Hubli: ಬಿಜೆಪಿಯಿಂದ ಹೆಚ್ಚಿನ ಶಾಸಕರು ಕಾಂಗ್ರೆಸ್ ಗೆ ಬರಬಹುದು: ಈಶ್ವರ ಖಂಡ್ರೆ
Team Udayavani, Oct 25, 2024, 2:09 PM IST
ಹುಬ್ಬಳ್ಳಿ: ಬಿಜೆಪಿಯಿಂದ ಎಂಟು ಶಾಸಕರಷ್ಟೇ ಅಲ್ಲ ಇನ್ನಷ್ಟು ಶಾಸಕರು ಕಾಂಗ್ರೆಸ್ ಗೆ ಬರಬಹುದು. ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಶಾಸಕರು ಬೇಸತ್ತಿದ್ದಾರೆ ಎಂದು ಸಚಿವ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರಷ್ಟೇ ಅಲ್ಲ ಶಾಸಕರು, ಜನರು ಕೂಡ ಬೇಸತ್ತಿದ್ದಾರೆ. ಪ್ರಜಾಸತ್ತಾತ್ಮಕ ಸರಕಾರ ಬುಡಮೇಲು ಮಾಡಲು ಹೊರಟಿದ್ದಾರೆ. ದ್ವೇಷದ ರಾಜಕಾರಕ್ಕೆ ಜನರೇ ಪಾಠ ಕಲಿಸಲಿದ್ದಾರೆ. ಹೀಗಾಗಿಯೇ ಅಲ್ಲಿನ ಶಾಸಕರು ಪಕ್ಷಕ್ಕೆ ಬರಬಹುದು. ಕಾಂಗ್ರೆಸ್ ಪಕ್ಷದ ಪರವಾಗಿ ಒಲವು ವ್ಯಕ್ತವಾಗುತ್ತಿದೆ ಎಂದರು.
ಬುದ್ಧಿ ಭ್ರಮಣೆ: ಮಹಾರಾಷ್ಟ್ರ ಚುನಾವಣೆ ನಂತರ ರಾಜ್ಯ ಸರಕಾರ ಬೀಳಲಿದೆ ಎದು ಹೇಳುವವರ ಬದ್ದಿ ಭ್ರಮಣೆಯಾಗಿದೆ. ಅವರು ತಿರುಕನ ಕನಸನ್ನು ಕಾಣುತ್ತಿದ್ದಾರೆ. ದುರಾಡಳಿತ ನಡೆಸಿದವರಿಗೆ ಹೇಗಾದರೂ ಮಾಡಿ ಅಧಿಕಾರಕ್ಕೆ ಬರಬೇಕು ಎನ್ನುವ ಹಪಾಹಪಿಯಲ್ಲಿದ್ದಾರೆ. ಅಧಿಕಾರ ದುರ್ಬಳಿಕೆ ಮಾಡಿಕೊಂಡವರಿಗೆ ಅಧಿಕಾರ ಬೇಕಾಗಿದೆ. ಆದರೆ ನಮ್ಮ ಪಕ್ಷದ 136 ಶಾಸಕರು ಒಗ್ಗಟ್ಟಾಗಿದ್ದಾರೆ. ನಮ್ಮ ಸರಕಾರ ಸುಭದ್ರವಾಗಿ ಇರಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election; ಸಂಡೂರಿನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಜನಾರ್ದನ ರೆಡ್ಡಿ- ಶ್ರೀರಾಮುಲು
Channapatna By election: ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
Shiggaon ‘ಕೈ’ ಭಿನ್ನಮತ; ಯಾಸಿರ್ ಖಾನ್ ಬಿಜೆಪಿ ಏಜೆಂಟ್ ಎಂದ ಅಜ್ಜಂಫೀರ್ ಖಾದ್ರಿ
Kadur: ಮಗು ನಾಪತ್ತೆ ಪ್ರಕರಣ ಸುಖಾಂತ್ಯ; ಮಗು ಮರೆತು ಕುಡಿಯಲು ಹೋಗಿದ್ದ ಅಪ್ಪ!
By Election; ಯೋಗೇಶ್ವರ್ ನಮ್ಮ ಜತೆಗಿದ್ದರು, ಈಗಿಲ್ಲ ಅಷ್ಟೇ….: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Actor Sushant Singh Case: ನಟಿ ರಿಯಾ ಚಕ್ರವರ್ತಿ ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ
ಮುಧೋಳ: 36 ಹಳ್ಳಿಗಳಿಗೆ ಒಂದೇ ಒಂದು ಪೊಲೀಸ್ ಠಾಣೆ
One Day Cup: ಕೇವಲ 1 ರನ್ ಅಂತರದಲ್ಲಿ 8 ವಿಕೆಟ್ ಕಳೆದುಕೊಂಡ ವೆಸ್ಟರ್ನ್ ಆಸ್ಟ್ರೇಲಿಯಾ
First Look:ವಂದೇ ಭಾರತ್ ಸ್ಲೀಪರ್ ರೈಲು ಬಿಡುಗಡೆಗೆ ಸಜ್ಜು;ಅತ್ಯಾಧುನಿಕ ವೈಶಿಷ್ಟ್ಯಗಳಿವೆ!
By Election; ಸಂಡೂರಿನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಜನಾರ್ದನ ರೆಡ್ಡಿ- ಶ್ರೀರಾಮುಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.