ಮಿಷನ್‌ ಹಂಗರ್‌ ಸಾಮಾಜಿಕ ಸೇವೆ

ಬೀದಿನಾಯಿ-ಬಿಡಾಡಿ ದನಗಳ ಹೊಟ್ಟೆ ತುಂಬಿಸುತ್ತಿರುವ 16 ಜನರ ತಂಡ

Team Udayavani, Jul 14, 2020, 12:19 PM IST

ಮಿಷನ್‌ ಹಂಗರ್‌ ಸಾಮಾಜಿಕ ಸೇವೆ

ಹುಬ್ಬಳ್ಳಿ:16 ಯುವಜನರಿರುವ ಮಿಷನ್‌ ಹಂಗರ್‌ ತಂಡ ಕಳೆದ 98 ದಿನಗಳಿಂದ ನಗರದ ವಿವಿಧ ಪ್ರದೇಶಗಳಲ್ಲಿರುವ ಬೀದಿ ನಾಯಿ ಹಾಗೂ ಬಿಡಾಡಿ ದನಗಳಿಗೆ ಪ್ರತಿದಿನ ರಾತ್ರಿ ಆಹಾರದ ವ್ಯವಸ್ಥೆ ಮಾಡುವ ಮೂಲಕ ಮಾನವೀಯತೆ ಮೆರೆಯುತ್ತಿದೆ.ಇವರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಗೋಕುಲ ರಸ್ತೆ, ತಾರಿಹಾಳ, ವಿದ್ಯಾನಗರ, ಲಿಂಗರಾಜ ನಗರ, ಕಾಳಿದಾಸ ನಗರ, ವಿಮಾನ ನಿಲ್ದಾಣ, ನಗರದ ಬಸ್‌ ನಿಲ್ದಾಣ, ರೈಲ್ವೆ ನಿಲ್ದಾಣದ ಬಳಿ ಹಾಗೂ ಹೈವೆ ಮತ್ತು ವಿದ್ಯಾನಗರ, ಉದ್ಯಮ ನಗರ, ರವಿನಗರ, ಲಿಡ್ಕರ್‌ ಕಾಲೋನಿ ಸೇರಿದಂತೆ ಬರುವ ಸ್ಮಶಾನಗಳಲ್ಲಿ ಬರುವ ಪ್ರದೇಶಗಳಲ್ಲಿರುವ ಬೀದಿ ನಾಯಿಗಳಿಗೆ ಊಟ ನೀಡಲಾಗುತ್ತಿದೆ. ಸುಶಾಂತ ಕುಲಕರ್ಣಿ ನೇತೃತ್ವದಲ್ಲಿ ಏಪ್ರಿಲ್‌ 5ರಿಂದ ಆರಂಭಗೊಂಡಿದ್ದು, ಒಂದು ವರ್ಷ ಪೂರೈಸುವ ಮಹತ್ವಾಕಾಂಕ್ಷೆ ಹೊಂದಲಾಗಿದೆ. ಪ್ರತಿದಿನ 20-25 ಕೆಜಿ ಅನ್ನದ ಜತೆಯಲ್ಲಿ ಪೆಡಿಗ್ರಿ, ಹಾಲು, ತತ್ತಿ, ವಾರದಲ್ಲಿ ಒಂದು ದಿನ ಪ್ರತಿ ರವಿವಾರ ಮಟನ್‌ ಅಂಗಡಿಗಳಲ್ಲಿ ಉಳಿದಿರುವ ಮಾಂಸವನ್ನು ಸಂಗ್ರಹಿಸಿ ನೀಡಲಾಗುತ್ತಿದೆ. ಪ್ರತಿದಿನ ಸುಮಾರು 400 ರಿಂದ 500 ಹಾಗೂ ಒಂದೊಂದು ದಿನ 1000 ದಿಂದ 1500 ನಾಯಿಗಳಿಗೆ ಆಹಾರದ ವ್ಯವಸ್ಥೆ ಮಾಡಿದ್ದಾರೆ ಯುವಕರು.

ಪರಿಚಯಸ್ಥರು ಪ್ರತಿದಿನ ಸಹಾಯ ನೀಡುತ್ತಿದ್ದರೆ, ಸಾಮಾಜಿಕ ಜಾಲತಾಣದಲ್ಲಿ ನೋಡಿದ ಕೆಲವರು ಇವರ ಕಾರ್ಯಕ್ಕೆ ಸಹಕಾರ ನೀಡುತ್ತಿದ್ದಾರೆ. ಕೇವಲ ಬೀದಿ ನಾಯಿಗಳಷ್ಟೇ ಅಲ್ಲ ಬೀದಿ ಹಸುಗಳಿಗೂ ಆಹಾರದ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಪ್ರತಿದಿನ ಸುಮಾರು 25 ರಿಂದ 30 ಬೀದಿ ಹಸುಗಳಿಗೆ ಆಹಾರ ನೀಡಲಾಗುತ್ತಿದೆ. ಇದಕ್ಕಾಗಿ ಪ್ರತಿದಿನ ಎಪಿಎಂಸಿ ಮಾರುಕಟ್ಟೆಯಲ್ಲಿ ಸಂತೆಯ ನಂತರ ಉಳಿದ ತರಕಾರಿ ಸಂಗ್ರಹಿಸಿ ಹಸುಗಳಿಗೆ ನೀಡಲಾಗುತ್ತಿದೆ.

ಸುಶಾಂತ ಕುಲಕರ್ಣಿ, ಸೌಮ್ಯ ಕುಂಬಾರ, ಹರೀಶ ಅಣ್ಣಾದೊರೆ, ಇಮ್ಯಾನುವಲ್‌ ಪತ್ತಾರ, ಶಿವಾನಂದ ಗಡಾದ, ಗೌತಮ ಮಧುರಕರ, ನಮೃತಾ ಹುಲ್ಲಂಬಿ, ಪೂಜಾ, ಅಂಜಲಿ, ದಿವ್ಯಾ, ತ್ರಿಮಲ ದಾಣಿ, ಓಂಕಾರ ರಾಮದುರ್ಗಕರ, ಶ್ರೀಹರಿ ರಾಮದುರ್ಗಕರ, ಹೇಮರಾಜ, ಜಯತೀರ್ಥ, ವಿಲಾಸ, ರಾಹುಲ್‌ ಹಿರೇಮನಿ, ಲೋಕೇಶ, ವೀರೇಶ, ಶ್ವೇತಾ ಸೂರಿ, ವೈಷ್ಣವಿ ಸಾಣಿಕೊಪ್ಪ, ಶ್ರೇಯಸ್‌ ಶೆಟ್ಟಿ, ತನುಶ್ರಿ ಡಿ.ಇರುವ ಈ ತಂಡದಲ್ಲಿ ಇಬ್ಬರ ಒಂದು ತಂಡ ಮಾಡಿಕೊಂಡು ಪ್ರತಿದಿನ ರಾತ್ರಿ ನಗರದ ವಿವಿಧ ರಸ್ತೆಗಳಲ್ಲಿ ಊಟ ನೀಡಲು ತೆರಳುತ್ತಾರೆ. ಒಂದು ತಂಡದಿಂದ ಸುಮಾರು 50-60 ಬೀದಿ ನಾಯಿಗಳಿಗೆ ಖಾದ್ಯ ನೀಡಲಾಗುತ್ತಿದೆ.

‌ಕಳೆದ 98 ದಿನಗಳಿಂದ ನಗರದ ಬೀದಿ ನಾಯಿಗಳಿಗೆ ಆಹಾರ ನೀಡಲಾಗುತ್ತಿದ್ದು, ಇದೀಗ ಶತ ದಿನದತ್ತ ದಾಪುಗಾಲು ಇಡುತ್ತಿದೆ. ಒಂದು ವರ್ಷದ ಗುರಿ ಹೊಂದಲಾಗಿದೆ. ಇದುವರೆಗೂ 86,746 ಬೀದಿ ನಾಯಿಗಳಿಗೆ ಊಟ ನೀಡಲಾಗಿದ್ದು, ಹಸುಗಳಿಗೂ ಆಹಾರ ನೀಡಲಾಗಿದೆ. ಒಂದು ವರ್ಷ ಆಹಾರ ಪೂರೈಸುವ ಇಚ್ಚೆ ಹೊಂದಲಾಗಿದೆ. ಯೋಜನೆಗೆ ಹಲವರು ಕೈ ಜೋಡಿಸಿದ್ದು, ನಮ್ಮ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಪೆಡಿಗ್ರಿ, ಹಾಲು, ಮೊಟ್ಟೆ, ಅಕ್ಕಿ ಸೇರಿದಂತೆ ಇನ್ನಿತರರ ವಸ್ತುಗಳನ್ನು ನೀಡಿದ್ದಾರೆ. ಈ ಕಾರ್ಯ ಸಮಾಧಾನ ನೀಡಿದೆ. ಈ ಕಾರ್ಯಕ್ಕೆ ಕೈ ಜೋಡಿಸಲು ಇಚ್ಚಿಸುವವರು ಮೊ:9972472418 ಸಂಪರ್ಕಿಸಬಹುದು. -ಸುಶಾಂತ ಕುಲಕರ್ಣಿ, ಮಿಷನ್‌ ಹಂಗರ್‌ನ ಮುಖ್ಯಸ್ಥ

 

-ಬಸವರಾಜ ಹೂಗಾರ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.