Karnataka Election: ಯಾರೇ ಬಂದರೂ ಕ್ಷೇತ್ರದ ಜನ ನನ್ನ ಕೈ ಬಿಡುವುದಿಲ್ಲ: ಜಗದೀಶ್ ಶೆಟ್ಟರ್


Team Udayavani, Apr 28, 2023, 5:46 PM IST

Karnataka Election: ಯಾರೇ ಬಂದರೂ ಕ್ಷೇತ್ರದ ಜನ ನನ್ನ ಕೈ ಬಿಡುವುದಿಲ್ಲ: ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಬಿಜೆಪಿ ರಾಷ್ಟ್ರ-ರಾಜ್ಯ ನಾಯಕರು ಜಗದೀಶ ಶೆಟ್ಟರನ್ನ ಸೋಲಿಸಲೇಬೇಕೆಂದು ಚಾಲೆಂಜ್ ಮಾಡಿದಂತಿದೆ.ಆದರೆ ಕ್ಷೇತ್ರದ ಮತದಾರರು ಮಾತ್ರ ನನ್ನನ್ನು ಗೆಲ್ಲಿಸಲೇಬೇಕೆಂಬುದನ್ನು ಚಾಲೆಂಜ್ ಆಗಿ ತೆಗೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ ಆರೋಪಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಜಗದೀಶ ಶೆಟ್ಟರನನ್ನು ಸೋಲಿಸಲು ಕೇಂದ್ರ-ರಾಜ್ಯ ಸರಕಾರಗಳು, ಇಡೀ ಬಿಜೆಪಿಯೇ ಟೊಂಕ ಕಟ್ಟಿ ನಿಂತಂತಿದೆ. ಯಾರೇ ಬಂದರೂ ಕ್ಷೇತ್ರದ ಜನ ನನ್ನ ಕೈ ಬಿಡುವುದಿಲ್ಲ ಎಂದರು.

ಏನು ಮಾಡಿದರು ಜಗದೀಶ ಶೆಟ್ಟರ ಸ್ವಲ್ಪ ಸಿಟ್ಟಾಗಿ ಸುಮ್ಮನಾಗಿ ಬಿಡುತ್ತಾರೆ ಎಂದು ಕೊಂಡಿದ್ದರು. ನನ್ನನ್ನು ರಾಜಕೀಯವಾಗಿ ಮೂಲೆಗುಂಪು ಮಾಡುವ ಹುನ್ನಾರ, ಸ್ವಾಭಿಮಾನಕ್ಕೆ ಧಕ್ಕೆ ತಂದಿದ್ದರಿಂದ ಬಿಜೆಪಿ ಬಿಟ್ಟು ಹೊರ ಬಂದೆ, ನಾನು ಕಾಂಗ್ರೆಸ್ ಸೇರಿರುವುದು ಬಿಜೆಪಿಯವರಿಗೆ ತಳಮಳ ಶುರುವಾಗಿದೆ ಎಂದರು.

ಬಿಜೆಪಿಯಲ್ಲಿ ಲಿಂಗಾಯತ ರನ್ನು ಮೂಲೆಗುಂಪು ಹಾಗೂ ನನ್ನ ಟಿಕೆಟ್ ತಪ್ಪಲು ಬಿ.ಎಲ್.ಸಂತೋಷ ಕಾರಣ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಕ್ಕಾಗಿಯೇ ನನ್ನನ್ನು ಸೋಲಿಸಲೇಬೆಂಬ ಸರ್ವ ಯತ್ನಗಳು ನಡೆಯುತ್ತಿವೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಎಲ್ಲ ರೀತಿಯ ಒತ್ತಡ, ನಿರ್ವಹಣೆಗೆ ಮುಂದಾಗಿದ್ದಾರೆ.

ಹಲವು ಪಾಲಿಕೆ ಸದಸ್ಯರು ಮಾನಸಿಕವಾಗಿ ನನ್ನನ್ನು ಬೆಂಬಲಿಸುವ ಮನೋಭಾವ ಹೊಂದಿದ್ದರು ಅವರ ಮೇಲೆ ಒತ್ತಡ ತರುವ, ಬೆದರಿಸುವ ಅವರ ಮೇಲೆಯೇ ಗೂಢಚಾರ ನಡೆಸುವ, ನಿಗಾ ಇರಿಸುವ ಯತ್ನಕ್ಕೆ ಜೋಶಿಯವರು ಮುಂದಾಗಿದ್ದು, ಫೋನ್ ಮಾಡಿ ಹೆದರಿಸುವುದು ಮಾಡುತ್ತಿದ್ದು, ಇನ್ನೊಂದು ಪಕ್ಷದ ಗೂಂಡಾಗಿರಿ ಬಗ್ಗೆ ಮಾತನಾಡುವವರು, ಇದೀಗ ತಾವೇನು ಮಾಡುತ್ತಿದ್ದಾರೆ ಎಂಬುದನ್ನು ಹೇಳಲಿ ಎಂದರು.

ಪಾಲಿಕೆ ಕಾಂಗ್ರೆಸ್ ಸದಸ್ಯರಿಗೆ ಒತ್ತಡ ತರುವುದು, ಹೆದರಿಕೆ ಹಾಕುವ ಯತ್ನಗಳು ನಡೆಯುತ್ತಿದ್ದು, ನನ್ನ ಮನೆ ಸುತ್ತಲು ಗುಪ್ತಚರ ಕಾರ್ಯ ನಿಯೋಜಿಸಲಾಗಿದೆ. ಯಾರು ಬರುತ್ತಾರೆ ಎಂಬ ಮಾಹಿತಿ ಪಡೆದು ಅವರನ್ನು ಸಂಪರ್ಕಿಸುವ ಕಾರ್ಯ ನಡೆಯುತ್ತಿದೆ ಎಂದರು.

ಒಂದು ವೇಳೆ ಬಿಜೆಪಿ ಅಧಿಕಾರಕ್ಕೆ ಬಂದರೆ ಲಿಂಗಾಯತ ನಾಯಕತ್ವವನ್ನು ಸರಕಾರ ಮಾಡುವ ಹುನ್ನಾರವೂ ನಡೆದಿದೆ. ಲಿಂಗಾಯತರಿಗೆ ಅವಕಾಶ ನೀಡಿದರು ಅದು ಮಹತ್ವದ್ದಲ್ಲದಿರಬೇಕು ಎಂಬ ವ್ಯವಸ್ಥಿತ ಹುನ್ನಾರ ಬಿಜೆಪಿಯಲ್ಲಿ ನಡೆದಿದೆ ಎಂದು ಗಂಭೀರವಾಗಿ ಆರೋಪಿಸಿದರು.

ಬಿಜೆಪಿ ಯವರು ನನ್ನ ಮೇಲೆ ಮುಗಿಬಿದ್ದಷ್ಟು ಜನ ನನ್ನನ್ನು ಇನ್ನಷ್ಟು ಹತ್ತಿರಕ್ಕೆ ಕರೆದುಕೊಳ್ಳುತ್ತಿದ್ದಾರೆ. ಯಾರು ಏನೆ ಮಾಡಿದರು ಜನ ನನ್ನನ್ನು ಗೆಲ್ಲಿಸಲಿದ್ದಾರೆ ಎಂದರು.

ಬಿ.ಎಸ್.ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪನಂತಹವರು ನನ್ನ ವಿರುದ್ಧ ಏನೇ ಟೀಕೆ ಮಾಡಲಿ ಅದನ್ನು ಆಶೀರ್ವಾದ ಎಂದು ಭಾವಿಸುತ್ತೇನೆ ಎಂದರು

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.