Hubli; ಬಿಜೆಪಿ ಮಾತ್ರ ನಿಮ್ಮ ಹಿತ ಕಾಯಲಿದೆ: ಪ್ರಹ್ಲಾದ ಜೋಶಿ


Team Udayavani, Dec 30, 2023, 3:54 PM IST

pralhad joshi

ಹುಬ್ಬಳ್ಳಿ: ದೇಶದಲ್ಲಿ ವಂಶವಾದ ಹೊಂದಿರುವವರಿಂದ ಜನರಿಗೆ ಒಳ್ಳೆಯದಾಗಲ್ಲ. ಬಿಜೆಪಿ ಯಾರಿಗೂ ಅನ್ಯಾಯ, ಆತಂಕ ಆಗದಂತೆ ಸಾಮಾಜಿಕ ನ್ಯಾಯ ಒದಗಿಸಲು ಬದ್ಧವಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಇಲ್ಲಿನ‌ ದೇಶಪಾಂಡೆ ನಗರದ ಸವಾಯಿ‌ ಗಂಧರ್ವ ಕಲಾ ಮಂದಿರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಧಾರವಾಡ ಜಿಲ್ಲಾ ಮಾದಿಗರ ಆತ್ಮಗೌರವ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಬಿಜೆಪಿ ಮಾತ್ರ ನಿಮ್ಮ ಹಿತ ಕಾಯಲಿದೆ. ನೀವು ಆತಂಕಕ್ಕೆ ಒಳಗಾಗಬೇಡಿ, ಕಾಂಗ್ರೆಸ್ ನವರು ಡಾ.ಬಾಬಾ ಸಾಹೇಬ ಅಂಬೇಡ್ಕರ, ಡಾ.ಜಗಜೀವನ ರಾಮರಿಗೆ ಅನ್ಯಾಯ ಮಾಡಿದರು. ಈಗ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಎಐಸಿಸಿ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಆದರೆ ಅದು‌ ನಾಮಕಾವಾಸ್ಥೆ ಎಂದರು.

ಮಮತಾ ಬ್ಯಾನರ್ಜಿ, ಅರವಿಂದ ಕೇಜ್ರಿವಾಲ್ ಖರ್ಗೆ ಪ್ರಧಾನಿ ಆಗಬೇಕೆಂದು ಹೇಳಿದರೆ, ಸಿಎಂ ಸಿದ್ದರಾಮಯ್ಯ ಸೇರಿ ಎಲ್ಲರೂ ವಿರೋಧ ಮಾಡುತ್ತಿದ್ದಾರೆ ಎಂದರು.

ಮಾಜಿ ಡಿಸಿಎಂ ಗೋವಿಂದ ಕಾರಜೋಳ ಮಾತನಾಡಿ, ಒಳ ಮೀಸಲಾತಿ ಬಗ್ಗೆ ಕಾಂಗ್ರೆಸ್ ಗೊಂದಲ ಸೃಷ್ಟಿ ಮಾಡುತ್ತಿದೆ. ಎಸ್ ಸಿ, ಎಸ್ ಟಿ ಜನರಿಗೆ ನ್ಯಾಯ ಕೊಡುವ ಬದಲು ಮತ ಬ್ಯಾಂಕ್ ಮಾಡಿಕೊಂಡಿದ್ದಕ್ಕೆ ಸಮಾಜಕ್ಕೆ ಹಿನ್ನೆಡೆಯಾಗಿದೆ ಎಂದರು.

ಯಾರಿಗಾಗಿ ಮೀಸಲಾತಿ ಮಾಡಿದ್ದೇವು ಅವರು ಅರ್ಥ ಮಾಡಿಕೊಳ್ಳಲಿಲ್ಲ. ಹೀಗಾಗಿ ರಾಜ್ಯದಲ್ಲಿ ನಾವು ಸೋತೆವು ಎಂದರು.

ಕಾಂಗ್ರೆಸ್ ನಿಂದ ನಮಗೆ ನ್ಯಾಯ ಸಿಗುವುದಿಲ್ಲ. ದಲಿತರಿಗೆ ಆ ಪಕ್ಷದಲ್ಲಿ ಗೌರವ ಇಲ್ಲ. ಮತ್ತೆ ಮೋಸ ಮಾಡಲು ಮುಂದಾಗಿದ್ದಾರೆ ಅದನ್ನು ನಂಬಬೇಡಿ ಎಂದರು.

ಆದಿ ಜಾಂಬವ ಪೀಠದ ಮುನಿರತ್ನ ಸ್ವಾಮೀಜಿ, ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ, ಶಾಸಕರಾದ ಎಂ.ಆರ್. ಪಾಟೀಲ, ಮಹೇಶ ಟೆಂಗಿನಕಾಯಿ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಇತರರಿದ್ದರು.

ಸಮಾವೇಶದಲ್ಲಿ ಗೊಂದಲ ಸೃಷ್ಟಿ: ಸಿಎಂ ಸಿದ್ದರಾಮಯ್ಯ ಬಾದಾಮಿಯಲ್ಲಿ ಮಾದಿಗ ಸಮಾಜದವರಿಗೆ ನೀಡಿದ ಆಶ್ವಾಸನೆ ಬಗ್ಗೆ ಪಿಪಿಟಿ ಮೂಲಕ ಪ್ರದರ್ಶಿಸುವಾಗ ಕೆಲವರು ಆಕ್ಷೇಪ ವ್ಯಕ್ತಪಡಿಸಿದಾಗ ಗೊಂದಲವುಂಟಾಗಿ ಒಂದಿಬ್ಬರು ವೇದಿಕೆಯಿಂದ ನಿರ್ಗಮಿಸಿದರು. ಆಗ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಇತರರು ಹೊರಡಲು ಮುಂದಾದರು.

ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಶಾಸಕ ಅರವಿಂದ ಬೆಲ್ಲದ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಮಧ್ಯ ಪ್ರವೇಶಿಸಿ ತಿಳಿಗೊಳಿಸಿದರು. ನಂತರ ಕಾರ್ಯಕ್ರಮ ಮುಂದುವರೆಯಿತು.

ಟಾಪ್ ನ್ಯೂಸ್

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Colera

Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.