ಸೊಳ್ಳೆ ಕಾಟ ಉಲ್ಬಣ; ಸಾಂಕ್ರಾಮಿಕದ ತಲ್ಲಣ

ಪಾಲಿಕೆಯಿಂದ ಸಂತಾನೋತ್ಪತ್ತಿ ನಿಯಂತ್ರಣ ಕ್ರಮ ಉಪೇಕ್ಷೆ

Team Udayavani, Apr 19, 2022, 12:30 PM IST

9

ಧಾರವಾಡ: ಬೇಸಿಗೆ ಬಿಸಿಲಿನ ತಾಪದ ಜತೆಗೆ ಇದೀಗ ಆರಂಭಗೊಂಡಿರುವ ಮುಂಗಾರು ಪೂರ್ವ ಮಳೆ ಅಬ್ಬರದಿಂದ ಸೊಳ್ಳೆ ಕಾಟ ಶುರುವಾಗಿದ್ದು, ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ.

ಸಾಂಕ್ರಾಮಿಕ ರೋಗಗಳ ನಿಯಂತ್ರಿಸಲು ಆರೋಗ್ಯ ಇಲಾಖೆ ಶಿಫಾರಸುಗಳಿಗೆ ಮಹಾನಗರ ಪಾಲಿಕೆ ಮಣೆ ಹಾಕಿಲ್ಲ. ಅವಳಿನಗರದಲ್ಲಿ ಸೊಳ್ಳೆಯ ಸಂತಾನೋತ್ಪತ್ತಿ ನಿಯಂತ್ರಣಕ್ಕೆ ಫಾಗಿಂಗ್‌ ಕಾರ್ಯಕ್ಕೆ ಆದ್ಯತೆ ನೀಡಿಲ್ಲ. ಹೀಗಾಗಿ ಸೊಳ್ಳೆಗಳ ಉತ್ಪತ್ತಿ ನಿಯಂತ್ರಣ ತಪ್ಪಿದ್ದು, ಸೊಳ್ಳೆಯ ಕಾಟ ಅವಳಿನಗರದಲ್ಲಿ ಜೋರಾಗಿದೆ.

ಇದಲ್ಲದೇ ಗ್ರಾಮೀಣ ಭಾಗದಲ್ಲೂ ಗ್ರಾಪಂಗಳ ನಿರ್ಲಕ್ಷéದಿಂದ ಸೊಳ್ಳೆಯ ನಿಯಂತ್ರಣ ದಾರಿ ತಪ್ಪಿದ್ದು, ಸಾಂಕ್ರಾಮಿಕ ರೋಗಗಳ ಲಕ್ಷಣಗಳು ಕಂಡು ಬಂದಿವೆ. ಬೇಸಿಗೆಯಲ್ಲಿ ಸದ್ದಿಲ್ಲದೇ ಹೊಡೆತ ನೀಡಿರುವ ಕೀಟಜನ್ಯ ಸಾಂಕ್ರಾಮಿಕ ರೋಗಗಳು ಮಳೆಗಾಲದಲ್ಲಿ ತೀವ್ರ ಹೊಡೆತ ನೀಡುವ ಆತಂಕ ಶುರುವಾಗಿದೆ.

2021ರಲ್ಲಿ 123 ಜನರಲ್ಲಿ ಡೆಂಘೀ, 54 ಜನರಲ್ಲಿ ಚಿಕೂನ್‌ ಗುನ್ಯಾ, 6 ಜನರಲ್ಲಿ ಮಲೇರಿಯಾ, ಒಬ್ಬರಲ್ಲಿ ಮೆದುಳು ಜ್ವರ ಪತ್ತೆಯಾಗಿತ್ತು. ಇದೀಗ 2022ರ ಪ್ರಸಕ್ತ ಸಾಲಿನ ಮೂರು ತಿಂಗಳ ಅವಧಿಯಲ್ಲಿ 11 ಜನರಲ್ಲಿ ಡೆಂಘೀ, ಇಬ್ಬರಲ್ಲಿ ಚಿಕೂನ್‌ಗುನ್ಯಾ ಹಾಗೂ ಒಬ್ಬರಲ್ಲಿ ಮಲೇರಿಯಾ ಪತ್ತೆಯಾಗಿದೆ. ಆರೋಗ್ಯ ಇಲಾಖೆ ನೀಡಿರುವ ಈ ಅಂಕಿ-ಅಂಶಗಳ ಅನ್ವಯ ಸಾಂಕ್ರಾಮಿಕ ರೋಗಗಳ ಹಾವಳಿ ತಗ್ಗಿದಂತೆ ಮೇಲ್ನೋಟಕ್ಕೆ ಕಂಡು ಬಂದಿದ್ದರೂ ಒಳಹೊಡೆತ ನೀಡಿರುವುದು ಸತ್ಯ.

ಈಗಾಗಲೇ ಸೀಜನ್‌ ಜ್ವರ ದಾಳಿಯಿಟ್ಟು, ಮೈ-ಕೈ ನೋವಿನ ಬಾಧೆಯಿಂದ ಚೇತರಿಸಿಕೊಳ್ಳುತ್ತಿರುವ ಹಳ್ಳಿಗರಿಗೆ ಸಾಂಕ್ರಾಮಿಕ ರೋಗಗಳು ಸದ್ದಿಲ್ಲದೇ ಒಳಹೊಡೆತ ನೀಡಿವೆ. ಮಳೆಗಾಲದಲ್ಲಿ ಅಲ್ಲಲ್ಲಿ ಮಳೆ ನೀರು ನಿಂತು, ಚರಂಡಿ ನೀರು ಕುಡಿಯುವ ನೀರಿಗೆ ಮಿಶ್ರಣ ಹಾಗೂ ಸೊಳ್ಳೆಗಳ ಸಂತಾನೋತ್ಪತ್ತಿ ಹೆಚ್ಚಳದಿಂದ ಸಾಂಕ್ರಾಮಿಕ ರೋಗ ಉಲ್ಬಣವಾಗಿ ಕಾಡುವ ಕಾರಣ ಕಟ್ಟೆಚ್ಚರ ವಹಿಸಬೇಕಿದೆ.

ಡೆಂಘೀ ಹಾವಳಿ:

2015ರಲ್ಲಿ 46, 2016ರಲ್ಲಿ 97, 2017ರಲ್ಲಿ 172, 2018ರಲ್ಲಿ 112, 2019ರಲ್ಲಿ 250, 2020ರಲ್ಲಿ 36 ಜನರಲ್ಲಿ ಡೆಂಘೀ ರೋಗ ದೃಢಪಟ್ಟಿತ್ತು. ಸದ್ಯ ಮೂರು ತಿಂಗಳಲ್ಲಿ 152 ಜನರಲ್ಲಿ ಡೆಂಘೀ ರೋಗ ಲಕ್ಷಣ ಕಂಡು ಬಂದಿದ್ದು, ಈ ಪೈಕಿ ತಪಾಸಣೆಗೆ ಒಳಪಡಿಸಿದಾಗ 11 ಜನರಲ್ಲಿ ದೃಢಪಟ್ಟಿದೆ. ಅದರಲ್ಲೂ ಮಾರ್ಚ್‌ ತಿಂಗಳಲ್ಲಿಯೇ ಐದು ಜನರಲ್ಲಿ ಡೆಂಘಿ ದೃಢಪಟ್ಟಿದೆ. ಇನ್ನು ಹುಬ್ಬಳ್ಳಿಯ ಶಹರ ವ್ಯಾಪ್ತಿಯಲ್ಲಿ ನಾಲ್ಕು, ಧಾರವಾಡ ಶಹರ ವ್ಯಾಪ್ತಿಯಲ್ಲಿ ಮೂರು, ಕುಂದಗೋಳ ತಾಲೂಕಿನಲ್ಲಿ ಎರಡು, ಕಲಘಟಗಿ ತಾಲೂಕಿನಲ್ಲಿ ಒಂದು ಡೆಂಘೀ ಪ್ರಕರಣಗಳು ಪತ್ತೆಯಾಗಿವೆ.

ಚಿಕೂನ್‌ಗುನ್ಯಾ ಗುನ್ನ:

2015ರಲ್ಲಿ 17, 2016ರಲ್ಲಿ 6, 2017ರಲ್ಲಿ 11, 2018ರಲ್ಲಿ 85, 2019ರಲ್ಲಿ 121, 2020ರಲ್ಲಿ 17 ಜನರಲ್ಲಿ ಚಿಕೂನ್‌ಗುನ್ಯಾ ಕಾಣಿಸಿಕೊಂಡು ತೊಂದರೆ ಉಂಟು ಮಾಡಿತ್ತು. ಇದೀಗ ಈ ಮೂರು ತಿಂಗಳಲ್ಲಿ ಚಿಕೂನ್‌ಗುನ್ಯಾ ರೋಗ ಲಕ್ಷಣವುಳ್ಳ 104 ಜನರನ್ನು ತಪಾಸಣೆಗೆ ಒಳಪಡಿಸಿದಾಗ ಇಬ್ಬರಲ್ಲಿ ದೃಢಪಟ್ಟಿದ್ದು, ಅದು ಮಾರ್ಚ್‌ ತಿಂಗಳಲ್ಲಿಯೇ ರೋಗ ಪತ್ತೆಯಾಗಿದೆ. ಧಾರವಾಡ ಗ್ರಾಮೀಣ ಹಾಗೂ ಶಹರ ವ್ಯಾಪ್ತಿಯಲ್ಲಿ ತಲಾ ಒಂದು ಪ್ರಕರಣ ಕಂಡು ಬಂದಿದ್ದು, ನಿಧಾನವಾಗಿಯೇ ಚಿಕೂನ್‌ಗುನ್ಯಾ ಗುನ್ನ ನೀಡಲು ಶುರು ಮಾಡಿಬಿಟ್ಟಿದೆ.

ಮಲೇರಿಯಾ-ಮೆದುಳು ಜ್ವರ ಬಾಧೆ:

2015ರಲ್ಲಿ 96, 2016ರಲ್ಲಿ 78, 2017ರಲ್ಲಿ 76, 2018ರಲ್ಲಿ 25, 2019ರಲ್ಲಿ 17, 2020ರಲ್ಲಿ 8 ಜನರಲ್ಲಿ ಕಾಣಿಸಿಕೊಂಡಿದ್ದ ಮಲೇರಿಯಾ ರೋಗವು, ಮೂರು ತಿಂಗಳಲ್ಲಿ ಕುಂದಗೋಳದಲ್ಲಿ ಒಬ್ಬರಲ್ಲಿ ಮಲೇರಿಯಾ ಪತ್ತೆಯಾಗಿದ್ದರೆ, ಮೆದುಳು ಜ್ವರ ಲಕ್ಷಣಗಳು ಕಂಡು ಬಂದರೂ ತಪಾಸಣೆಯಲ್ಲಿ ದೃಢಪಟ್ಟಿಲ್ಲ. ಕೋವಿಡ್‌ ಸೋಂಕಿನ ರೋಗಲಕ್ಷಣಗಳು ಹಾಗೂ ಕೀಟಜನ್ಯ ಸಾಂಕ್ರಾಮಿಕ ರೋಗಗಳ ಗುಣಲಕ್ಷಣಗಳಲ್ಲಿ ಸಾಮ್ಯತೆ ಇರುವ ಕಾರಣ ತಪಾಸಣೆಗೆ ಜನರಿಂದ ಹಿಂದೇಟು ಕಂಡುಬರುತ್ತಿದೆ.

ಜಿಲ್ಲೆಯಲ್ಲಿ ಕೀಟ ಜನ್ಯದಿಂದ (ಸೊಳ್ಳೆ) ಬರುವ ಡೆಂಘೀ, ಚಿಕೂನ್‌ ಗುನ್ಯಾ, ಮಲೇರಿಯಾದಂತಹ ರೋಗಗಳ ಹಾವಳಿಯು ಬೇಸಿಗೆಯ ಕಾಲದಲ್ಲಿ ಕಂಡು ಬಂದಿಲ್ಲ. ಈ ಸಮಯದಲ್ಲಿ ರೋಗಗಳ ಹಾವಳಿ ಮೇಲ್ನೋಟಕ್ಕೆ ತಗ್ಗಿದ್ದರೂ ಮಳೆಗಾಲದಲ್ಲಿ ಉಲ್ಬಣ ಆಗುವ ಆತಂಕ ಇರುವ ಕಾರಣ ಈ ಬಗ್ಗೆ ಅತೀ ಹೆಚ್ಚು ಕಾಳಜಿ ವಹಿಸುವುದು ಸೂಕ್ತ.  –ಡಾ| ಮಂಜುನಾಥ ಎಸ್‌,. ಜಿಲ್ಲಾ ಮಲೇರಿಯಾ ಅಧಿಕಾರಿಗಳು, ಧಾರವಾಡ  

-ಶಶಿಧರ್‌ ಬುದ್ನಿ

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.