ರಾಜಕೀಯದಲ್ಲಿ ನಶೆ ಗಲಾಟೆ!
Team Udayavani, Oct 20, 2021, 6:30 AM IST
ಹುಬ್ಬಳ್ಳಿ: ಕಾಂಗ್ರೆಸ್ನ “ಮೋದಿ ಹೆಬ್ಬೆಟ್ಟು’ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಬಿಜೆಪಿ ಕೂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮುಗಿಬಿದ್ದಿದೆ. ರಾಹುಲ್ಗೆ “ಮಾದಕ ಲೋಕದ ನಂಟು’ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿದ್ದು, ಕಾಂಗ್ರೆಸ್ ಕೆಂಡಾಮಂಡಲವಾಗಿದೆ.
ಹುಬ್ಬಳ್ಳಿಯಲ್ಲಿ ಮಂಗಳವಾರ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲು, “ರಾಹುಲ್ ಗಾಂಧಿ ಮಾದಕ ದ್ರವ್ಯ ವ್ಯಸನಿ. ಡ್ರಗ್ ಪೆಡ್ಲರ್ ಕೂಡ ಆಗಿದ್ದಾರೆ. ಇದು ನಾನು ಸೃಷ್ಟಿ ಮಾಡಿದ್ದಲ್ಲ. ಹಲವು ವರದಿಗಳು ಇದನ್ನು ಪುಷ್ಟೀಕರಿಸಿವೆ’ ಎಂಬ ಗಂಭೀರ ಆರೋಪ ಮಾಡಿದ್ದಾರೆ.
ಇದಕ್ಕೆ ಧ್ವನಿಗೂಡಿಸಿರುವ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್, “ರಾಹುಲ್ ಗಾಂಧಿ ಡ್ರಗ್ ಪೆಡ್ಲರ್ ಅಲ್ಲ ಎಂದರೆ ಕಾಂಗ್ರೆಸ್ ನಾಯಕರು ಸರ್ಟಿಫಿಕೆಟ್ ತೋರಿಸಲಿ. ಅವರು ಮಾತನಾಡುವಾಗ ತೊದಲುವುದು, ಜೋಲಿ ಹೊಡೆಯುವುದನ್ನು ನೋಡಿದರೆ ಸಂಶಯ ಮೂಡುತ್ತದೆ ಎನಿಸುತ್ತಿದೆ’ ಎಂದಿದ್ದಾರೆ.
ನಿಮ್ಹಾನ್ಸ್ಗೆ ಸೇರಿಸಬೇಕು
ಬಿಜೆಪಿ ನಾಯಕರ ಹೇಳಿಕೆ ವಿವಾದದ ಸ್ವರೂಪ ಪಡೆದಿದ್ದು, ರಣದೀಪ್ ಸಿಂಗ್ ಸುರ್ಜೇವಾಲಾ, ಸಿದ್ದರಾಮಯ್ಯ, ಡಿ.ಕೆ.ಶಿ. ಮತ್ತಿತರ ಕಾಂಗ್ರೆಸ್ ನಾಯಕರು ನಳಿನ್ ವಿರುದ್ಧ ಹರಿಹಾಯ್ದಿದ್ದಾರೆ.
ಸಿಂದಗಿ ಪ್ರಚಾರದ ವೇಳೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, “ನಳಿನ್ಗೆ ಹುಚ್ಚುಹಿಡಿದಿದೆ. ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರನ್ನು ನಿಮ್ಹಾನ್ಸ್ಗೆ ಸೇರಿಸಬೇಕು’ ಎಂದು ಕಿಡಿಕಾರಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಕೂಡ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ:ಬಾಂಗ್ಲಾ ಹಿಂದುಗಳ ರಕ್ಷಣೆಗೆ ಸಿಎಎ ಬೇಕು: ಕಾಂಗ್ರೆಸ್ ನಾಯಕ ಮಿಲಿಂದ್ ದೇವ್ರಾ!
ಡಿಕೆಶಿ ವಿರುದ್ಧ ಬಿಜೆಪಿ ದೂರು
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಬಗ್ಗೆ ಟ್ವಿಟರ್ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಸಂಬಂಧ ಕೆಪಿ ಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಕೆಪಿಸಿಸಿ ಐಟಿ ವಿಭಾಗದ ಮುಖ್ಯಸ್ಥರ ವಿರುದ್ಧ ಪಶ್ಚಿಮ ವಿಭಾಗ ಸಿಇಎನ್ ಠಾಣೆಗೆ ಬಿಜೆಪಿ ಮುಖಂಡರು ದೂರು ನೀಡಿದ್ದಾರೆ. ಟ್ವಿಟರ್ ಖಾತೆಯಲ್ಲಿ ನಳಿನ್ರನ್ನು ಕೆಟ್ಟ ಪದಗಳಿಂದ ನಿಂದಿಸಿ, ಆಕ್ಷೇಪಾರ್ಹ ಪೋಸ್ಟ್ ಮಾಡಲಾಗಿದೆ ಎಂದು ದೂರಲಾಗಿದೆ.
ನಿನ್ನೆ ಮಾತನಾಡುವಾಗ ರಾಜಕೀಯ ವಿರೋಧಿಗಳೊಡನೆ ನಾಗರಿಕ ಮೌಲ್ಯದ ಜತೆಗೆ ಗೌರವಯುತವಾಗಿ ನಡೆದುಕೊಳ್ಳುವುದರಲ್ಲಿ ನಂಬಿಕೆಯಿದೆ ಎಂದಿದ್ದೆ. ಬಿಜೆಪಿ ಇದನ್ನು ಒಪ್ಪುತ್ತದೆಂದು ಭಾವಿಸಿದ್ದೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷರು ರಾಹುಲ್ ಗಾಂಧಿಯವರನ್ನು ಅಸಂಸದೀಯ ಪದಗಳಿಂದ ನಿಂದಿಸಿದ್ದು, ಕ್ಷಮೆ ಯಾಚಿಸುತ್ತಾರೆಂದು ಭಾವಿಸುತ್ತೇನೆ.
– ಡಿ.ಕೆ. ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದತ್ತಮೂರ್ತಿ 4 ಕೈ ಭಗ್ನ ಮಾಡಿದ ದುಷ್ಕರ್ಮಿಗಳು
Hubbali: ಅಪಾರ್ಟ್ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು
Dr G Parameshwar: ಸೆನ್ ಠಾಣೆಗಳಿಗೂ ಎಸ್ಪಿ ಕೇಡರ್: ಗೃಹ ಸಚಿವ
Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ
ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ
Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು
Bigg Boss Marathi 5: ಬಿಗ್ ಬಾಸ್ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?
Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…
Mumtaz Ali Missing: ಮೊದಿನ್ ಬಾವಾ ಸೋದರ ಮಮ್ತಾಜ್ ಆಲಿ ಆತ್ಮಹ*ತ್ಯೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.