ನವ ಕರ್ನಾಟಕಕ್ಕಾಗಿ ಇನ್ನೊಮ್ಮೆ ಹರಸಿ
Team Udayavani, Oct 24, 2017, 12:53 PM IST
ಧಾರವಾಡ: ಕಾಂಗ್ರೆಸ್ ಸರ್ಕಾರ ಕಳೆದ ನಾಲ್ಕೂವರೆ ವರ್ಷದಲ್ಲಿ ನುಡಿದಂತೆ ನಡೆದು ನವ ಕರ್ನಾಟಕ ನಿರ್ಮಾಣ ಮಾಡುವ ಪಣ ತೊಟ್ಟಿದ್ದು, ಇನ್ನೂ ಒಂದು ಬಾರಿ ಜನರು ಇದೇ ಸರ್ಕಾರ ಅಧಿಕಾರಕ್ಕೆ ಬರಲು ಆಶೀರ್ವಾದ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿಕೊಂಡರು.
ಇಲ್ಲಿನ ಕೃಷಿ ವಿವಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬೆಳಗಾವಿ ವಿಭಾಗದ ಏಳು ಜಿಲ್ಲೆಗಳ “ಭರವಸೆಗಳ ಸಾಕಾರದ ಸಂಭ್ರಮ’ ಕಾರ್ಯಕ್ರಮದಲ್ಲಿ ಏಳು ಜಿಲ್ಲೆಗಳ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿತರಿಸಿ ಅವರು ಮಾತನಾಡಿದರು.
ನಾಲ್ಕೂವರೆ ವರ್ಷದಲ್ಲಿ ಚುನಾವಣೆಗೂ ಮುಂಚೆ ಪ್ರಣಾಳಿಕೆಯಲ್ಲಿ ನೀಡಿದ್ದ 165 ಭರವಸೆಗಳ ಪೈಕಿ 155 ಭರವಸೆಗಳನ್ನು ಈಡೇರಿಸಿದ್ದೇವೆ. ಸರ್ಕಾರದ ಅನ್ನಭಾಗ್ಯ, ಕೃಷಿಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ವಿವಿಧ ಭಾಗ್ಯಗಳನ್ನು 4 ಕೋಟಿ ಜನರು ಪಡೆದುಕೊಂಡಿದ್ದಾರೆ. ಪ್ರಣಾಳಿಕೆ ಮಾತ್ರವಲ್ಲ, ಅದನ್ನು ಹೊರತುಪಡಿಸಿ ಮಾತೃಪೂರ್ಣ, ಆರೋಗ್ಯಭಾಗ್ಯ.
ಸಾಲ ಮನ್ನಾ, ಇಂದಿರಾ ಕ್ಯಾಂಟೀನ್ನಂತಹ ಅನೇಕ ಜನಪರ ಯೋಜನೆಗಳನ್ನು ಸರ್ಕಾರ ಮಾಡಿದೆ ಎಂದರು. ಕಾಂಗ್ರೆಸ್ ತಾನು ಕೊಟ್ಟ ಮಾತಿನಂತೆ ನಡೆದುಕೊಂಡಿದೆ. ಜನರ ವಿಶ್ವಾಸಕ್ಕೆ ದ್ರೋಹ ಮಾಡಿಲ್ಲ. ಹೀಗಾಗಿ ನವ ಕರ್ನಾಟಕ ನಿರ್ಮಾಣ ಮಾಡಲು ಹೊರಟಿರುವ ಕಾಂಗ್ರೆಸ್ಗೆ ರಾಜ್ಯದ ಜನರು ಇನ್ನೊಂದು ಬಾರಿ ಅಧಿಕಾರ ನೀಡಿ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿಕೊಂಡರು.
ಬಿಜೆಪಿ ಸಾಧನೆಯೇ ಶೂನ್ಯ: ಭರವಸೆಗಳ ಸಾಕಾರದ ಸಂಭ್ರಮ ಸಮಾವೇಶ ಶೂನ್ಯ ಸಾಧನೆ ಎಂದು ಬಿಜೆಪಿಯವರು ಜರಿಯುತ್ತಿದ್ದಾರೆ. ಆದರೆ ಬಿಜೆಪಿಯ ಐದು ವರ್ಷ ಅವಧಿಗೆ ಹೋಲಿಸಿದರೆ ಕಾಂಗ್ರೆಸ್ನ ಅವಧಿಯಲ್ಲಿ ಅದರ ನಾಲ್ಕು ಪಟ್ಟು ಕೆಲಸಗಳಾಗಿವೆ.
ಅವರು ನೀರಾವರಿಗೆ 22 ಸಾವಿರ ಕೋಟಿ ಖರ್ಚು ಮಾಡಿದರೆ ನಾವು 60 ಸಾವಿರ ಕೋಟಿ ಅನುದಾನ ನೀಡಿದ್ದೇವೆ. ಎಸ್ಸಿ, ಎಸ್ಟಿ ಜನರಿಗೆ ಅವರು 21 ಸಾವಿರ ಕೋಟಿ ನೀಡಿದರೆ, ನಾವು ಕಾಂಗ್ರೆಸ್ 87 ಸಾವಿರ ಕೋಟಿ ಅನುದಾನ ಪೂರೈಸಿದ್ದೇವೆ. ಆದರೆ ಸರ್ಕಾರದ ವಿರುದ್ಧ ಸುಳ್ಳುಗಳನ್ನೇ ಮತ್ತೆ ಮತ್ತೆ ಹೇಳಿ ಅದನ್ನು ಜನರು ನಂಬುವಂತೆ ಮಾಡಲು ಬಿಜೆಪಿ ಪ್ರಯತ್ನ ಮಾಡುತ್ತಿದೆ ಎಂದರು.
300 ಇಂದಿರಾ ಕ್ಯಾಂಟೀನ್: ಬಡವರ ಪರವಾಗಿ ಕೆಲಸ ಮಾಡುವ ಕಾಂಗ್ರೆಸ್ ಸರ್ಕಾರ ಬಡವರಿಗೆ ಅನ್ನಭಾಗ್ಯ, ಕ್ಷೀರ ಭಾಗ್ಯ ಕೃಷಿ ಭಾಗ್ಯದಂತಹ ಸೌಲಭ್ಯಗಳನ್ನು ಕೊಟ್ಟಿದೆ. ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ಇದೀಗ ಇಂದಿರಾ ಕ್ಯಾಂಟೀನ್ ಆರಂಭಿಸಿದೆ. ಬೆಂಗಳೂರಿನಲ್ಲಿಯೇ 200 ಇಂದಿರಾ ಕ್ಯಾಂಟೀನ್ ಬರಲಿದ್ದು, ರಾಜ್ಯದ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ 300 ಇಂದಿರಾ ಕ್ಯಾಂಟೀನ್ ಆರಂಭಿಸುತ್ತೇವೆ ಎಂದರು.
ಏಳು ಜಿಲ್ಲೆಗಳಿಗೆ ಸೌಲಭ್ಯ: ಕಾರ್ಯಕ್ರಮದಲ್ಲಿ ಧಾರವಾಡ, ಹಾವೇರಿ, ಗದಗ, ಕಾರವಾರ, ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಯ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಸೌಲಭ್ಯಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿತರಿಸಿದರು. ವಾರ್ತಾ ಇಲಾಖೆ ನಿರ್ದೇಶಕ ಡಾ| ಹರ್ಷಾ ಪಿ.ಎಸ್. ಸ್ವಾಗತಿಸಿದರು. ಶಂಕರ ಪ್ರಕಾಶ ನಿರೂಪಿಸಿದರು. ಧಾರವಾಡ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ವಂದನಾರ್ಪಣೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubbali: ಅಪಾರ್ಟ್ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು
Dr G Parameshwar: ಸೆನ್ ಠಾಣೆಗಳಿಗೂ ಎಸ್ಪಿ ಕೇಡರ್: ಗೃಹ ಸಚಿವ
Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ
ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್
Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hubbali: ಅಪಾರ್ಟ್ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.