ಡಾ.ಕಲಬುರ್ಗಿ ಹತ್ಯೆ ಪ್ರಕರಣ: ಆರೋಪಿಗಳು ಕೋರ್ಟ್ ಗೆ ಹಾಜರ್


Team Udayavani, Oct 17, 2019, 6:31 PM IST

mm-kalburgi

ಧಾರವಾಡ: ಸಂಶೋಧಕ ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಇಲ್ಲಿನ 3ನೇ ಹೆಚ್ಚುವರಿ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಎಸ್ಐಟಿ ಪೊಲೀಸರು ಗುರುವಾರ ಹಾಜರು ಪಡಿಸಿದರು.

ಧಾರವಾಡದ ಕಲ್ಯಾಣ ನಗರದ ಅವರದೇ ನಿವಾಸದಲ್ಲಿ ಎಂ.ಎಂ. ಕಲಬುರ್ಗಿ ಅವರಿಗೆ ಗುಂಡು ಹಾಕಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ತನಿಖೆ ಮಾಡಿದ್ದ ಎಸ್ಐಟಿ ಪೊಲೀಸರು, 6 ಜನ ಆರೋಪಿಗಳನ್ನು 2018ರಲ್ಲಿ ಬಂಧಿಸಿದ್ದಾರೆ.

ಪ್ರಕರಣದ ಪೂರ್ಣ ತನಿಖೆ ಮಾಡಿರುವ ಪೊಲೀಸರು, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದಾರೆ. ಆದ್ದರಿಂದ ಗುರುವಾರ ಆರು ಜನ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಬೇಕಿತ್ತು. ಆದರೆ ಮೈಸೂರಿನಲ್ಲಿ ಇರುವ 1ನೇ ಆರೋಪಿ ಅಮೂಲ್ ಕಾಳೆಗೆ ಆರೋಗ್ಯ ಸರಿಯಿಲ್ಲ ಎಂದು ಹಾಜರು ಪಡಿಸಲು ಸಾಧ್ಯವಾಗಿಲ್ಲ ಎಂದು ಎಸ್ಐಟಿ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದರು. ಅದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಧೀಶೆ ಡಿ. ಮಮತಾ ಅವರು, ಪ್ರಕರಣದ ಪ್ರಮುಖ ಆರೋಪಿಯನ್ನು ಹಲವು ಬಾರಿ ವಿಚಾರಣೆಗೆ ಹಾಜರು ಪಡಿಸಿಲ್ಲ. ಕೇವಲ ನೆಪ ಹೇಳುತ್ತಾ ಗೈರು ಪಡಿಸಲಾಗುತ್ತಿದೆ. ಮುಂದಿನ ವಿಚಾರಣೆಯಲ್ಲಿ ಪ್ರಕರಣದ ಎಲ್ಲ ಆರೋಪಿಗಳನ್ನು ಹಾಜರು ಪಡಿಸುವಂತೆ ಸೂಚಿಸಿ ಅ. 24ಕ್ಕೆ ವಿಚಾರಣೆ ಮುಂದೂಡಿದರು.

ಹಾಜರಿದ್ದ ಆರೋಪಿಗಳು
ಗಣೇಶ ಮಿಸ್ಕಿನ್, ಪ್ರವೀಣ ಚತುರ, ಅಮಿತ್ ಬದ್ದಿ, ವಾಸುದೇವ ಸೂರ್ಯವಂಶಿ, ಶರತ್ ಬಾಹು ಸಾಹೇಬ್ ಅವರನ್ನು ಪೋಲಿಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದರು.

ಧಾರವಾಡದಲ್ಲಿ ಇರಲು ಅವಕಾಶ ನೀಡಿ
ಪ್ರಕರಣದ ಆರೋಪಿ ಅಮಿತ್ ಬದ್ದಿ ವಿಚಾರಣೆ ವೇಳೆ, ನಮ್ಮನ್ನು ಮಹಾರಾಷ್ಟ್ರದ ಜೈಲಿನಲ್ಲಿ ಇಡಲಾಗಿದೆ. ಇದರಿಂದ ಕುಟುಂಬದವರನ್ನು ಭೇಟಿ ಆಗಲು ತೊಂದರೆ ಆಗುತ್ತಿದೆ. ಹೀಗಾಗಿ ನನ್ನನ್ನು ಧಾರವಾಡ ಜೈಲಿನಲ್ಲಿ ಇಡಲು ಅವಕಾಶ ನೀಡುವಂತೆ ನ್ಯಾಧೀಶರಿಗೆ ಮನವಿ ಮಾಡಿದರು. ಅದಕ್ಕೆ ನ್ಯಾಯಾಧೀಶರು, ಅದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ನಿರಾಕರಿಸಿದರು.

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.