![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 3, 2022, 6:15 PM IST
ಧಾರವಾಡ: ಇಡೀ ವಿಶ್ವವೇ ಹಿಂಸೆಯಿಂದ ನಲುಗಿ ಹೋಗಿರುವ ಈ ಸಮಯದಲ್ಲಿ ಅಹಿಂಸೆ, ಅಪರಿಗ್ರಹ ಇಂದಿನ ಅವಶ್ಯಕತೆಗಳಾಗಿವೆ ಎಂದು ಸ್ವಾದಿ ಜೈನ ಮಠದ ಭಟ್ಟಾಕಲಂಕ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಹೇಳಿದರು.
ನಗರದ ಸನ್ಮತಿ ಜಿನ ಮಂದಿರದಲ್ಲಿ ಜರುಗಿದ ನೂತನ ಏಕಶಿಲಾ ಮಾನಸ್ತಂಭೋಪರಿ ಚತುರ್ಮುಖ ಜಿನಬಿಂಬ ಪ್ರತಿಷ್ಠಾನ ಮಹೋತ್ಸವದ ಧರ್ಮ ಸಭೆಯ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಧರ್ಮಾಚರಣೆಯಿಂದ ಮನಸ್ಸಿಗೆ ಶಾಂತಿ ಪ್ರಾಪ್ತಿಯಾಗಿ ನಮ್ಮಲ್ಲಿರುವ ಕೆಟ್ಟ ವಿಚಾರಗಳನ್ನು ದೂರವಿಡಬಹುದು. ಆಗ ಸಮಾಜದಲ್ಲಿ ಶಾಂತಿ, ಸಾಮರಸ್ಯ ಉಂಟಾಗುತ್ತದೆ. ಜೈನ ಧರ್ಮದ ಜೀವಾಳವೇ ಅಹಿಂಸೆ. ಮಕ್ಕಳಲ್ಲಿ ಯುವಕರಲ್ಲಿ ಧಾರ್ಮಿಕ ಮನೋಭಾವನೆ ಬೆಳೆಸಬೇಕಾಗಿದೆ. ನಮಗೆ ಸಾಧ್ಯವಾದಷ್ಟು ದಾನ ಧರ್ಮ ಮಾಡುವದನ್ನು ಅಭ್ಯಾಸ ಮಾಡಿಕೊಳ್ಳಬೇಕು ಎಂದರು.
ಎಸ್ಡಿಎಂ ವಿವಿ ಉಪಕುಲಪತಿ ಡಾ| ನಿರಂಜನಕುಮಾರ ಮಾತನಾಡಿ, ನಾಮ ಸ್ತಂಭ ಮನಸ್ಸಿನಲ್ಲಿರುವ ಕಷಾಯಗಳನ್ನು ದೂರ ಮಾಡುತ್ತದೆ. ಮನಸ್ಸಿನಲ್ಲಿರುವ ಕಷಾಯಗಳನ್ನು ಹೊರಗೆ ಬಿಟ್ಟು ಜಿನದರ್ಶನ ಮಾಡಬೇಕು ಎಂದು ಹೇಳಿದರು.
ಜೆಎಸ್ಸೆಸ್ ಕಾರ್ಯದರ್ಶಿ ಡಾ| ನ. ವಜ್ರಕುಮಾರ ಮಾತನಾಡಿ, ಧರ್ಮ ಕಾರ್ಯಗಳು ಸಮಾಜವನ್ನು ಒಗ್ಗೂಡಿಸುತ್ತವೆ. ಪ್ರೀತಿ ಗೌರವಗಳನ್ನು ಹಂಚುತ್ತವೆ. ದುಷ್ಟ ವಿಚಾರಗಳನ್ನು ದೂರ ಇಡುತ್ತವೆ. ಮಾನಸಿಕ ನೆಮ್ಮದಿಗೆ ಇಂತಹ ಆಚರಣೆಗಳು ಅವಶ್ಯ ಎಂದರು.
ಅಶೋಕ ಬಾಗಿ ಅಧ್ಯಕ್ಷತೆ ವಹಿಸಿದ್ದರು. ಮಾನ ಸ್ತಂಭ ನಿರ್ಮಾಣಕ್ಕೆ ಧನಸಹಾಯ ಮಾಡಿದ ಪಿ.ಸಿಂಹಸೇನ ದಂಪತಿ, ಡಾ| ನ. ವಜ್ರಕುಮಾರ ಮತ್ತು ಸುಮನಾ ವಜ್ರಕುಮಾರ, ಡಾ|ಅಜಿತ ಪ್ರಸಾದ ಮತ್ತು ವಾಣಿಶ್ರೀ ಪ್ರಸಾದ, ನೇಮಿನಾಥ ಪತ್ರಾವಳಿ ಮತ್ತು ರೀಟಾ ಪತ್ರಾವಳಿ ಅವರನ್ನು ಸನ್ಮಾನಿಸಲಾಯಿತು.
ಎಸ್ಡಿಎಂ ವಿವಿ ಉಪಕುಲಪತಿ ಡಾ| ನಿರಂಜನಕುಮಾರ ಹಾಗೂ ಪದ್ಮಲತಾ ನಿರಂಜನಕುಮಾರ, ಚಾವುಂಡರಾಯ ಪ್ರಶಸ್ತಿ ಪುರಸ್ಕೃತ ಡಾ| ಶಾಂತಿನಾಥ ದಿಬ್ಬದ, ಕವಿಸಂ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ಡಾ| ಜಿನದತ್ತ ಹಡಗಲಿ, ಸಂಗೀತ ಕಾರ್ಯಕ್ರಮ ನಡೆಸಿದ ಜಯಶ್ರೀ ದಂಪತಿ, ಅಶೋಕ ಬಾಗಿ, ಚಾರುದತ್ತ ಬಾಗಿ ದಂಪತಿಯನ್ನು ಗೌರವಿಸಲಾಯಿತು. ಮಹಾವೀರ ಉಪಾದ್ಯೆ ನಿರೂಪಿಸಿದರು. ಜಿನೇಂದ್ರ ಕುಂದಗೋಳ ವಂದಿಸಿದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.