ಕಾವ್ಯ ಓದುಗನ ಹೃದಯ ಶ್ರೀಮಂತಿಕೆ ಹೆಚ್ಚಿಸಲಿ


Team Udayavani, Jul 1, 2017, 3:16 PM IST

hub5.jpg

ಧಾರವಾಡ: ಜೀವನದಲ್ಲಿ ಆಶಾವಾದದ ಪ್ರತಿಬಿಂಬವಾಗಿ ಬರೆದ ಕಾವ್ಯಗಳು ಹೃದಯಕ್ಕೆ ತಟ್ಟಿ ಓದುಗನಲ್ಲಿ ಹೃದಯ ಶ್ರೀಮಂತಿಕೆಯನ್ನು ಉಂಟು ಮಾಡಬೇಕು ಎಂದು ದಾಂಡೇಲಿಯ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಪ್ರೊ| ನಾಗವೇಣಿ ಗಾಂವಕರ ಹೇಳಿದರು. 

ಕರ್ನಾಟಕ ವಿದ್ಯಾವರ್ಧಕ ಸಂಘದ ಜಾನಪದ ಮಂಟಪ ಆಯೋಜಿಸಿದ್ದ ಶಿಕ್ಷಕ, ಕವಿ ಶಿವಕುಮಾರ ಬ. ಜಮದಂಡಿ ಅವರ “ಹೂ’ ಕವನ ಸಂಕಲನ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರೇಮದ ಬೆಳಕು ಒಡಲೊಳಗೆ ಜ್ವಲಿಸುವಂತೆ ಪ್ರಕೃತಿಯ ಆರಾಧನೆ ಮಾಡುವಂತಹ ತನ್ಮಯತೆಗೆ ಸಾಕ್ಷಿ ಪ್ರಜ್ಞೆಯಾಗಿರುವ ಜಮದಂಡಿಯವರ ಕಾವ್ಯ ಪ್ರಯೋಗ ಅದ್ಭುತವಾಗಿದೆ.

ಮನುಷ್ಯನ ಸಾರ್ಥಕ ಬದುಕು ಹೇಗಿರಬೇಕೆಂಬುದನ್ನು ಮನೋಜ್ಞವಾಗಿ ಓದುಗರ ಮನಮುಟ್ಟುವಂತೆ ರಚಿಸಿದ್ದು ಶ್ಲಾಘನೀಯ ಎಂದರು. ಅಧ್ಯಕ್ಷತೆ ವಹಿಸಿದ್ದ ಸಾಹಿತಿ ರುದ್ರಣ್ಣ ಚಿಲುಮಿ  ಮಾತನಾಡಿ, ಇಂದಿನ ಸಂಕೀರ್ಣ ಸಮಾಜದಲ್ಲಿ ಜಾಗತೀಕರಣದ ಪ್ರಭಾವ ಹಾಗೂ ಅಂತರ್ಜಾಲದ ಮಹಿಮೆಯಿಂದ ಯುವ ಜನಾಂಗದಲ್ಲಿ ಸಾಹಿತ್ಯ ರಚನೆಯ ಕೊರತೆಯಾಗಿದ್ದು ವಿಷಾದನೀಯ. 

ಕವಿ ಬರೆದ ಕವಿತೆಗಳನ್ನು ಓದಿದರೆ ಮನಸು ಅರಳುವಂತಾಗಬೇಕೇ ವಿನಃ ನರಳುವಂತಾಗಬಾರದು. ಶಿವಕುಮಾರ ಜಮದಂಡಿಯವರು ಜೀವನದಲ್ಲಿ ನೋವುಂಡು ನಗುವಿನಿಂದ ಕಾವ್ಯ ಬರೆದು ಗುರು ಸ್ಮರಣೆ ಮಾಡಿದ ಸಾತ್ವಿಕ ಮನೋಭಾವನೆಯ ಸರಳ ಸಜ್ಜನಿಕೆಯ ಸಾಧಕರಾಗಿದ್ದಾರೆ ಎಂದರು. ಜಮದಂಡಿಯವರ ಮಾತಾ-ಪಿತೃಗಳಾದ ಬಸವರಾಜ ಜಮದಂಡಿ ಹಾಗೂ ಅನ್ನಪೂರ್ಣಮ್ಮನವರು ಕೃತಿ ಬಿಡುಗಡೆ ಮಾಡಿದರು. 

ನಿಂಗಣ್ಣ ಕುಂಟಿ, ಡಾ| ರಾಜಶೇಖರ ಜಮದಂಡಿ, ಪ್ರಕಾಶ ಅಂಗಡಿ, ಲಕ್ಷ್ಮಣ ಬಸ್ತವಾಡ, ದಯಾನಂದ ಬಣಕಾರ, ಆನಂದ ಸಿದ್ದಲಿಂಗಯ್ಯ ಅಳಿಮಟ್ಟಿ, ರವಿ ಜಿ. ದೇವಣ್ಣ, ನಾಗರಾಜ ಕೊಲ್ಲೂರಿ, ರವಿ ಭೋವಿ, ಎಂ.ಎಸ್‌. ನರೇಗಲ್‌ ಇದ್ದರು. ಗುರು ಹಿರೇಮಠ ಸ್ವಾಗತಿಸಿ, ನಿರೂಪಿಸಿದರು. ವೀರಣ್ಣ ಒಡ್ಡೀನ ವಂದಿಸಿದರು.

ಟಾಪ್ ನ್ಯೂಸ್

1-a-modiii

Taken-for-granted ಸಂಬಂಧಗಳಲ್ಲಿ ಭಾರತಕ್ಕೆ ನಂಬಿಕೆ ಇಲ್ಲ: ಪ್ರಧಾನಿ ಮೋದಿ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

Ram-Naidu

Hoax call: ಬೆದರಿಕೆ ಹಾಕುವ ದುಷ್ಕರ್ಮಿಗಳ ವಿಮಾನಯಾನವನ್ನೇ ನಿರ್ಬಂಧಿಸಲು ನಿಯಮ: ಸಚಿವ

Vimana 2

Kochi airport; ಹುಸಿ ಬಾಂಬ್ ಕರೆ ಮಾಡಿದ ಪ್ರಯಾಣಿಕ ವಶಕ್ಕೆ

rain

Chikkamagaluru; ಭಾರೀ ಮಳೆ ಸಾಧ್ಯತೆ: ಸಾರ್ವಜನಿಕರು, ಪ್ರವಾಸಿಗರಿಗೆ ಎಚ್ಚರಿಕೆ

Recipe: ಭಿನ್ನ ರುಚಿಯ ದೋಸೆ ತಿನ್ನಬೇಕು ಅನ್ನಿಸಿದ್ರೆ ಈ ತರ ದೋಸೆ ಟ್ರೈ ಮಾಡಿ

Recipe: ಭಿನ್ನ ರುಚಿಯ ದೋಸೆ ತಿನ್ನಬೇಕು ಅನ್ನಿಸಿದ್ರೆ ಈ ತರ ದೋಸೆ ಟ್ರೈ ಮಾಡಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ByPolls; ಕಾಂಗ್ರೆಸ್ಸಿಗರು ನನ್ನನ್ನು ಸಂಪರ್ಕಿಸಿಲ್ಲ. ನಾಳೆ ಏನೋ ಗೊತ್ತಿಲ್ಲ..: ಯೋಗೇಶ್ವರ್

ByPolls; ಕಾಂಗ್ರೆಸ್ಸಿಗರು ನನ್ನನ್ನು ಸಂಪರ್ಕಿಸಿಲ್ಲ. ನಾಳೆ ಏನೋ ಗೊತ್ತಿಲ್ಲ..: ಯೋಗೇಶ್ವರ್

Hubli: ಕ್ಷುಲ್ಲಕ ವಿಚಾರಕ್ಕೆ ಚೂರಿ ಇರಿತ; ಓರ್ವನ ಬಂಧನ, ಉಳಿದವರಿಗೆ ಶೋಧ

Hubli: ಕ್ಷುಲ್ಲಕ ವಿಚಾರಕ್ಕೆ ಚೂರಿ ಇರಿತ; ಓರ್ವನ ಬಂಧನ, ಉಳಿದವರಿಗೆ ಶೋಧ

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

accident

Dharwad; ಲಾರಿ-ಆಟೋ ಢಿಕ್ಕಿ: ಮೂವರು ದಾರುಣ ಸಾ*ವು

ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

By election: ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-a-modiii

Taken-for-granted ಸಂಬಂಧಗಳಲ್ಲಿ ಭಾರತಕ್ಕೆ ನಂಬಿಕೆ ಇಲ್ಲ: ಪ್ರಧಾನಿ ಮೋದಿ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

1–a-sruti

Udupi; ಕೆಮ್ಮಣ್ಣು ಗಣಪತಿ ಸಹಕಾರಿ ವ್ಯಾವಸಾಯಿಕ ಸಂಘ : ಅ. 27 ರಂದು ಶತಾಭಿವಂದನಂ’ ಸಮಾರೋಪ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

Ram-Naidu

Hoax call: ಬೆದರಿಕೆ ಹಾಕುವ ದುಷ್ಕರ್ಮಿಗಳ ವಿಮಾನಯಾನವನ್ನೇ ನಿರ್ಬಂಧಿಸಲು ನಿಯಮ: ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.