ಬಯಲು ಬಹಿರ್ದೆಸೆ ಮುಕಕ್ತೆ ಜಿಲ್ಲಾಡಳಿತದ ಮಹತ್ವದ ಹೆಜ್ಜೆ!


Team Udayavani, Sep 22, 2017, 1:01 PM IST

hub5.jpg

ಹುಬ್ಬಳ್ಳಿ: ತಾಲೂಕನ್ನು ಬಯಲು ಬಹಿರ್ದೆಸೆ ಮುಕ್ತವಾಗಿಸುವ ನಿಟ್ಟಿನಲ್ಲಿ ಜಿಲ್ಲಾ ಹಾಗೂ ತಾಲೂಕು ಆಡಳಿತ ಮಹತ್ವದ ಹೆಜ್ಜೆ ಇರಿಸಿದ್ದು, ಇದಕ್ಕೆ ವಿವಿಧ ಶಿಕ್ಷಣ ಸಂಸ್ಥೆಗಳು ಕೈ ಜೋಡಿಸಿವೆ. ಅಕ್ಟೋಬರ್‌ 2ರೊಳಗೆ ತಾಲೂಕಿನಲ್ಲಿ ಸುಮಾರು 27,310 ಶೌಚಾಲಯ ನಿರ್ಮಾಣದ ಗುರಿ ಹೊಂದಲಾಗಿದ್ದು, ಇದರಲ್ಲಿ ಈಗಾಗಲೇ ಬಹುತೇಕ ಶೌಚಾಲಯಗಳ ನಿರ್ಮಾಣ ಕಾರ್ಯ ಮುಗಿದಿದೆ. 

ಹುಬ್ಬಳ್ಳಿ ತಾಲೂಕಿನ 26 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲೂ ವಿದ್ಯಾರ್ಥಿಗಳು ಕಾರ್ಯತತ್ಪರವಾಗಿದ್ದು ಅದರಲ್ಲಿ ಕೆಲವೊಂದು ಗ್ರಾಮಗಳು ಈಗಾಗಲೇ ಬಯಲು ಶೌಚಮುಕ್ತ ಗ್ರಾಮಗಳಾಗಿ ಹೊರಹೊಮ್ಮಿವೆ. ಜಿಲ್ಲಾ ಪಂಚಾಯತ್‌ ಹಾಗೂ ಕರ್ನಾಟಕ ವಿಶ್ವವಿದ್ಯಾಲಯ ಸಹಕಾರದೊಂದಿಗೆ ವಿವಿಧ ಕಾಲೇಜುಗಳ ಎನ್‌ಎಸ್‌ ಎಸ್‌ ಘಟಕಗಳ ಅಡಿಯಲ್ಲಿ ವಿದ್ಯಾರ್ಥಿಗಳು ವಿವಿಧ ಗ್ರಾಮಗಳಲ್ಲಿ ಶೌಚಾಲಯ ನಿರ್ಮಾಣದ ವಿಶೇಷ ಶಿಬಿರದಲ್ಲಿ ಕಾರ್ಯೋನ್ಮುಖರಾಗಿದ್ದಾರೆ. 

2012ರ ಬೇಸ್‌ಲೈನ್‌ ಸರ್ವೇ ಪ್ರಕಾರ 27310 ಶೌಚಾಲಯ ನಿರ್ಮಾಣ ಮಾಡಬೇಕಾಗಿತ್ತು. ಅದರಲ್ಲಿ ಈಗಾಗಲೇ 24978 ಶೌಚಾಲಯ ನಿರ್ಮಿಸಲಾಗಿದ್ದು, ಇನ್ನುಳಿದಿರುವ 2332 ಶೌಚಾಲಯಗಳನ್ನು ಅಕ್ಟೋಬರ್‌ 2 ರೊಳಗೆ ಮುಕ್ತಾಯ ಮಾಡಲಾಗುವುದು ಎಂದು ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ಡಾ| ರಾಮಚಂದ್ರ ಹೊಸಮನಿ ಹೇಳುತ್ತಾರೆ. 

ಬಯಲು ಶೌಚಮುಕ್ತ ಗ್ರಾಮ: ಈಗಾಗಲೇ ತಾಲೂಕಿನ ಶೆರೆವಾಡ, ಅರಳಿಕಟ್ಟಿ, ಛಬ್ಬಿ, ಅಂಚಟಗೇರಿ, ಅಗಡಿ ಪಂಚಾಯತಿಯ ತಿರುಮಲಕೊಪ್ಪ ಹಾಗೂ ಬೆಳಗಲಿ, ವರೂರ, ಶಿರಗುಪ್ಪಿ, ಕುಸುಗಲ್ಲ, ಕಟೂ°ರ, ಹಳಾಳ ಗ್ರಾಮಗಳು ಶೌಚಮುಕ್ತ ಗ್ರಾಮಗಳಾಗಿ ಹೊರಹೊಮ್ಮಿವೆ. 

ಬಯಲು ಶೌಚಮುಕ್ತವಾಗಬೇಕಾದ ಗ್ರಾಮ: ತಾಲೂಕಿನ ಚನ್ನಾಪುರ, ನೂಲ್ವಿ, ಉಮಚಗಿ, ಸುಳ್ಳ, ಕಿರೇಸೂರ, ಕರಡಿಕೊಪ್ಪ, ಹೆಬಸೂರ, ಇಂಗಳಹಳ್ಳಿ, ಬ್ಯಾಹಟ್ಟಿ, ಭಂಡಿವಾಡ, ಅದರಗುಂಚಿ, ಕೋಳಿವಾಡ ಗ್ರಾಮಗಳಲ್ಲಿ ಇನ್ನೂ ಶೌಚಾಲಯ ನಿರ್ಮಾಣ ಕಾರ್ಯ ನಡೆಯುತ್ತಿದೆ. ಬ್ಯಾಹಟ್ಟಿ ಗ್ರಾಮದಲ್ಲಿ 224, ದೇವರಗುಡಿಹಾಳ ಗ್ರಾಮದಲ್ಲಿ 362, ಹೆಬಸೂರ ಗ್ರಾಮದಲ್ಲಿ 235, ನೂಲ್ವಿಯಲ್ಲಿ 75 ಶೌಚಾಲಯ ನಿರ್ಮಾಣ ಮಾಡಬೇಕಿದೆ. 

ಈಗಾಗಲೇ ತಾಲೂಕಿನ ಅಂಚಟಗೇರಿ ಗ್ರಾಮದಲ್ಲಿ ಕಲಘಟಗಿಯ ಗುಡ್‌ನ‌ೂಸ್‌ ಕಾಲೇಜು, ಚನ್ನಾಪುರ ಗ್ರಾಮದಲ್ಲಿ ಕಲಘಟಗಿ ಸರಕಾರಿ ಕಾಲೇಜು, ಬ್ಯಾಹಟ್ಟಿ ಗ್ರಾಮದಲ್ಲಿ ಚೇತನಾ ಕಾಲೇಜ್‌, ರಾಯನಾಳದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ದೇವರಗುಡಿಹಾಳ ಗ್ರಾಮದಲ್ಲಿ ಡಾ| ಕೆ.ಎಸ್‌. ಶರ್ಮಾ ಕಾಲೇಜು, ಮಂಟೂರನಲ್ಲಿ ಡಾ|ಕೆ.ಎಸ್‌. ಶರ್ಮಾ ಕಲಾ ವಿಭಾಗದ ವಿದ್ಯಾರ್ಥಿಗಳು, ಹಳಾಳ ಗ್ರಾಮದಲ್ಲಿ ಜೆ.ಜಿ. ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು,

ನೂಲ್ವಿಯಲ್ಲಿ ವುಮೆನ್ಸ್‌ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರ ಕಾಲೇಜುಗಳು ನೂರಾರು ವಿದ್ಯಾರ್ಥಿಗಳು ಶ್ರಮದಾನ ಮಾಡುವ ಮೂಲಕ ಎನ್‌ಎಸ್‌ಎಸ್‌ ನಡೆ ಗ್ರಾಮ ನೈರ್ಮಲ್ಯದೆಡೆಗೆ, ಗ್ರಾಮ ಸ್ವತ್ಛತೆಯೇ ನಮ್ಮ ಆದ್ಯತೆ, ಬಯಲು ಶೌಚ ಮುಕ್ತ ಗ್ರಾಮ ನಮ್ಮ ಉದ್ದೇಶ ಎಂಬ ಘೋಷಣೆಗಳೊಂದಿಗೆ ಗ್ರಾಮದಲ್ಲಿ ಶೌಚಾಲಯ ನಿರ್ಮಾಣದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಮಹಿಳಾ ಕಾಲೇಜು ಭಾಗಿ: ಹುಬ್ಬಳ್ಳಿಯ ಮೂರುಸಾವಿರಮಠ ವಿದ್ಯಾವರ್ಧಕ ಸಂಘದ ಮಹಿಳಾ ಕಾಲೇಜು ಎನ್‌ಎಸ್‌ಎಸ್‌ನಡಿ ವಿದ್ಯಾರ್ಥಿನಿಯರು ನೂಲ್ವಿ ಗ್ರಾಮದಲ್ಲಿ ಬಯಲು ಶೌಚಮುಕ್ತ ಗ್ರಾಮ ಮಾಡುವಲ್ಲಿ ಶೌಚಾಲಯ ನಿರ್ಮಾಣ ಹಾಗೂ ಜಾಗೃತಿ ಕಾರ್ಯದಲ್ಲಿ ತೊಡಗಿದ್ದಾರೆ. ಗ್ರಾಮದಲ್ಲಿ 200 ಶೌಚಾಲಯ ನಿರ್ಮಾಣ ಮಾಡುವ ಗುರಿ ಹೊಂದಲಾಗಿದ್ದು, ಕನಿಷ್ಠ 120 ಶೌಚಾಲಯಗಳನ್ನಾದರೂ ನಿರ್ಮಾಣ ಮಾಡುತ್ತೇವೆ ಎಂಬುದು ವಿದ್ಯಾರ್ಥಿನಿಯರ ವಿಶ್ವಾಸ.

ಪದವಿ ಕಾಲೇಜು: ಕುಂದಗೋಳದ ಶ್ರೀ ಸಿದ್ದಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಪಂಚಗ್ರಹ ಹಿರೇಮಠ ಸರಕಾರಿ ಪ್ರಥಮ ದರ್ಜೆ ಕಾಲೇಜು ಕುಂದಗೋಳದ ಸುಮಾರು 25 ವಿದ್ಯಾರ್ಥಿಗಳು ತಾಲೂಕಿನ ಕೊಟಗುಂಡ ಹುಣಸಿ ಗ್ರಾಮದಲ್ಲಿ ಶ್ರಮದಾನ ಮಾಡುವ ಮೂಲಕ ಗ್ರಾಮವನ್ನು ಶೌಚಮುಕ್ತ ಗ್ರಾಮ ಮಾಡುವಲ್ಲಿ ಮುಂದಾಗಿದ್ದಾರೆ. 

ಈಗಾಗಲೇ ಗ್ರಾಮದಲ್ಲಿ ಸ್ವತ್ಛತೆ ಕುರಿತು ಜಾಗೃತಿ, ಬಯಲು ಶೌಚ ಮಾಡದಂತೆ ಗ್ರಾಮಸ್ಥರೊಂದಿಗೆ ಸಂವಾದ, ಗ್ರಾಮದಲ್ಲಿ ಶೌಚಾಲಯ ನಿರ್ಮಾಣಕ್ಕೆ ಆದ್ಯತೆ ಮಾಡುವ ಮೂಲಕ ಕೊಟಗುಂಡಹುಣಸಿ ಗ್ರಾಮವನ್ನು ಬಯಲು ಶೌಚಮುಕ್ತ ಗ್ರಾಮ ಮಾಡುವಲ್ಲಿ ಮುಂದಾಗಿದ್ದಾರೆ. 

* ಬಸವರಾಜ ಹೂಗಾರ

ಟಾಪ್ ನ್ಯೂಸ್

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.