ಜೀವನ ಪ್ರೀತಿ ಇರದೆ ಕಾವ್ಯ ರಚನೆಯಾಗುವುದು ಅಪರೂಪ

‘ಡಾ| ಜಿನದತ್ತರ ಕಾವ್ಯ: ಮಹಿಳಾ ಸ್ಪಂದನ' ಗ್ರಂಥ ಬಿಡುಗಡೆ

Team Udayavani, Apr 5, 2022, 11:29 AM IST

5

ಧಾರವಾಡ: ಕವಿಯ ಒಟ್ಟು ಜೀವನ ದರ್ಶನವೇ ಕಾವ್ಯದಲ್ಲಿ ಹೊರಹೊಮ್ಮಿರುತ್ತದೆ. ಜೀವನ ಪ್ರೀತಿ ಇರಲಾರದೆ ಕಾವ್ಯ ಹುಟ್ಟುವುದು ಅಪರೂಪ. ಪ್ರತಿಯೊಬ್ಬ ಕವಿಯ ಕಾವ್ಯದಲ್ಲೂ ಜೀವನ ಪ್ರೀತಿ ಇದ್ದೇ ಇರುತ್ತದೆ ಎಂದು ಸಾಹಿತಿ ಡಾ| ಶಾಂತಾ ಇಮ್ರಾಪೂರ ಹೇಳಿದರು.

ಕವಿಸಂನಲ್ಲಿ ಕವಿ ಡಾ| ಜಿನದತ್ತ ದೇಸಾಯಿ ದತ್ತಿ ಅಂಗವಾಗಿ “ಡಾ| ಜಿನದತ್ತರ ಕಾವ್ಯ: ಮಹಿಳಾ ಸ್ಪಂದನ’ ಎಂಬ ಗ್ರಂಥ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಪ್ರಕೃತಿಯ ಸಮಸ್ತ ಚರಾಚರ ವಸ್ತುಗಳೆಲ್ಲ ಮುಖ್ಯವಾದವುಗಳೇ ಎಂಬ ಸತ್ಯವನ್ನು ಜಿನದತ್ತರು ಕವನಗಳಲ್ಲಿ ಕಟ್ಟಿ ಕೊಟ್ಟಿದ್ದಾರೆ. ಕಾವ್ಯದ ಹುಟ್ಟಿಗೆ ಕಾರಣವಾದ ಪ್ರಕೃತಿಯ ಮೇಲಿನ ಪ್ರೀತಿ ಅನಂತಮುಖವಾಗಿ ಅವರ ಕಾವ್ಯಗಳಲ್ಲಿ ಹರಡಿಕೊಂಡಿದೆ. ನಿರಾಡಂಬರ, ನಿಷ್ಕಳಂಕವಾದ ಪ್ರೀತಿಯ ಕಾವ್ಯಗಳನ್ನು ಕೊಟ್ಟು ಸಹೃದಯರ ಹಾಗೂ ಮನುಷ್ಯರ ಬುದ್ಧಿಭಾವವನ್ನು ಹೆಚ್ಚಿಸುವ ಕವನಗಳನ್ನು ರಚಿಸಿ ಕೊಟ್ಟಿದ್ದಾರೆ. ಕಾವ್ಯಗಳುದ್ದಕ್ಕೂ ದಾರ್ಶನಿಕ, ಶರಣರ ನೆನಪುಗಳನ್ನು ಮಾಡಿಕೊಳ್ಳುತ್ತಾರೆ. ಅಮೂರ್ತವಾದ ಪ್ರಪಂಚದ ಬಗ್ಗೆ ಅವರಿಗೆ ಆಸಕ್ತಿ ಇಲ್ಲ. ಆ ಬಗ್ಗೆ ಅವರ ಕಾವ್ಯಗಳಲ್ಲಿ ನಿರಾಕರಣೆ ಇರುವುದನ್ನು ಕಾಣುತ್ತೇವೆ ಎಂದರು.

ಮನುಷ್ಯನ ದೌರ್ಜನ್ಯಕ್ಕೆ ಈಡಾಗಿರುವ ಭೂಮಿಯ ಬಗ್ಗೆ ಇರುವ ತಮ್ಮ ಅನನ್ಯ ಭಾವನೆಯನ್ನು ದೇಸಾಯಿಯವರು ಅನೇಕ ಕವನಗಳಲ್ಲಿ ಹೇಳುತ್ತ ಹೋಗಿದ್ದಾರೆ. ಮಲೆನಾಡಿನಂತಹ ಪ್ರಕೃತಿಯಲ್ಲಿ ಜಿನದತ್ತ ದೇಸಾಯಿಯವರು ಬದುಕಿದ್ದರೆ ಕುವೆಂಪು ಹಾಗೆ ಹೆಸರಾಂತ ಪ್ರಕೃತಿ ಕವಿ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಿದ್ದರು. ಸಮಾಜದ ವಿಕೃತ ಮನಸ್ಥಿತಿಯನ್ನು ಅವರ ಕಾವ್ಯಗಳಲ್ಲಿ ಕಾಣುತ್ತೇವೆ. ರಚನಾತ್ಮಕವಾಗಿ ಬದುಕುವ ಕಲೆಯನ್ನು ಕಾವ್ಯದ ಮೂಲಕ ಕಟ್ಟಿಕೊಟ್ಟಿದ್ದಾರೆ ಎಂದು ಹೇಳಿದರು.

ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ವಿಶ್ರಾಂತ ಕುಲಸಚಿವ ಡಾ| ಶಾಂತಿನಾಥ ದಿಬ್ಬದ ಅವರು “ಡಾ| ಜಿನದತ್ತರ ಕಾವ್ಯ: ಮಹಿಳಾ ಸ್ಪಂದನ’ ಗ್ರಂಥವನ್ನು ಬಿಡುಗಡೆಗೊಳಿಸಿದರು.

ಕರ್ನಾಟಕ ಸಾಹಿತ್ಯ ಅಕಾಡೆಮಿಯ 2021ರ ಗೌರವ ಪ್ರಶಸ್ತಿಗೆ ಭಾಜನರಾದ ಡಾ| ಜಿನದತ್ತ ದೇಸಾಯಿ ಅವರನ್ನು ಕರ್ನಾಟಕ ವಿದ್ಯಾವರ್ಧಕ ಸಂಘದ ಪರವಾಗಿ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಹಾಗೂ ಪದಾ ಧಿಕಾರಿಗಳು ಸನ್ಮಾನಿಸಿದರು.

ಗುರು ಹಿರೇಮಠ ಸ್ವಾಗತಿಸಿದರು. ಡಾ| ಜಿನದತ್ತ ಹಡಗಲಿ ಪ್ರಾಸ್ತಾವಿಕ ಮಾತನಾಡಿದರು. ವೀರಣ್ಣ ಒಡ್ಡೀನ ನಿರೂಪಿಸಿದರು. ಡಾ| ಧನವಂತ ಹಾಜವಗೋಳ ವಂದಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.