ವ್ಯಾಪಾರ ಮಾಡೋಕೆ ಶೆಟ್ಟರ ಅಲ್ಲ, ಸುಳ್ಳನ್ನು ಸತ್ಯ ಮಾಡೋ ಜೋಶಿಯೂ ಅಲ್ಲ
Team Udayavani, Sep 20, 2017, 12:31 PM IST
ನವಲಗುಂದ: ವ್ಯಾಪಾರ ಮಾಡೋಕೆ ನಾನು ಶೆಟ್ಟರ ಅಲ್ಲ, ನೂರು ಸುಳ್ಳು ಹೇಳಿ ಅದೇ ಸತ್ಯವೆಂದು ಹೇಳುವ ಜೋಶಿಯೂ ಅಲ್ಲ. ನಾನು ಒಕ್ಕಲುತನ ಮಾಡುತ್ತೇನೆ. ಸುಳ್ಳು ಹೇಳುವ ಅಭ್ಯಾಸ ನನಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು.
ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಉದ್ಘಾಟನೆಗೆ ಆಗಮಿಸಿದ್ದ ವೇಳೆ ಪಕ್ಞಾತೀತ ಹೋರಾಟ ಸಮಿತಿ ರೈತ ಹೋರಾಟಗಾರರು ಸಚಿವರಿಗೆ ಮುತ್ತಿಗೆ ಹಾಕಿ ಪಶ್ನೆಗಳ ಸುರಿಮಳೆ ಗೈದರು. ಈ ವೇಳೆ ಮೇಲಿನಂತೆ ಸಚಿವರು ಪ್ರತಿಕ್ರಿಯಿಸಿದರು. ಪಕ್ಞಾತೀತ ಹೋರಾಟ ಸಮಿತಿ ಅಧ್ಯಕ್ಷ ಲೋಕನಾಥ ಹೆಬಸೂರ ಮಾತನಾಡಿ, ಉಪವಾಸ ಸತ್ಯಾಗ್ರಹ ಕುಳಿತ ಸಂದರ್ಭದಲ್ಲಿ ರೈತರಿಗೆ ನೀಡಿದ ಭರವಸೆಯಂತೆ ನಡೆದುಕೊಂಡಿಲ್ಲ.
ರೈತರಿಗೆ ಅನ್ಯಾಯ ಮಾಡುತ್ತಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡರು. ನಂತರ ಮಾತನಾಡಿದ ಉಸ್ತುವಾರಿ ಸಚಿವರು, ಗೋವಾ ರಾಜ್ಯದಲ್ಲಿ ಬಿಜೆಪಿ ಆಡಳಿತ ಇರುವುದರಿಂದ ಅಲ್ಲಿ ಮೊದಲು ನಾವು ಹೋಗಿ ಮಾತುಕತೆ ಮಾಡಿಕೊಂಡು ಬರುತ್ತೇವೆಂದು ಬಿಜೆಪಿಯವರು ಸರ್ವ ಪಕ್ಷ ಸಭೆಯಲ್ಲೇ ಭರವಸೆ ನೀಡಿದ್ದರು.
ಬಿಜೆಪಿಯವರು ಗೋವಾ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಿ ದಿನಾಂಕ ನಿಗದಿ ಮಾಡಿದರೆ ನಾವೆಲ್ಲರೂ ಗೋವಾಕ್ಕೆ ತೆರಳಲು ಸಿದ್ಧರಿದ್ದೇವೆ ಎಂದರು. ಅದಕ್ಕೆ ಪ್ರತಿಕ್ರಿಯಿಸಿದ ರೈತರು, ನೀವು ಅವರ ಮೇಲೆ, ಅವರು ನಿಮ್ಮ ಮೇಲೆ ದೋಷಾರೋಪ ಮಾಡುತ್ತಾರೆ. ರೈತರು ಏನು ಮಾಡಬೇಕು ನೀವು ಹೇಳಿ ಎಂದು ಪಟ್ಟು ಹಿಡಿದರು.
ಕಡಲೆ ಬೀಜದ ದರ ಧಾರವಾಡ ಜಿಲ್ಲೆಯಲ್ಲಿ ಒಂದಿದ್ದರೆ, ಗದಗ ಜಿಲ್ಲೆಯಲ್ಲಿ ಮತ್ತೂಂದು ದರವಿದೆ. ಈ ಸಮಸ್ಯೆ ಸರಿಪಡಿಸಬೇಕೆಂದು ಆಗ್ರಹಿಸಿದರು. ಶಾಸಕ ಎನ್.ಎಚ್. ಕೋನರಡ್ಡಿ, ರೈತ ಮುಖಂಡ ಸುಬಾಸಚಂದ್ರಗೌಡ ಪಾಟೀಲ, ರವಿಗೌಡ ಪಾಟೀಲ, ಸಂಗಪ್ಪ ನಿಡವಣಿ, ಡಿ.ವಿ. ಕುರಹಟ್ಟಿ, ಸದುಗೌಡ ಪಾಟೀಲ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ
Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Hagga movie review: ರೋಚಕ ರಹಸ್ಯದ ಕಥಾನಕ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.