ನೇತ್ರ ಸಮಸ್ಯೆ ನಿರ್ಲಕ್ಷ್ಯ ಸಲ್ಲ: ಸೀಮಾ
Team Udayavani, Jul 24, 2017, 12:21 PM IST
ಹುಬ್ಬಳ್ಳಿ: ಕಣ್ಣುಗಳಿಲ್ಲದಿದ್ದರೆ ಜಗತ್ತೇ ಶೂನ್ಯವಾಗಿದ್ದು, ಪ್ರತಿಯೊಬ್ಬರು ಕಣ್ಣಿನ ಸಮಸ್ಯೆ ಬಗ್ಗೆ ಅಲಕ್ಷ್ಯ ಮಾಡದೆ ಜಾಗರೂಕತೆ ವಹಿಸಬೇಕೆಂದು ಮಾಜಿ ಶಾಸಕಿ ಸೀಮಾ ಮಸೂತಿ ಹೇಳಿದರು.
ನರೇಂದ್ರ ಗ್ರಾಮದಲ್ಲಿ ಸಂಸದ ಪ್ರಹ್ಲಾದ ಜೋಶಿ ಪ್ರೇರಿತ ಕ್ಷಮತಾ ಸೇವಾ ಸಂಸ್ಥೆ ಹಾಗೂ ಪದ್ಮಶ್ರೀ ಡಾ| ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆಯ ಸಹಯೋಗದೊಂದಿಗೆ ರವಿವಾರ ಏರ್ಪಡಿಸಿದ್ದ ನೇತ್ರ ಉಚಿತ ತಪಾಸಣಾ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಕ್ಷಮತಾ ಸಂಚಾಲಕ ಗೋವಿಂದ ಜೋಶಿ ಮಾತನಾಡಿ, ಕ್ಷಮತಾ ಸಂಸ್ಥೆ ಇಂಥ ಅನೇಕ ಉಚಿತ ನೇತ್ರ ಚಿಕಿತ್ಸಾ ಶಿಬಿರಗಳನ್ನು ಏರ್ಪಡಿಸುತ್ತಿದ್ದು, ಡಾ| ಎಂ.ಎಂ. ಜೋಶಿಯವರು ನೂರಾರು ಬಡಜನರಿಗೆ ಉಚಿತ ಸೇವೆ ನೀಡುತ್ತಿರುವುದು ಶ್ಲಾಘನೀಯ ಎಂದರು. ಅತಿಥಿಯಾಗಿ ಬಿಜೆಪಿ ಯುವ ಧುರೀಣ ಅಮೃತ ದೇಸಾಯಿ ಆಗಮಿಸಿದ್ದರು.
ಮುರಳೀಧರ ಮಳಗಿ, ಚಂದ್ರಶೇಖರ ಗೋಕಾಕ, ಡಿ.ಪಿ. ಪಾಟೀಲ, ಸಂಜಯ ಶರ್ಮಾ, ಶ್ರೀನಿವಾಸ ಶಾಸ್ತ್ರಿ, ವೀರಮಣಿ ಪುರೋಹಿತ ಇದ್ದರು. ಕುಮಾರ ದೇಸಾಯಿ ನಿರೂಪಿಸಿದರು. ಶರಣು ಅಂಗಡಿ ವಂದಿಸಿದರು. ಡಾ| ತಮ್ಮಣ್ಣ ಗಂಡಮಾಲಿ ಹಾಗೂ ಇತರ ವೈದ್ಯರು ಕಣ್ಣಿನ ಪರೀಕ್ಷೆ ನಡೆಸಿದರು.
ಸುಮಾರು 200 ಜನ ಹೆಸರು ನೋಂದಾಯಿಸಿದ್ದರು. 45 ಜನರನ್ನು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದತ್ತಮೂರ್ತಿ 4 ಕೈ ಭಗ್ನ ಮಾಡಿದ ದುಷ್ಕರ್ಮಿಗಳು
Hubbali: ಅಪಾರ್ಟ್ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು
Dr G Parameshwar: ಸೆನ್ ಠಾಣೆಗಳಿಗೂ ಎಸ್ಪಿ ಕೇಡರ್: ಗೃಹ ಸಚಿವ
Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ
ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.