ವಿವಿಧ ಸೌಲಭ್ಯ ನೀಡಲು ಕ್ರಮ: ಗುಪ್ತಾ


Team Udayavani, Jan 13, 2017, 11:59 AM IST

hub1.jpg

ಹುಬ್ಬಳ್ಳಿ: ನೈರುತ್ಯ ರೈಲ್ವೆ ವಲಯ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಇಲ್ಲಿವರೆಗೆ ಸುಮಾರು 32.19 ಮಿಲಿಯನ್‌ ಟನ್‌ ಸರಕು ಹಾಗೂ 146.18 ಮಿಲಿಯನ್‌ ಪ್ರಯಾಣಿಕರ ಸಾಗಣೆ ಮಾಡಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಕ್ರಮವಾಗಿ ಶೇ.5.30 ರಷ್ಟು ಹಾಗೂ ಶೇ.2.14ರಷ್ಟು ಹೆಚ್ಚಳವಾಗಿದೆ ಎಂದು ವಲಯದ ಪ್ರಧಾನ ವ್ಯವಸ್ಥಾಪಕ ಎ.ಕೆ. ಗುಪ್ತಾ ತಿಳಿಸಿದರು. 

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ರೈಲು ಮಾರ್ಗ ನಿರ್ಮಾಣ, ಜೋಡು ಮಾರ್ಗ ನಿರ್ಮಾಣ, ರೈಲು ಮಾರ್ಗ ವಿದ್ಯುದ್ದೀಕರಣ, ನಿಲ್ದಾಣಗಳಿಗೆ ಮೂಲಭೂತ ಸೌಕರ್ಯ, ಭದ್ರತಾ ಕ್ರಮಗಳು ಸೇರಿದಂತೆ ವಿವಿಧ ಯೋಜನೆ, ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ರೈಲ್ವೆ ಯೋಜನೆಗಳಿಗೆ ರಾಜ್ಯ ಸರಕಾರದಿಂದ ಉತ್ತಮ ಸಹಕಾರ ಸಿಗುತ್ತಿದೆ. ಡಿಸೆಂಬರ್‌ನಲ್ಲಿ ರಾಜ್ಯದ ಮೂಲ ಸೌಕರ್ಯಗಳ ಸಚಿವರೊಂದಿಗೆ ನಡೆದ ಸಭೆಯಲ್ಲಿ ಹಲವು ರೈಲ್ವೆ ಯೋಜನೆಗಳ ಕುರಿತಾಗಿ ಚರ್ಚಿಸಲಾಗಿದೆ ಎಂದರು. 

2713ಕೋಟಿ ರೂ.ವೆಚ್ಚ: ನೈರುತ್ಯ ರೈಲ್ವೆ ವಲಯ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಹೊಸ ರೈಲು ಮಾರ್ಗ ಮತ್ತು ಜೋಡು ಮಾರ್ಗ ಯೋಜನೆಗಳಿಗಾಗಿ ಸುಮಾರು 2,713 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. 2014-15ರಲ್ಲಿ 884ಕೋಟಿ ರೂ., 2015-16ರಲ್ಲಿ 1,145ಕೋಟಿ ರೂ., 2016-17ರಲ್ಲಿ ನವೆಂಬರ್‌ ಅಂತ್ಯದವರೆಗೆ 684 ಕೋಟಿ ರೂ. ಸೇರಿದಂತೆ ಒಟ್ಟು 2,713 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದರು. 

ಪ್ರಸಕ್ತ ಆರ್ಥಿಕ ವರ್ಷದ 9 ತಿಂಗಳಲ್ಲಿ ಸುಮಾರು 40 ಕಿ.ಮೀ. ನೂತನ ರೈಲು ಮಾರ್ಗ ನಿರ್ಮಿಸಲಾಗಿದೆ. 2016-17ನೇ ಆರ್ಥಿಕ ವರ್ಷದಲ್ಲಿ ಸುಮಾರು 208ಕಿ.ಮೀ. ನೂತನ ರೈಲು ಮಾರ್ಗ ನಿರ್ಮಾಣ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಕಲ್ಯಾಣದುರ್ಗಾ- ಕದಿರಿದೇವರಪಳ್ಳಿ, ನೆಲಮಂಗಲ – ಶ್ರವಣಬೆಳಗೋಳ, ಬಾಗಲಕೋಟೆ-ಖಜ್ಜಿಡೋಣಿ, ಗಿಣಗೇರಾ-ಚಿಕ್ಕಬೆಣಕಲ್ಲ ನಡುವಿನ ರೈಲ್ವೆ ಮಾರ್ಗವನ್ನು ಇದೇ ಆರ್ಥಿಕ ವರ್ಷದಲ್ಲಿ ಕಾರ್ಯಾಚರಣೆಗೆ ಅಣಿಗೊಳಿಸಲಾಗುವುದು ಎಂದರು. 

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಅವಶ್ಯಕ ಮಾರ್ಗವೆಂದು ನೈರುತ್ಯ ರೈಲ್ವೆ ಪರಿಗಣಿಸಿದೆ. ಅದೇ ರೀತಿ ಗಿಣಗೇರಾ-ಮಹೆಬೂಬ್‌ ನಗರ ನಡುವಿನ ರೈಲು ಮಾರ್ಗ ನಿರ್ಮಾಣಕ್ಕೆ ಒಟ್ಟು 1900 ಎಕರೆಯಷ್ಟು ಭೂಮಿ ಸ್ವಾಧೀನ ಅವಶ್ಯಕತೆ ಇದ್ದು, ಇದುವರೆಗೆ 800 ಎಕರೆಯಷ್ಟು ಭೂಮಿ ಮಾತ್ರ  ದೊರೆತಿದೆ. ಭೂ ಸ್ವಾಧೀನ ಕ್ರಮ ಪ್ರಗತಿಯಲ್ಲಿದೆ ಎಂದರು. 

ರೈಲುಗಳ ಸುರಕ್ಷತೆ ದೃಷ್ಟಿಯಿಂದ ಕಳೆದ ವರ್ಷ 72 ಕಾವಲುಗಾರ ರಹಿತ ಲೇವಲ್‌ ಕ್ರಾಸಿಂಗ್‌ ಗೇಟ್‌ಗಳಲ್ಲಿ ಮೇಲ್ಸೇತುವೆ ಇಲ್ಲವೆ ಕೆಳಸೇತುವೆ ನಿರ್ಮಾಣದ ಮೂಲಕ ಗೇಟ್‌ಗಳನ್ನು ತೆಗೆದು ಹಾಕಲಾಗಿದ್ದು, 2016ರ ಡಿಸೆಂಬರ್‌ ಅಂತ್ಯದವರೆಗೆ 28 ತೆಗೆದು ಹಾಕಲಾಗಿದೆ. ಪ್ರಸಕ್ತ ಆರ್ಥಿಕ ವರ್ಷ ಅಂತ್ಯದ ವೇಳೆಗೆ 66 ಗೇಟ್‌ಗಳನ್ನು ತೆಗೆದು ಹಾಕಲು ಯೋಜಿಸಲಾಗಿದೆ.

ರೈಲ್ವೆ ಮಂಡಳಿ 2020ರ ವೇಳೆಗೆ ಎಲ್ಲ ಕಾವಲು ರಹಿತ ಗೇಟ್‌ಗಳ ತೆರವಿಗೆ ಸೂಚಿಸಿದ್ದು, ನೈರುತ್ಯ ರೈಲ್ವೆ ವಲಯ ವ್ಯಾಪ್ತಿಯಲ್ಲಿ ಕಾಲಮಿತಿಯೊಳಗೆ ಪೂರ್ಣಗೊಳ್ಳಲಿದೆ ಎಂದರು. ನೋಟುಗಳ ಅಪನಗದೀಕರಣದಿಂದ ಪ್ರಯಾಣಿಕರ ಸಾಗಣೆ ಆದಾಯದಲ್ಲಿ ಹೆಚ್ಚಿನ ಪರಿಣಾಮ ಬೀರಿಲ್ಲ. ಆದರೆ ಪಾರ್ಸಲ್‌ ವಿಭಾಗದಲ್ಲಿ ಸ್ವಲ್ಪಮಟ್ಟಿನ ಪರಿಣಾಮ ಬೀರಿದೆ. ಸ್ವಾéಪಿಂಗ್‌ ಯಂತ್ರಗಳನ್ನು ಪರಿಚಯಿಸಲಾಗುತ್ತಿದ್ದು, 140 ಕೇಂದ್ರಗಳಿದ್ದು, ಪ್ರಸ್ತುತ 4 ಕೇಂದ್ರಗಳಲ್ಲಿ ಇದು ಅನುಷ್ಠಾನಗೊಂಡಿದೆ.

ಭದ್ರತೆ ದೃಷ್ಟಿಯಿಂದ ಬೆಂಗಳೂರು, ಮೈಸೂರು ಹಾಗೂ ಯಶವಂತಪುರ ನಿಲ್ದಾಣಗಳಲ್ಲಿ ಸಿಸಿಟಿವಿ ಅಳವಡಿಕೆ ಆಗಿದ್ದು, ನಿರ್ಭಯಾ ನಿಧಿ ಅಡಿಯಲ್ಲಿ ಸುಮಾರು 30 ನಿಲ್ದಾಣಗಳಿಗೆ ಸಿಸಿಟಿವಿ ಇನ್ನಿತರ ಸಾಮಗ್ರಿಗಳ ಅಳವಡಿಕೆಗೆ ಮಂಜೂರಾತಿ ಸಿಕ್ಕಿದೆ. ಅಂತ್ಯೋದಯ, ಹಮ್‌ ಸಫ‌ರ್‌ ರೈಲುಗಳಿಗೆ ಸಿಸಿಟಿವಿ ಇನ್ನಿತರ ಅತ್ಯಾಧುನಿಕ ಸಲಕರಣೆಗಳ ಅಳವಡಿಸಲಾಗುತ್ತಿದ್ದು, ಶೀಘ್ರದಲ್ಲೇ ಈ ರೈಲುಗಳು ಸಂಚಾರ ಆರಂಭಿಸುವ ನಿರೀಕ್ಷೆ ಇದೆ ಎಂದರು. ನೈರುತ್ಯ ರೈಲ್ವೆ ಹಿರಿಯ ಅಧಿಕಾರಿಗಳಾದ ವಿಜಯಾ, ಶಂಕರ ಕುಟ್ಟಿ, ವಿ.ಕೆ. ವರ್ಮಾ ಇನ್ನಿತರ ಅಧಿಕಾರಿಗಳು ಹಾಜರಿದ್ದರು. 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.