![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jun 22, 2021, 4:40 PM IST
ಹುಬ್ಬಳ್ಳಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಅವರು ನೃಪತುಂಗ ಬೆಟ್ಟ ಬಳಿಯ ಪಿರಾಮಿಡ್ ಧ್ಯಾನಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯೋಗಾಭ್ಯಾಸ ನಡೆಸಿದರು.
ಬೆಳಗ್ಗೆ 7 ಗಂಟೆಯಿಂದ 8 ಗಂಟೆವರೆಗೂ ವಿವಿಧ ಯೋಗಾಸನಗಳನ್ನು ಸಚಿವರು ಮಾಡಿದರು. ನಂತರ ಮಾತನಾಡಿ, ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡಲು ಸಾಧ್ಯ. ನಿತ್ಯ ಯೋಗ ಮಾಡುವವರಿಗೆ ಕೊರೊನಾ ಹೆಚ್ಚಾಗಿ ಬಾಧಿಸುವುದಿಲ್ಲ. ಇದು ನನ್ನ ಸ್ವಂತ ಅನುಭವವೂ ಆಗಿದೆ. ಯೋಗದಲ್ಲಿ ತೊಡಗುವ ಮೂಲಕ ನಮ್ಮ ಆರೋಗ್ಯ ಸದೃಢಗೊಳಿಸಿಕೊಳ್ಳಬಹುದಾಗಿದೆ. ಜತೆಗೆ ಶಿಸ್ತುಬದ್ಧ ಜೀವನಶೈಲಿ ನಮ್ಮದಾಗಲಿದೆ ಎಂದರು.
ಯೋಗ ನಮ್ಮ ಪೂರ್ವಜರ ಮಹತ್ವದ ಕೊಡುಗೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಜೂ. 21ನ್ನು ಅಂತಾರಾಷ್ಟ್ರೀಯ ಯೋಗ ದಿನವಾಗಿ ಘೋಷಿಸಬೇಕೆಂಬ ಮನವಿಗೆ ವಿಶ್ವ ಸಂಸ್ಥೆ ಮನ್ನಣೆ ನೀಡಿದ್ದರಿಂದಾಗಿ ಇಂದು ವಿಶ್ವದ ಅನೇಕ ದೇಶಗಳು ಯೋಗದಲ್ಲಿ ತೊಡಗಿವೆ. ಯೋಗ ದಿನಾಚರಣೆ ಕೈಗೊಳ್ಳುತ್ತಿವೆ. ಕೋವಿಡ್ ಹಿನ್ನೆಲೆಯಲ್ಲಿ ಯೋಗ ದಿನಾಚರಣೆಯನ್ನು ವರ್ಚುವಲ್ ಮೂಲಕ ಬಹುತೇಕ ಕಡೆ ಕೈಗೊಳ್ಳಲಾಗುತ್ತಿದೆ. “ಮನೆಯಲ್ಲಿಯೇ ಇದ್ದು ಯೋಗ ಮಾಡಿ’ ಈ ವರ್ಷದ ಯೋಗ ದಿನಾಚರಣೆ ಘೋಷವಾಕ್ಯವಾಗಿದೆ.
ಯೋಗ ಮತ್ತು ಧ್ಯಾನದ ಮಹತ್ವ ಮನವರಿಕೆಗಾಗಿಯೇ ಈ ಪಿರಾಮಿಡ್ ಧ್ಯಾನಮಂದಿರ ನಿರ್ಮಿಸಲಾಗಿದೆ ಎಂದು ಹೇಳಿದರು. ಯೋಗ ಶಿಕ್ಷಕ ಸಂಗಮೇಶ ನಿಂಬರಗಿ ಹಾಗೂ ತಂಡ ಯೋಗಾಸನಗಳ ತರಬೇತಿ ನೀಡಿತು. ಜಿಪಂ ಸಿಇಒ ಡಾ| ಬಿ. ಸುಶೀಲಾ, ಮಹಾನಗರ ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಯಶವಂತ ಮದೀನಕರ, ಜಿಲ್ಲಾ ಆಯುಷ್ ಅಧಿಕಾರಿ ಡಾ| ಮೀನಾಕ್ಷಿ, ತಹಶೀಲ್ದಾರ್ ಶಶಿಧರ ಮಾಡ್ಯಾಳ, ಮುಖಂಡರಾದ ಮಲ್ಲಿಕಾರ್ಜುನ ಸಾವಕಾರ, ಚನ್ನು ಹೊಸಮನಿ ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Namma Santhe: ಕಟಲ್ ಬೋನ್ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್
Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್ ಸೇರಿ ಮತ್ತೆ ನಾಲ್ವರ ಬಂಧನ
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.