ಅಡ್ಡಗಾಲು ಹಾಕುವವರು ಲಿಂಗಾಯತ ವಿರೋಧಿಗಳು


Team Udayavani, Jul 25, 2017, 12:07 PM IST

hub3.jpg

ಧಾರವಾಡ: ಲಿಂಗಾಯತ ಧರ್ಮ ಸ್ವತಂತ್ರ ಧರ್ಮ ಆಗಲು ಅಡ್ಡಗಾಲು ಹಾಕುವವರು ಧರ್ಮ ವಿರೋಧಿಗಳು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್‌.ಆರ್‌. ಪಾಟೀಲ ಹೇಳಿದರು. ನಗರದ ಮುರುಘಾಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಒಂದು ತಿಂಗಳ ಕಾಲ ಹಮ್ಮಿಕೊಂಡಿರುವ ಬೀದರ್‌ ಜಿಲ್ಲೆಯ ಬಸವ ಕಲ್ಯಾಣದ ಅನುಭವ ಮಂಟಪದ ಶ್ರೀ ಸಂಗಮೇಶ್ವರ ದೇವರು ನೀಡಲಿರುವ “ವಚನ ದರ್ಶನ’ ಪ್ರವಚನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 

ಲಿಂಗಾಯತ ಧರ್ಮ ಸ್ವತಂತ್ರ ಧರ್ಮವಾಗಿ ಘೋಷಣೆ ಆಗುವವರೆಗೂ ನಾವು ವಿಶ್ರಮಿಸಬಾರದು. ಅದು ಕಾರ್ಯರೂಪಕ್ಕೆ ಬರಲು ನಾವೆಲ್ಲರೂ ಒಕ್ಕೊರಲಿನಿಂದ ಕೆಲಸ ಮಾಡೋಣ. ಸ್ವತಂತ್ರ ಧರ್ಮಕ್ಕೆ ಎಲ್ಲಾ ಮಂತ್ರಿ- ಶಾಸಕರನ್ನು ಗಮನಕ್ಕೆ ಪಡೆದು ಸಾಂಕೇತಿಕವಾಗಿ ಶ್ರಮಿಸೋಣ. ಲಿಂಗಾಯತ ಧರ್ಮಕ್ಕೆ ಮಾನ್ಯತೆ ಸಿಗಲೇಬೇಕಿದೆ.

ಅದು ಸಿಕ್ಕರೆ ಸಮಾಜಕ್ಕೆ ಸೌಲಭ್ಯಗಳು ಸಿಗಲಿದ್ದು, ಕೆಳಮಟ್ಟದಿಂದ ಎಲ್ಲರಿಗೂ ಅವಕಾಶ ಲಭಿಸಲಿದೆ  ಎಂದರು. ಪ್ರವಚನ ಕೇಳಿದರಷ್ಟೇ ಸಾಲದು. ಅದರಲ್ಲಿರುವ ಸಾರ ಚಿಂತನ ಹಾಗೂ ಶರಣ-ಸಂತ ದಾಸರ ವಿಚಾರಧಾರೆ ಅರಿತು ಚಿಂತನ-ಮಂತನ ಮಾಡಬೇಕು. ಶ್ರಾವಣ ಮಾಸ ಎಂಬುದು ಮಹತ್ವದ ದಿನ.

ಇಲ್ಲಿ ಪ್ರವಚನಕಾರರು ಹೇಳುವ ಅರ್ಥಪೂರ್ಣ ವಿಚಾರಗಳನ್ನು ನಾವೆಲ್ಲ ಮನನ ಮಾಡಿಕೊಳ್ಳಬೇಕು ಎಂದು ಹೇಳಿದರು. ಕೇವಲ ಶ್ರಾವಣ ಮಾಸದಲ್ಲಿ ಅಷ್ಟೇ ಅಲ್ಲದೆ ನಿರಂತರ ನಡೆಯುವ ಸತ್ಸಂಗದಲ್ಲಿ ಭಾಗವಹಿಸಿ, ಮೌಲ್ಯಯುತ ವಿಚಾರಧಾರೆ ಅರಿತು ಅನುಷ್ಠಾನ ಮಾಡಿಕೊಂಡರೆ ಜೀವನ ಸಾರ್ಥಕ ಆಗುವುದು.

ಮಠಗಳಲ್ಲಿ ಅಷ್ಟೇ ಅಲ್ಲದೇ ಮನೆ-ಮನಗಳಲ್ಲಿ ಚಿಂತನ ಮಂಥನ ನಡೆಸಿದರೆ ದೇಶದ ಅಭಿವೃದ್ಧಿಗೆ ಪೂರಕವಾಗಲಿದೆ. ಜಾತಿ ವರ್ಗದ ಭೇದ ಭಾವ ಇರದ ಶ್ರೀಮಠಗಳು ಜ್ಞಾನ ದಾಸೋಹ ಮಾಡುತ್ತಿವೆ. ಕೆಲವು ಮಠಗಳು ಒಂದೇ ಜಾತಿ-ಮತಕ್ಕೆ ಸೀಮಿತವಾಗಿ ಕೆಲಸ ಮಾಡುತ್ತಿರುವುದು ವಿಷಾದನೀಯ ಎಂದರು. 

ಜಾತ್ಯತೀತ ಮಠಗಳು ಸಮಾಜ ಕಲ್ಯಾಣ ಪರ ಕೆಲಸ ಮಾಡಿ ಪ್ರೇರಣೆ ನೀಡುತ್ತವೆ. ಚುನಾಯಿತ ಸರಕಾರಗಳು ಕೂಡ ಬಸವಾದಿ ಶರಣರ ತತ್ವ ಪಾಲನೆ ಮಾಡಿದರೆ ಎಲ್ಲರ ಅಭಿವೃದ್ಧಿ ಆಗುತ್ತದೆ. ಇದರೊಂದಿಗೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ಈಗಿನ ಕರ್ನಾಟಕ ಸರಕಾರ ಕೂಡ ಶರಣದ ಆಶಯದಂತೆ ನುಡಿದಂತೆ ನಡೆದ ಸರಕಾರ.

ನುಡಿದಂತೆಯೇ ನಡೆಯುತ್ತಿದೆ. ಚುನಾವಣೆ ಪೂರ್ವದಲ್ಲಿ ಭರವಸೆ ನೀಡಿದ ನಮ್ಮ ಸರಕಾರ 150ಕ್ಕೂ ಹೆಚ್ಚು ಯೋಜನೆ ಜಾರಿ ಮಾಡಿ ಅನುಷ್ಠಾನಗೊಳಿಸಿದೆ ಎಂದರು. ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ವಚನ ಪರಿಮಳ ಭಾಗ-2 ಗ್ರಂಥ ಬಿಡುಗಡೆ ಮಾಡಿದರು.

ತಿಪಟೂರಿನ ರುದ್ರಮುನಿ ಸ್ವಾಮೀಜಿ, ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಸುಪ್ರದ ಕಟ್ಟಡ ನಿರ್ಮಾಣ ಸಂಸ್ಥೆಯ ನಿರ್ದೇಶಕ ಭುಜಂಗ ಶೆಟ್ಟಿ ಇದ್ದರು. ಡಾ| ಶಂಭುಲಿಂಗ ಹೆಗಡಾಳ ಪ್ರಾಸ್ತಾವಿಕ ಮಾತನಾಡಿದರು. ಗಾಯಕ  ಜಯದೇವಿ ಜಂಗಮಶೆಟ್ಟಿ ಅವರಿಂದ ವಚನ ಸಂಗೀತ ಕಛೇರಿ ನಡೆಯಿತು. ಎಪಿಎಂಸಿ ಸದಸ್ಯ ಶ್ರೀಶೈಲ ಸುರೇಬಾನ ಹಾಗೂ ವಕೀಲರ ಸಂಘದ ಅಧ್ಯಕ್ಷ ರಾಜಶೇಖರ ಬೆಳ್ಳಕ್ಕಿ ಅವರನ್ನು ಸನ್ಮಾನಿಸಲಾಯಿತು. 

ಟಾಪ್ ನ್ಯೂಸ್

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

Madikeri ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ

Madikeri ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ

rain 3

RED alert; ಜು.6 ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೆಟ್ಟರ್

Hubli; ಮುಡಾ ಹಗರಣ ತನಿಖೆಯನ್ನು ಸಿಬಿಐಗೆ ವಹಿಸಲಿ: ಶೆಟ್ಟರ್ ಆಗ್ರಹ

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

Mahesh

Hubli; ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಬಿದ್ದರೆ ನಮ್ಮ ಹೈಕಮಾಂಡ್..: ಮಹೇಶ ಟೆಂಗಿನಕಾಯಿ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

Madikeri ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ

Madikeri ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.