ಅವರಿಗೆ ತಮ್ಮ ಪರಿಚಯ ಮಾಡಿಕೊಂಡು ಕಾಲೇಜು ದಿನಗಳಲ್ಲಿ ತಾವು ಮಾಡಿದ ಸಾಧನೆಗಳನ್ನು ಮೆಲಕು ಹಾಕಿದರು. ಬೆಳಗ್ಗೆಯಿಂದ ಸಂಜೆವರೆಗೂ ತಾವು ಓದಿದ್ದ ವಿವಿಧ ಕ್ಲಾಸ್‌ ರೂಮ್‌ಗಳಲ್ಲಿ ಕುಳಿತು ಪಾಠ ಕೇಳಿ ಖುಷಿಪಟ್ಟರು. ಗ್ರಂಥಾಲಯದಲ್ಲಿ ಕುಳಿತು ಓದಿನ ನೆನಪು ಮೆಲಕು ಹಾಕಿದರು. ಭಕ್ಷ್ಯ ಭೋಜನವನ್ನು ಖುದ್ದು ತಮ್ಮ ಗುರುಗಳಿಗೆ ತಾವೇ ತಿನ್ನಿಸಿ ಖುಷಿಪಟ್ಟರು. ಇಡೀ ದಿನ ಕಾಲೇಜಿನ ಆವರಣ 90ರ ದಶಕದ ನೆನಪುಗಳಿಗೆ ಮರಳುವಂತೆ ಮಾಡಿದ್ದರು.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.