ಹೊರನಾಡ ಕನ್ನಡಿಗರಿಗಾಗಿ ಜೈಲಿಗೆ ಹೋಗಲೂ ಸಿದ್ಧ


Team Udayavani, Apr 10, 2017, 3:03 PM IST

hub7.jpg

ಧಾರವಾಡ: ಹೊರನಾಡ ಕನ್ನಡಿಗರ ಮತ್ತು ಕನ್ನಡ ರಕ್ಷಣೆಗೆ ಕನ್ನಡದ ಕಟ್ಟಾಳುಗಳು ಜೈಲಿಗೂ ಹೋಗಲೂ ಸಿದ್ಧ ಎಂದು ಸಾಹಿತಿ ಮೋಹನ ನಾಗಮ್ಮನವರ ಹೇಳಿದರು. ಹೈದರಾಬಾದ್‌ನ ಮೌಲಾನಾ ಆಝಾಧ ರಾಷ್ಟ್ರೀಯ ಉರ್ದು ವಿಶ್ವವಿದ್ಯಾಲಯದ ಸಭಾಭವನದಲ್ಲಿ ನಡೆದ ಅಖೀಲ ಭಾರತ ಹೊರನಾಡ ಕನ್ನಡ ಸಂಘಗಳ 7ನೇ ಮಹಾಮೇಳದ ಗಡಿನಾಡು ಮತ್ತು ಹೊರನಾಡಿನಲ್ಲಿ ಕನ್ನಡ- ಕನ್ನಡಿಗರ ಮಾತು-ಕತೆ ಗೋಷ್ಠಿಯಲ್ಲಿ ಅವರು ಮಾತನಾಡಿದರು. 

ಕನ್ನಡ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಕನ್ನಡಿಗ ಸಂಕಲ್ಪ ತೊಡಬೇಕಾದ ಅವಶ್ಯಕತೆ ಇದೆ. ಹೊರನಾಡ ಕನ್ನಡಿಗರು ಒಬ್ಬಂಟಿಗಳಲ್ಲ, ಅವರ ಜತೆ ನಾವಿದ್ದೇವೆ ಎಂದರು. ಕನ್ನಡಿಗರ ಕೈ ಬಲಪಡಿಸಲು ಕನ್ನಡ ಕಟ್ಟಾಳುಗಳು ಅದರಲ್ಲೂ ಕರ್ನಾಟಕ ವಿದ್ಯಾವರ್ಧಕ ಸಂಘ ಸದಾ ಮುಂದಿರುತ್ತದೆ.

ಗಡಿ ಅಭಿವೃದ್ಧಿ ಪ್ರಾಧಿಧಿಕಾರದ ಅಧ್ಯಕ್ಷರನ್ನಾಗಿ ಜೋಕರ್‌ಗಳನ್ನು ಸರಕಾರ ನೇಮಕ ಮಾಡುತ್ತಿದೆ. ಹೀಗಾಗದೇ, ಗಡಿನಾಡು ಕನ್ನಡಿಗರ ಅಭಿವೃದ್ಧಿ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಯುವ ಧುರೀಣ ಗುರುರಾಜ ಹುಣಸಿಮರದ ಮಾತನಾಡಿ, ಹೊರನಾಡ ಮತ್ತು ಗಡಿನಾಡಿನಲ್ಲಿ ವಾಸಿಸುವ ಕನ್ನಡಿಗರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿವೆ.

ಈ ನಿಟ್ಟಿನಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘ ಮತ್ತು ಒಳನಾಡ ಕನ್ನಡಿಗರು ಸರಕಾರದ ಕಿವಿ ಹಿಂಡುವ ಮೂಲಕ ಸರಕಾರವನ್ನು ಎಚ್ಚರಿಸುವ ಕೆಲಸ ಮಾಡಬೇಕು. ಇನ್ನು ಪ್ರಸ್ತುತ ನಡೆಸಲಾಗುತ್ತಿರುವ ಅಖೀಲ ಭಾರತ ಹೊರನಾಡ ಕನ್ನಡ ಸಂಘಗಳ ಮಹಾಮೇಳದ ಹೆಸರನ್ನು ಬದಲಾಯಿಸಬೇಕೆಂಬ ಆಶಯ ವ್ಯಕ್ತಪಡಿಸಿದರಲ್ಲದೆ, ರಾಷ್ಟ್ರೀಯ ಹೊರನಾಡ ಕನ್ನಡಿಗರ ಸಮ್ಮೇಳನ ಹೆಸರಿಡಬೇಕು ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಹೊರನಾಡು ಮತ್ತು ಗಡಿನಾಡು ಪ್ರದೇಶಗಳಿಂದ ಆಗಮಿಸಿದ ಡಾ| ಅರವಿಂದ ಯಾಳಗಿ, ಗದ್ಗಿಹಳ್ಳಿ ಗುರುಬಸವರಾಜ, ಡಾ| ಸದಾನಂದ ಬಿಳ್ಳೂರ, ಶಿವರಾಮ ಕಾಸರಗೋಡ, ಎನ್‌.ಎ. ವಾಲೆ, ವೀರನಗೌಡ ಪಾಟೀಲ, ನಾರಾಯಣ ಕುಲಕರ್ಣಿ ಸೇರಿದಂತೆ ಹಲವಾರು ಪ್ರತಿನಿಧಿಗಳು,ಅಲ್ಲಿನ ಸ್ಥಿತಿ-ಗತಿ ಮತ್ತು ಸಮಸ್ಯೆಗಳನ್ನು ವಿವರಿಸಿದರು. 

ನಾಡೋಜ ಡಾ| ಪಾಟೀಲ ಪುಟ್ಟಪ್ಪ, ಶಂಕರ ಹಲಗತ್ತಿ, ಶಿವಾನಂದ ಭಾವಿಕಟ್ಟಿ, ಗುರು ಹಿರೇಮಠ, ಸತೀಶ ತುರುಮರಿ, ಗುರು ತಿಗಡಿ, ಚಂದ್ರಶೇಖರ ರಾಯರ, ಸರೋಜಾ ದೇಸಾಯಿ, ಪೊ| ಐ.ಜಿ. ಸನದಿ, ಶಿವಣ್ಣ ಬೆಲ್ಲದ, ಶ್ರೀಶೈಲ ಹುದ್ದಾರ ಇದ್ದರು.  

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

P.-Joshi

Bengaluru Jail: ಸರಕಾರದಿಂದಲೇ ದರ್ಶನ್‌ ಕೇಸ್‌ ಫೋಟೋ ವೈರಲ್‌: ಪ್ರಹ್ಲಾದ್‌ ಜೋಶಿ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.