
ನೇಕಾರರ ಬದುಕು ಹಸನು ಮಾಡಿ
Team Udayavani, Aug 12, 2018, 5:26 PM IST

ಗದಗ: ಜಗದ ಹೊಟ್ಟೆಗೆ ಹಿಟ್ಟು ನೀಡಿದವ ರೈತನಾದರೆ, ಮಾನವನ ಮಾನ ರಕ್ಷಣೆಗೆ ಬಟ್ಟೆ ನೀಡಿದವ ನೇಕಾರ. ಅನಾದಿಕಾಲದಿಂದಲೂ ನೇಕಾರಿಕೆ ವೃತ್ತಿಯಲ್ಲಿಯೇ ಜೀವನ ಕಂಡುಕೊಂಡಿರುವ ನೇಕಾರರ ಬದುಕು ಹಸನವಾಗಿಸಲು ಆಳುವ ಸರಕಾರಗಳು ನೆರವಾಗಬೇಕು ಎಂದು ರಾಜ್ಯ ಬಿಜೆಪಿ ನೇಕಾರ ಪ್ರಕೋಷ್ಠ ಸಹ ಸಂಚಾಲಕ ಶ್ರೀನಿವಾಸ ಹುಬ್ಬಳ್ಳಿ ಹೇಳಿದರು.
ಬೆಟಗೇರಿಯ ಕೆಎಚ್ಡಿಸಿ ಕಟ್ಟಡದಲ್ಲಿ ನಡೆದ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಅಂಗವಾಗಿ ರಾಜ್ಯ ಬಿಜೆಪಿ ನೇಕಾರರ ಪ್ರಕೋಷ್ಠ ಏರ್ಪಡಿಸಿದ್ದ ಬೆಟಗೇರಿಯ ನೇಕಾರ ಕಾರ್ಯಾಗಾರದಲ್ಲಿ ಹಿರಿಯ ನೇಕಾರರನ್ನು ಸನ್ಮಾನಿಸಿ ಅವರು ಮಾತನಾಡಿದರು. ನೇಕಾರರ ಮಕ್ಕಳಿಗೆ ಶಿಕ್ಷಣ, ಸ್ವಯಂ ಉದ್ಯೋಗಕ್ಕೆ ಆರ್ಥಿಕ ನೆರವು, ವಾಸಕ್ಕೆ ಸೂರು ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು 2015 ಆ. 7ರಂದು ಈ ದಿನವನ್ನು ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಎಂದು ತಮಿಳುನಾಡಿನ ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಘೋಷಣೆ ಮಾಡಿದ್ದರು. ಅದರಂತೆ ಪ್ರತೀವರ್ಷ ನೇಕಾರರ ದಿನ ಆಚರಿಸಲಾಗುತ್ತಿದೆ. ಸಂಪ್ರದಾಯ ಮತ್ತು ಸಂಸ್ಕೃತಿಯ ಸಂಕೇತವಾದ ಕೈಮಗ್ಗಗಳು ನೇಕಾರನ ಬದುಕಿಗೆ ಆಸರೆ ಆಗಬೇಕು. ಎಲ್ಲರೂ ಕೈಮಗ್ಗದಿಂದ ತಯಾರಾದ ಬಟ್ಟೆಗಳನ್ನು ಉಪಯೋಗಿಸಬೇಕು ಎಂದು ಮನವಿ ಮಾಡಿದರು.
ರಾಜ್ಯ ಮತ್ತು ಕೇಂದ್ರ ಸರಕಾರಗಳು ನೇಕಾರನ ಬದುಕಿಗೆ ಯೋಜನೆಗಳನ್ನು ರೂಪಿಸಬೇಕು. ನೇಕಾರಿಕೆ ವೃತ್ತಿಯನ್ನು ಉಳಿಸಿ ಬೆಳೆಸಲು ಅಗತ್ಯ ಪ್ರೋತ್ಸಾಹ ನೀಡುವ ಜೊತೆಗೆ ಯುವ ಸಮೂಹವನ್ನು ನೇಕಾರಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ಮಾಡುವ ಜವಾಬ್ದಾರಿ ಸರಕರದ ಮೇಲಿದೆ ಎಂದು ಹೇಳಿದರು.
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೋಹನ ಮಾಳಶೆಟ್ಟಿ ಮಾತನಾಡಿ, ನೇಕಾರ ಹಾಗೂ ಆತನ ಕುಟುಂಬಗಳಿಗೆ ಆರ್ಥಿಕ, ಶೈಕ್ಷಣಿಕ ಸೌಲಭ್ಯಗಳನ್ನು ನೀಡಬೇಕು. ನೇಕಾರಿಕೆ ಸಂಪ್ರದಾಯ, ಕುಲಕಸುಬು ಉಳಿಯಬೇಕಾದರೆ ಯುವಕರ ಅವಶ್ಯಕತೆ ಹೆಚ್ಚಾಗಿದೆ. ಹಿರಿಯ ನೇಕಾರ ಜೀವಗಳನ್ನು ಗುರುತಿಸಿ ಪ್ರಶಸ್ತಿಗಳನ್ನು ಸರಕಾರ ನೀಡುವುದು ಅವಶ್ಯವಾಗಿದೆ ಎಂದು ಹೇಳಿದರು.
ನೇಕಾರಿಕೆಯಲ್ಲಿಯೇ ಜೀವನ ನಡೆಸುತ್ತಿರುವ ಹಲವಾರು ಹಿರಿಯರು ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದ ನೇಕಾರರನ್ನು ಸಾಂಕೇತಿಕವಾಗಿ ಗುರುತಿಸಿ ಸನ್ಮಾನ ಮಾಡುತ್ತಿರುವುದು ತಮಗೆ ಸಂತೋಷವಾಗಿದೆ ಎಂದು ಶಹರ ನೇಕಾರ ಪ್ರಕೋಷ್ಠ ಸಂಚಾಲಕ ದೇವೇಂದ್ರಪ್ಪ ಗೋಟೂರು ಹೇಳಿದರು.
ಜಿಲ್ಲಾ ಸಂಚಾಲಕ ರವಿ ಗಂಜಿ, ಬಿಜೆಪಿ ಶಹರ ಅಧ್ಯಕ್ಷ ಜಗನ್ನಾಥಸಾ ಬಾಂಡಗೆ, ಹುಚ್ಚಪ್ಪ ಬಾರಾಟಕ್ಕೆ, ತಿಪ್ಪಣ್ಣ ಗಣಪಾ, ಜಿ.ಟಿ. ಬಂಡಾ, ಬಸಪ್ಪ ಗಣಪಾ, ಮಂಜುನಾಥ ಬೇಲೇರಿ ಅವರನ್ನು ಸನ್ಮಾನಿಸಿದರು. ಕೆಎಚ್ ಡಿಸಿಯ ನಾಗರಾಜ ಸಜ್ಜಿ, ಹಾಗೂ ಸುರೇಶ ತೋಟಗಂಟಿ, ಮಂಜುನಾಥ ಹದ್ದಣ್ಣವರ ಇದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್

Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.