ಜಿಲ್ಲೆಯ ಪ್ರತಿ ಮನೆಗೂ ಮಲಪ್ರಭ 


Team Udayavani, Aug 23, 2018, 2:45 PM IST

23-agust-18.jpg

ಧಾರವಾಡ: ಮಹದಾಯಿ ನದಿಯಿಂದ ರಾಜ್ಯಕ್ಕೆ (ಮಲಪ್ರಭಾ ನದಿಗೆ) 4 ಟಿಎಂಸಿ ಕುಡಿಯುವ ನೀರು ಸಿಗುತ್ತಿದ್ದಂತೆ ಧಾರವಾಡ ಜಿಲ್ಲೆಯ ಸಮಗ್ರ ಹಳ್ಳಿಗಳ ಕುಡಿಯುವ ನೀರು ಪೂರೈಕೆ ಯೋಜನೆಗೆ ಇದೀಗ ಶಕ್ತಿ ಬಂದಂತಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರಕ್ಕೆ ಕುಡಿಯುವ ನೀರು ಪೂರೈಸುತ್ತಿರುವ ಮಾದರಿಯಲ್ಲೇ ಇಡೀ ಧಾರವಾಡ ಜಿಲ್ಲೆಯ ಎಲ್ಲಾ ಹಳ್ಳಿಗಳಿಗೂ ಶುದ್ಧ ಕುಡಿಯುವ ನೀರು ಪೂರೈಸಲು ಧಾರವಾಡ ಜಿಪಂ ಮತ್ತು ಜಿಲ್ಲಾಡಳಿತ 1200 ಕೋಟಿ ರೂ. ವೆಚ್ಚದ ಮನೆ ಮನೆಗೆ ಶುದ್ಧ ನೀರು ಎನ್ನುವ ಯೋಜನೆ ರೂಪಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ.

ಯೋಜನೆ ಅನ್ವಯ ಜಿಲ್ಲೆಯಲ್ಲಿನ 388 ಹಳ್ಳಿಗಳ ಮನೆ ಮನೆಗೂ ಮಲಪ್ರಭೆಯ ಶುದ್ಧವಾದ ಕುಡಿವ ನೀರು ತಲುಪಲಿದೆ. ಅದಕ್ಕಾಗಿ 10 ಜನ ತಂತ್ರಜ್ಞರನ್ನ ಒಳಗೊಂಡ ತಂಡವೊಂದು ಅಧ್ಯಯನ ನಡೆಸಿ ನೀರು ಪೂರೈಕೆ, ಪೈಪ್‌ಲೈನ್‌ ಜಾಲ, ವಿದ್ಯುತ್‌ ಪೂರೈಕೆ, ಪಂಪ್‌ ಗಳ ಅಳವಡಿಕೆ ಸೇರಿ ಒಟ್ಟಾರೆ ಯಾವುದೇ ಆತಂಕವಿಲ್ಲದೇ ಹಳ್ಳಿಗಳಿಗೆ ನೀರು ಪೂರೈಕೆಯಾಗುವ ವ್ಯವಸ್ಥೆಯೊಂದನ್ನು ರೂಪಿಸಿ ಯೋಜನೆಯ ನೀಲನಕ್ಷೆ ಸಿದ್ಧಗೊಳಿಸಿದೆ. ಈ ಯೋಜನೆಯ ಅನ್ವಯ ಮಲಪ್ರಭಾ ಅಣೆಕಟ್ಟೆ ಯಿಂದಲೇ (ರೇಣುಕಾ ಸಾಗರ) ನೀರು ಹರಿಸಬೇಕಾಗಿತ್ತು. ಆದರೆ ಅಣೆಕಟ್ಟೆಗೆ ನೀರಿನ ಸಂಗ್ರಹ ಕುಸಿದಿದ್ದರಿಂದ ಯೋಜನೆ ಸಂಕಷ್ಟಕ್ಕೆ ಸಿಲುಕಿತ್ತು. ಇದೀಗ ಮಹದಾಯಿ ನ್ಯಾಯಾಧಿಕರಣ ಕುಡಿಯುವುದಕ್ಕಾಗಿಯೇ 4 ಟಿಎಂಸಿ ನೀರು ಕೊಟ್ಟಿದ್ದರಿಂದ ಯೋಜನೆ ಅನುಷ್ಠಾನಕ್ಕೆ ಎದುರಾಗಿದ್ದ ಅತಿ ದೊಡ್ಡ ವಿಘ್ನ ದೂರಾದಂತಾಗಿದೆ.

ಯೋಜನೆ ರೂಪಿಸಿದ್ದು ಏಕೆ?
ಧಾರವಾಡ ಜಿಲ್ಲೆಗೆ ಯಾವುದೇ ಪ್ರಬಲವಾದ ನದಿ, ಹಳ್ಳಕೊಳ್ಳ ಅಥವಾ ಕೆರೆಗಳ ಬಲವಿಲ್ಲ. ಇಲ್ಲೇನಿದ್ದರೂ ಅಂತರ್ಜಲದ ಜೊತೆಗೆ ಹಳ್ಳಿಗರು ತಮ್ಮ ದಾಹ ನೀಗಿಸಿಕೊಳ್ಳಬೇಕು. ಜಿಲ್ಲೆಯಲ್ಲಿನ 388 ಹಳ್ಳಿಗಳಲ್ಲಿ 11 ಲಕ್ಷಕ್ಕೂ ಅಧಿಕ ಜನರು ವಾಸವಾಗಿದ್ದು 8 ಲಕ್ಷದಷ್ಟು ಜಾನುವಾರುಗಳಿವೆ. ಪ್ರತಿ ಬೇಸಿಗೆಯಲ್ಲೂ ಜಿಲ್ಲೆಯ ಎಲ್ಲ ಹಳ್ಳಿಗಳಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗುತ್ತದೆ. ಇಂದಿಗೂ ಕುಂದಗೋಳ, ಹುಬ್ಬಳ್ಳಿ, ನವಲಗುಂದ ತಾಲೂಕಿನ ಕೆಲವು ಹಳ್ಳಿಗಳಿಗೆ ಪ್ರತಿದಿನ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡುವುದು ತಪ್ಪಿಲ್ಲ. 2018ರ ಜನವರಿಯಿಂದ ಜುಲೈವರೆಗೂ ಜಿಲ್ಲೆಯ ಹಳ್ಳಿಗಳಲ್ಲಿತ್ತು ನೀರಿನ ಹಾಹಾಕಾರ. 

ಇಂತಹ ಸಂದರ್ಭದಲ್ಲಿ ಜಿಲ್ಲಾಡಳಿತ ಎಲ್ಲೆಂದರಲ್ಲಿ ಕೊಳವೆಬಾವಿ ಕೊರೆದು ತಾತ್ಕಾಲಿಕವಾಗಿ ನೀರು ಪೂರೈಕೆ ಮಾಡುತ್ತದೆ. ಆದರೆ ಸತತ ಬರಗಾಲ ಮತ್ತು ಕೊಳವೆ ಬಾವಿಗಳ ಸಂಖ್ಯೆ ಹೆಚ್ಚಿದ್ದರಿಂದಾಗಿ ಕಳೆದ ಆರು ವರ್ಷಗಳಲ್ಲಿ ಅಂತರ್ಜಲ 500 ಅಡಿಗೆ ಕುಸಿದಿದೆ. ಸರ್ಕಾರಿ ಜಾಗದಲ್ಲಿಯೇ ಗ್ರಾಮೀಣ ನೀರು ಪೂರೈಕೆ ಇಲಾಖೆ ಬೊರ್‌ ವೆಲ್‌ ಕೊರೆಸಬೇಕು. ಎರಡು ಅಥವಾ ಮೂರು ತಿಂಗಳು ನೀರು ಚೆಲ್ಲಿ ಕೊಳವೆಬಾವಿ ಬತ್ತುತ್ತಿವೆ. ಇನ್ನು ಕೆರೆಗಳ್ಳೋ ಹತ್ತು ವರ್ಷಕ್ಕೆ ಒಮ್ಮೆ ಮಳೆಯಿಂದ ಭರ್ತಿಯಾಗುತ್ತಿವೆ. ಅಲ್ಲಿಯೂ ನೀರಿಲ್ಲ. ಒಟ್ಟಾರೆ ಕುಡಿಯುವ ನೀರಿಗಾಗಿ ಜಿಲ್ಲೆಗೆ ಪ್ರತಿವರ್ಷ 15-20 ಕೋಟಿ ರೂ.ಗಳಷ್ಟು ಹಣ ವ್ಯಯಿಸಲಾಗುತ್ತಿದೆ. ಹೀಗಾಗಿ ಶಾಶ್ವತವಾಗಿ ಸವದತ್ತಿಯ (ಬೆಳಗಾವಿ ಜಿಲ್ಲೆ)ಯ ರೇಣುಕಾ ಸಾಗರ್‌ ಜಲಾಶಯದಿಂದ 1.6 ಟಿಎಂಸಿ ನೀರನ್ನು ಬಳಸಿಕೊಂಡು ಜಿಲ್ಲೆಯ ಎಲ್ಲಾ ಹಳ್ಳಿಗಳಿಗೂ ಶುದ್ಧ ಕುಡಿಯುವ ನೀರನ್ನು ಪೂರೈಸಬೇಕು ಎಂಬ ಕಾರಣಕ್ಕೆ ಈ ಯೋಜನೆ ರೂಪಿತವಾಗಿದೆ.

ನೀರು ಪೂರೈಕೆಗೆ ಜಾಲ
ಜಿಲ್ಲೆಯ 388 ಹಳ್ಳಿಗಳಲ್ಲಿಯೂ ಪ್ರತಿವರ್ಷ ನೀರಿನ ತೊಂದರೆ ಇದ್ದೇ ಇದೆ. ಈ ಪೈಕಿ 279 ಹಳ್ಳಿಗಳಲ್ಲಂತೂ ವರ್ಷದ 6 ತಿಂಗಳು ನೀರಿಗಾಗಿ ಹಾಹಾಕಾರ ಇರುವುದನ್ನು ಅಧ್ಯಯನ ತಂಡ ಪ್ರಸ್ತಾಪಿಸಿದೆ. ಅದಕ್ಕಾಗಿ ಈಗಾಗಲೇ ಜಿಲ್ಲೆಯಲ್ಲಿ ಎರಡು ಕಡೆ ಮಾಡಿರುವ ಬಹುಗ್ರಾಮ ಕುಡಿಯುವ ನೀರು ಯೋಜನೆ ಮಾದರಿಯಲ್ಲೇ ಇನ್ನಷ್ಟು ತಂತ್ರಾಂಶಗಳು ಮತ್ತು ವಿನೂತನ ವಿಧಾನಗಳನ್ನು ಬಳಸಿಕೊಂಡು ಸರಿಯಾಗಿ ನೀರು ಪೂರೈಸಲು ಯೋಜಿಸಲಾಗಿದೆ.

ಮಲಪ್ರಭಾ ಅಣೆಕಟ್ಟೆಯಿಂದ ನೇರವಾಗಿ ಪ್ರತ್ಯೇಕ ಪೈಪ್‌ಲೈನ್‌ ಬಳಸಿಕೊಂಡು ನೀರು ಪೂರೈಕೆ ಜಾಲವನ್ನು ಹೆಣೆಯಲಾಗಿದೆ. ಮೊದಲು ನೀರು ಮೇಲ್ಮಟ್ಟದ ಜಲಾಗಾರಗಳಿಗೆ (ದೈತ್ಯ ಓವರ್‌ಹೆಡ್‌ ಟ್ಯಾಂಕ್‌) ಪೂರೈಕೆಯಾಗಲಿದೆ. ಅಲ್ಲಿಂದ ಆಯಾ ಹಳ್ಳಿಗಳ ಸಣ್ಣ ಟ್ಯಾಂಕ್‌ ಗಳಿಗೆ ಪೂರೈಕೆಯಾಗಿ ಮನೆಮನೆ ತಲುಪಲಿದೆ. ಪ್ರತಿ ನಾಲ್ಕು ಅಥವಾ ಐದು ಹಳ್ಳಿಗಳಿಗೆ ಒಂದೊಂದು ಪ್ರತ್ಯೇಕ ನೀರು ಪೂರೈಕೆ ಪಂಪ್‌ ಗಳು ಇರಲಿವೆ. ಒಂದೆಡೆ ವಿದ್ಯುತ್‌ ವ್ಯತ್ಯಯವಾದರೆ ಎಲ್ಲ ಹಳ್ಳಿಗಳಿಗೂ ತೊಂದರೆಯಾಗದಂತೆ ಪ್ರತ್ಯೇಕ ವಿದ್ಯುತ್‌ ಲೈನ್‌ ಮತ್ತು ಪಂಪ್‌ ಸೆಟ್‌ಗಳನ್ನು ಬಳಕೆ ಮಾಡಲು ಯೋಜಿಸಲಾಗಿದೆ.

ಧಾರವಾಡ ಜಿಲ್ಲೆಯ ಎಲ್ಲಾ ಹಳ್ಳಿಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಇದ್ದಿದ್ದು ನಿಜ. ಪ್ರತಿ ಬಾರಿಯೂ ತಾತ್ಕಾಲಿಕ ವ್ಯವಸ್ಥೆ ಮಾಡುತ್ತಿದ್ದೇವೆ ಅಷ್ಟೇ. ಆದರೆ ಈ ಸಮಗ್ರ ಯೋಜನೆ ಜಾರಿಯಾದರೆ, ಶಾಶ್ವತವಾಗಿ ಕುಡಿಯುವ ನೀರು ಸಿಗಲಿದೆ.
ಮನೋಹರ ಮಂಡೋಳಿ, ಪಂಚಾಯತ್‌ರಾಜ್‌ ಇಲಾಖೆ ಇಇ, ಧಾರವಾಡ

ಜಿಲ್ಲೆಗೆ ಯಾವುದೇ ನದಿಗಳ ಆಸರೆ ಇಲ್ಲ. ಹೀಗಾಗಿ ಈ ಬೃಹತ್‌ ಯೋಜನೆ ಅನಿವಾರ್ಯವಾಗಿದೆ. ಈ ಕುರಿತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ. ದೇಶಪಾಂಡೆ ಅವರಿಗೆ ಮನವರಿಕೆ ಮಾಡಲಾಗಿದೆ. ಪಂಚಾಯತ್‌ ರಾಜ್‌ ಇಲಾಖೆ ಮೂಲಕ ಅಗತ್ಯ ಕ್ರಮಗಳಿಗೂ ಸೂಚಿಸಿದ್ದೇನೆ.
ದೀಪಾ ಚೋಳನ್‌, ಜಿಲ್ಲಾಧಿಕಾರಿ, ಧಾರವಾಡ

ಬಸವರಾಜ ಹೊಂಗಲ್‌

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

P.-Joshi

Bengaluru Jail: ಸರಕಾರದಿಂದಲೇ ದರ್ಶನ್‌ ಕೇಸ್‌ ಫೋಟೋ ವೈರಲ್‌: ಪ್ರಹ್ಲಾದ್‌ ಜೋಶಿ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.