ಭೀಮಪಲಾಸ ಸಂಗೀತ ಮಹೋತ್ಸವ ಆರಂಭ

ಸಂಗೀತ ಕೇಳುವುದರಿಂದ ಆರೋಗ್ಯ ಸುಧಾರಣೆ

Team Udayavani, Mar 21, 2022, 10:57 AM IST

4

ಧಾರವಾಡ: ಭಾರತೀಯ ಸಂಗೀತಕ್ಕೆ ಭದ್ರ ಬುನಾದಿ ಹಾಗೂ ಭವಿಷ್ಯ ಇದ್ದು, ಸಂಗೀತದಲ್ಲಿನ ವಿವಿಧ ರಾಗಗಳ ಆಲಿಸುವುದರಿಂದ ರೋಗಗಳು ವಾಸಿ ಆಗಲಿವೆ ಎಂಬ ಮಾತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ನಗರದ ಸೃಜನಾ ರಂಗಮಂದಿರದಲ್ಲಿ ಭಾರತರತ್ನ ಪಂ|ಭೀಮಸೇನ ಜೋಶಿ ಜನ್ಮಶತಮಾನೋತ್ಸವ ಪ್ರಯುಕ್ತ ಜಿ.ಬಿ. ಜೋಶಿ ಮೆಮೋರಿಯಲ್‌ ಟ್ರಸ್ಟ್‌, ಹುಬ್ಬಳ್ಳಿ ಕ್ಷಮತಾ ಸಂಸ್ಥೆಗಳು ಹಮ್ಮಿಕೊಂಡಿರುವ 11 ದಿನಗಳ ಸಂಗೀತೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಇದೀಗ ಸಂಗೀತ ಥೆರಪಿ ಸಹ ಶುರುವಾಗಿದೆ. ಈ ಕ್ಷೇತ್ರದಲ್ಲಿ ಹೆಚ್ಚು ಸಂಶೋಧನೆಗಳು ನಡೆಯಬೇಕು ಎಂದರು.

ಪಂಡಿತ ವಿಷ್ಣು ಭಾತಕಂಡೆ ಅವರು ಅನಂತ ರಾಗಗಳನ್ನು ಸೇರಿಸಿ ಬರೆದ ಹಿಂದೂಸ್ತಾನಿ ಸಂಗೀತ ಪದ್ಧತಿ ಎಂಬ ಗ್ರಂಥ ಇಂದಿಗೂ ಹಿಂದೂಸ್ತಾನಿ ಸಂಗೀತಕ್ಕೆ ಆಧಾರವಾಗಿದೆ. ಸಂಗೀತದ ಪ್ರತಿಯೊಂದು ರಾಗಗಳಿಗೂ ನಿಯಮಗಳಿವೆ. ಅವುಗಳನ್ನು ಕೇಳುವುದರಿಂದಲೂ ಮನುಷ್ಯನ ಆರೋಗ್ಯದಲ್ಲಿ ಸುಧಾರಣೆ ಆಗುತ್ತದೆ. ಹೀಗಾಗಿ ಸಂಗೀತದ ರಾಗಗಳ ಮೇಲೆ ಸಂಶೋಧನೆ ಆಗಬೇಕು. ನಮ್ಮ ಸಂಗೀತ, ಯೋಗ, ಜೀವನ ಪದ್ಧತಿಗೆ ದೇಶದಲ್ಲಿ ದೊಡ್ಡ ಬೆಲೆ ಇದೆ. ಜಗತ್ತಿನ ಅನೇಕ ದೇಶದ ಜನರು ಅಧ್ಯಯನ ಮಾಡುತ್ತಿದ್ದು, ಇದು ಹೆಮ್ಮೆಯ ಸಂಗತಿ ಎಂದರು. ಸಂಗೀತಕ್ಕೆ ಹೊಸ ವಿಧಾನ ಮತ್ತು ಆಯಾಮ ತಂದು ಕೊಟ್ಟ ಭಾರತರತ್ನ ಪಂ|ಭೀಮಸೇನ ಜೋಶಿ ಅವರಿಂದ ಮರಾಠಿ ಅಭಂಗ, ದಾಸವಾಣಿ ಸಾಕಷ್ಟು ಪ್ರಸಿದ್ಧಿ ಪಡೆದವು. ಈ ಸಾಧನೆಗೆ ಹಿನ್ನೆಲೆ ಬೇಕಿಲ್ಲ ಎಂಬುದನ್ನು ಅವರು ಸಾಬೀತು ಮಾಡಿದ್ದಾರೆ. ಮನೆ ಕೆಲಸದೊಂದಿಗೆ ಸಂಗೀತ ಕಲಿತು ಸಾಧನೆ ಮಾಡಿದ ಅವರು ಸಂಗೀತ ಕ್ಷೇತ್ರದಲ್ಲಿ ಚಿರಸ್ಥಾಯಿಯಾಗಿ ಉಳಿಸಿದ್ದಾರೆ. ಮನುಷ್ಯನಲ್ಲಿ ಕಲಿಕೆಯ ಆಸಕ್ತಿ ಇದ್ದರೆ ಜೀವನದಲ್ಲಿ ಯಾವ ಮಟ್ಟದಲ್ಲಿ ಸಾಧನೆ ಮಾಡಬಹುದು ಎಂಬುದಕ್ಕೆ ಇವರೇ ಸಾಕ್ಷಿ ಎಂದರು.

ಶಾಸಕ ಅರವಿಂದ ಬೆಲ್ಲದ ಮಾತನಾಡಿ, ರಾಜ್ಯ ಸರ್ಕಾರದಿಂದ ಭೀಮಸೇನ ಜೋಶಿ ಶತಮಾನೋತ್ಸವ ನಿಮಿತ್ತ 3 ದಿನದ ಸಮಾರಂಭ ಆಯೋಜಿಸಲು ಸಿಎಂಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಅವರು ಒಂದು ವಾರದ ಕಾರ್ಯಕ್ರಮ ನಡೆಸಲು ಸೂಚಿಸಿ, ಬಜೆಟ್‌ನಲ್ಲಿ ಅನುದಾನ ಸಹ ನೀಡಿದ್ದಾರೆ. ಸಾಹಿತ್ಯ, ಕಲಾಭಿಮಾನಿಗಳ ತವರೂರಾದ ಧಾರವಾಡಕ್ಕೆ ಲಲಿತ ಕಲಾ ಅಕಾಡೆಮಿ ಬಂದಿದೆ. ಕಲಾ ಗ್ರಾಮಕ್ಕೆ ಜಾಗೆ ಹುಡುಕುತ್ತಿದ್ದು, ಶೀಘ್ರದಲ್ಲೇ ನಿಗದಿ ಮಾಡಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಭೀಮಫಲಾಸ್‌ ಸಂಗೀತ ಕಾರ್ಯಕ್ರಮಕ್ಕೆ ಸಹಕಾರ ನೀಡಿದವರನ್ನು ಸನ್ಮಾನಿಸಲಾಯಿತು. ಇದಕ್ಕೂ ಮುನ್ನ ನವದೆಹಲಿಯ ಪಂ|ರಾಜೇಂದ್ರ ಪ್ರಸನ್ನ ಬಾನ್ಸುರಿ ವಾದನ ಪ್ರಸ್ತುತಪಡಿಸಿದರೆ, ಮಧ್ಯಾಹ್ನ ಪಂ| ಜಯತೀರ್ಥ ಮೇವುಂಡಿ ಗಾಯನ, ಪುಣೆಯ ರಾಮದಾಸ ಫ‌ಳಸುಲೆ ತಬಲಾ ಸೋಲೊ, ಸಂಜೆ ಪುಣೆಯ ನಿಷಾದ ಬಾಕ್ರೆ, ವಿದುಷಿ ಅನುರಾಧಾ ಕುಬೇರ ಗಾಯನ ಪ್ರಸ್ತುತಪಡಿಸಿದರು. ಎಲ್‌ಐಸಿಯ ಹಿರಿಯ ವಿಭಾಗೀಯ ವ್ಯವಸ್ಥಾಪಕ ಎಂ.ಮನೋಹರ, ಡಾ|ರಮಾಕಾಂತ ಜೋಶಿ, ಸಮೀರ ಜೋಶಿ, ಅನಂತ ಹರಿಹರ ಇನ್ನಿತರರಿದ್ದರು. ಕ್ಷಮತಾ ಸಂಸ್ಥೆಯ ಗೋವಿಂದ ಜೋಶಿ ಸ್ವಾಗತಿಸಿದರು.

 

ನಮ್ಮದರ ಮೇಲೆ ನಮಗೆ ವಿಶ್ವಾಸ ಕಡಿಮೆ. ಭಗವದ್ಗೀತೆ ಇಂಗ್ಲಿಷ್‌ನಲ್ಲಿ ಬರೋವರೆಗೆ ಬಹಳ ಜನ ನಂಬಿರಲಿಲ್ಲ. ಈಗ ಭಗವದ್ಗೀತೆ ಬಗ್ಗೆ ಜಾಗೃತಿ ಆಗುತ್ತಿರುವುದು ಒಳ್ಳೆಯದು. ಅದರಲ್ಲೂ ಪಠ್ಯದಲ್ಲಿ ಭಗವದ್ಗೀತೆ ತರುವ ವಿಚಾರ ನಡೆದಿದ್ದು, ಈ ಬಗ್ಗೆ ಜಾತ್ಯತೀತರನ್ನು ಬಿಟ್ಟು ಉಳಿದವರೆಲ್ಲರೂ ಒಪ್ಪುತ್ತಿದ್ದಾರೆ. ಜಾತ್ಯತೀತತೆ ಅನ್ನೋದು ಒಂದು ವಿಚಿತ್ರ. ಅದೊಂದು ಧರ್ಮಾತೀತತೆ ಎಂದು ತಿಳಿದಿದ್ದಾರೆ. ಧರ್ಮದ ಆಧಾರದ ಮೇಲೆ ಜೀವನ ನಡೆಯಬೇಕು. ರಾಜಕೀಯದಲ್ಲಿಯೂ ಧರ್ಮ ಬೇಕು. ಧರ್ಮ ರಹಿತ ಜೀವನ, ರಾಜಕೀಯ ಶೂನ್ಯವಾಗುತ್ತದೆ. ಧರ್ಮ ಇಲ್ಲದೇ ಹೋದಲ್ಲಿ ಎರಡೂ ಶೂನ್ಯ ಆಗಿ ಬಿಡುತ್ತವೆ.

-ಪ್ರಹ್ಲಾದ ಜೋಶಿ, ಕೇಂದ್ರ ಸಚಿವ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.