![Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!](https://www.udayavani.com/wp-content/uploads/2024/12/Maharashtra-415x234.jpg)
ಕೇಂದ್ರದಿಂದ ಮೇ ತಿಂಗಳ ಪಡಿತರ ಆಹಾರ ಧಾನ್ಯ ಬಿಡುಗಡೆ
Team Udayavani, May 2, 2020, 1:31 PM IST
![ಕೇಂದ್ರದಿಂದ ಮೇ ತಿಂಗಳ ಪಡಿತರ ಆಹಾರ ಧಾನ್ಯ ಬಿಡುಗಡೆ](https://www.udayavani.com/wp-content/uploads/2020/05/huballi-tdy-3-1-620x355.jpg)
ಧಾರವಾಡ: ಲಾಕ್ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಆಹಾರ ಭದ್ರತೆ ಒದಗಿಸಲು ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಲ್ಲಿ ಮೇ ತಿಂಗಳಲ್ಲಿ ಪಡಿತರ ಚೀಟಿದಾರರಿಗೆ ಹೆಚ್ಚುವರಿಯಾಗಿ ವಿತರಿಸಲು ಆಹಾರ ಧಾನ್ಯವನ್ನು ಬಿಡುಗಡೆ ಮಾಡಿದೆ.
ಈ ಆಹಾರ ಧಾನ್ಯವನ್ನು ಭಾರತ ಆಹಾರ ನಿಗಮದಿಂದ ಎತ್ತುವಳಿ ಮಾಡಿ ಜಿಲ್ಲೆಯ 8 ಸಗಟು ಮಳಿಗೆಗಳ ಮೂಲಕ 508 ನ್ಯಾಯಬೆಲೆ ಅಂಗಡಿಗಳಿಗೆ ಸರಬರಾಜು ಮಾಡಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಏಕಕಾಲಕ್ಕೆ ಮೇ 3ರಂದು ಬೆಳಗ್ಗೆ 7 ಗಂಟೆಯಿಂದ ಆಹಾರಧಾನ್ಯ ವಿತರಣೆ ಆಗಲಿದ್ದು, ಪಡಿತರ ಚೀಟಿದಾರರು ಸರ್ಕಾರ ನಿಗದಿಪಡಿಸಿದ ಸಮಯದಲ್ಲಿ ನ್ಯಾಯಬೆಲೆ ಅಂಗಡಿಯಿಂದ ಆಹಾರ ಧಾನ್ಯವನ್ನು ಸಾಮಾಜಿಕ ಅಂತರ ಕಾಯ್ದುಕೊಂಡು ಪಡೆಯಲು ಕೋರಲಾಗಿದೆ.
ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಕುಟುಂಬದ ಒಬ್ಬ ಸದಸ್ಯರಿಗೆ 10 ಕೆಜಿಯಂತೆ ಅಕ್ಕಿ ಹಾಗೂ ಪ್ರತಿ ಚೀಟಿಗೆ 1 ಕೆಜಿ ತೊಗರಿಬೇಳೆ ಉಚಿತವಾಗಿ ವಿತರಿಸಲಾಗುವುದು. ಬಿಪಿಎಲ್ ಚೀಟಿ ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ಹಾಗೂ ಪ್ರತಿ ಚೀಟಿಗೆ 1 ಕೆಜಿ ತೊಗರಿ ಬೇಳೆ ಉಚಿತವಾಗಿ ವಿತರಿಸಲಾಗುವುದು. ಎಪಿಎಲ್ ಪಡಿತರ ಚೀಟಿ ಹೊಂದಿರುವ ಏಕ ಸದಸ್ಯ ಪಡಿತರ ಚೀಟಿಗೆ 5 ಕೆಜಿಯಂತೆ ಹಾಗೂ ಎರಡು ಅಥವಾ ಎರಡಕ್ಕಿಂತ ಹೆಚ್ಚಿಗೆ ಸದಸ್ಯರಿರುವ ಪಡಿತರ ಚೀಟಿಗೆ 10 ಕೆಜಿಯಂತೆ ಅಕ್ಕಿ ಪ್ರತಿ ಕೆಜಿಗೆ 15 ರೂ. ಗಳಂತೆ ವಿತರಿಸಲಾಗುವುದು. ಹೊಸ ಪಡಿತರ ಚೀಟಿ ಕೋರಿ ಸಲ್ಲಿಸಿದ ಬಿಪಿಎಲ್ ಪ್ರತಿ ಅರ್ಜಿಗೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ಹಾಗೂ ಎಪಿಎಲ್ ಪ್ರತಿ ಅರ್ಜಿಗೆ 10 ಕೆಜಿಯಂತೆ ಪ್ರತಿ ಕೆಜಿ 15 ರೂ.ಗಳಂತೆ ವಿತರಿಸಲಾಗುವುದು ಎಂದು ಡಿಸಿ ದೀಪಾ ಚೋಳನ್ ತಿಳಿಸಿದ್ದಾರೆ.
ಅಕ್ರಮ ಕಂಡುಬಂದರೆ ದೂರು ನೀಡಿ: ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರಧಾನ್ಯ ವಿತರಿಸುವಾಗ ಅಕ್ರಮವೆಸಗಿದ ಸಂದರ್ಭದಲ್ಲಿ ತಕ್ಷಣ ಈ ಕೆಳಕಂಡ ಸಂಖ್ಯೆಗೆ ದೂರು ಸಲ್ಲಿಸಿದಲ್ಲಿ ಅಂತಹ ನ್ಯಾಯಬೆಲೆ ಅಂಗಡಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು. ಧಾರವಾಡ: 0836-2233822, ಮೊ:9845059245-9449357188, 9448221892, ಹುಬ್ಬಳ್ಳಿ: 0836 -2358388, ಮೊ: 9035074105, 8904840724, 8310490713, ಕಲಘಟಗಿ: 08370 – 284535, ಮೊ:7899972947, 8792340158, ಕುಂದಗೋಳ: 08304-290239, ಮೊ:9480145628, ನವಲಗುಂದ: 08380 -229240, ಮೊ:9620734505, 9902142458, ಹುಬ್ಬಳ್ಳಿ ಪಡಿತರ ಪ್ರದೇಶ: ಮೊ:9481008296, 9035074105, 9886320360, 9880725639 ಹಾಗೂ ಧಾರವಾಡ ಪಡಿತರ ಪ್ರದೇಶ: 0836-2446624, ಮೊ: 8088737170, 9108752005, ಜಿಲ್ಲಾಧಿಕಾರಿ ಕಾರ್ಯಾಲಯದ ಆಹಾರ ಶಾಖೆ-0836 2444594 ಸಂಪರ್ಕಿಸಬಹುದು ಎಂದು ಡಿಸಿ ದೀಪಾ ಚೋಳನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
![Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!](https://www.udayavani.com/wp-content/uploads/2024/12/Maharashtra-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು](https://www.udayavani.com/wp-content/uploads/2024/12/alnv-150x87.jpg)
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
![ಪ್ರಹ್ಲಾದ ಜೋಶಿ](https://www.udayavani.com/wp-content/uploads/2024/12/pralhad-joshi-150x83.jpg)
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
![hubli-fire-incident-at-ayyappa-camp-nine-devotees-seriously-injured](https://www.udayavani.com/wp-content/uploads/2024/12/ayya-150x87.jpg)
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
![Joshi](https://www.udayavani.com/wp-content/uploads/2024/12/Joshi-2-150x90.jpg)
ಸಿ.ಟಿ.ರವಿ ನಕಲಿ ಎನ್ಕೌಂಟರ್ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
![Battery theft at Dharwad District Collector’s Office](https://www.udayavani.com/wp-content/uploads/2024/12/dc-2-150x87.jpg)
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.