Hubli; ಕೋರ್ಟ್ ಆದೇಶಕ್ಕೆ ತಲೆಬಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಪ್ರಮೋದ ಮುತಾಲಿಕ್
Team Udayavani, Sep 26, 2024, 2:17 PM IST
ಹುಬ್ಬಳ್ಳಿ: ಕೋರ್ಟ್ನಲ್ಲಿ ಯಾರ ವಿರುದ್ಧವೂ ಷಡ್ಯಂತರ ಮಾಡುವುದಕ್ಕೆ ಆಗುವುದಿಲ್ಲ. ಹೀಗಾಗಿ ಸಿದ್ದರಾಮಯ್ಯ ಅವರು ತಮ್ಮ ಮೇಲಿನ ಆರೋಪದ ಬಗ್ಗೆ ಕೋರ್ಟ್ ತೀರ್ಪಿನ ನಂತರವಾದರೂ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ (Pramod Muthalik) ಆಗ್ರಹಿಸಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ಭಾರಿ ಸದ್ದು ಮಾಡಿತ್ತು. ಈ ಕುರಿತು ದೀರ್ಘವಾಗಿ ಚರ್ಚೆಯಾಗಿತ್ತು. ಆದರೆ, ಇದು ಬಿಜೆಪಿಯ ಷಡ್ಯಂತ್ರವೆಂದು ಸಿದ್ದರಾಮಯ್ಯ, ಕಾಂಗ್ರೆಸ್ನವರು ಹೇಳಿದ್ದರು. ಅಹಿಂದ ನಾಯಕ ಎಂದು ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ರಾಜ್ಯಪಾಲರ ಮೇಲೂ ಆರೋಪ ಮಾಡಿದ್ದರು. ಆದರೀಗ ರಾಜ್ಯಪಾಲರಾಗಲಿ, ಬಿಜೆಪಿಯಾಗಲಿ ಆದೇಶ ಮಾಡಿಲ್ಲ. ಕೋರ್ಟ್ ಆದೇಶಿಸಿದೆ. ಅದರ ಪ್ರಕಾರ ಸಿದ್ದರಾಮಯ್ಯ ನಡೆದುಕೊಳ್ಳಬೇಕು. ಕೋರ್ಟ್ನಲ್ಲಿ ವಾದ-ವಿವಾದವಾದ ನಂತರ ಆದೇಶ ಬಂದಿದೆ. ಈ ಆದೇಶಕ್ಕೆ ನೀವು ತಲೆಬಾಗಿ ರಾಜೀನಾಮೆ ಕೊಡುವ ಬಗ್ಗೆ ನಿರ್ಧರಿಸಬೇಕು ಎಂದರು.
ತಿರುಪತಿ ಪ್ರಸಾದದ ವಿಚಾರದಲ್ಲಿ ಜಗನ್ ಮೋಹನ ರೆಡ್ಡಿ ತಪ್ಪು ಮಾಡಿದ್ದಾರೆ. ಅವರಿಗೆ ತಿರುಪತಿ ತಿಮ್ಮಪ್ಪನ ಶಾಪ ತಟ್ಟುತ್ತದೆ. ಮೊದಲ ಶಾಪವಾಗಿ ಅವರ ಅಧಿಕಾರ ಹೋಗಿದೆ. ತಿಮ್ಮಪ್ಪನ ಪ್ರಸಾದದಲ್ಲಿ ಕೊಬ್ಬು ಸೇರಿಸಿದ್ದು ಅಕ್ಷಮ್ಯ ಅಪರಾಧ. ಅಂಥವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ಸಾಧ್ಯತೆ
MUDA Scam: ರಾಜೀನಾಮೆ ಪ್ರಶ್ನೆಯೇ ಇಲ್ಲ: ಮತ್ತೆ ಸಿಎಂ ಸಿದ್ದರಾಮಯ್ಯ ಖಡಕ್ ನುಡಿ
MUDA Scam: ಸಿಎಂ ರಾಜೀನಾಮೆಗೆ ಕೋಳಿವಾಡ ಆಗ್ರಹ; ಕಾಂಗ್ರೆಸ್ ನಾಯಕರ ಭಿನ್ನರಾಗ
Cabinet Decision: ನಿರೀಕ್ಷೆಯಂತೆ ಕಸ್ತೂರಿ ರಂಗನ್ ವರದಿ ತಿರಸ್ಕಾರ
MUDA Scam: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ನಾಯಕರ ಪಟ್ಟು ಬಿಗಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.