ಹಳ್ಳ ಹಿದ್ದೋಯ್ತು ರಸ್ತೆ ತೇಪೆ ಕಾಮಗಾರಿ


Team Udayavani, Nov 20, 2019, 12:02 PM IST

huballi-tdy-3

ಹುಬ್ಬಳ್ಳಿ: ಮಳೆಯಿಂದ ಹದಗೆಟ್ಟಿದ್ದ ನಗರದ ರಸ್ತೆಗಳ ಕಾಮಗಾರಿ ಆರಂಭಗೊಂಡಿದ್ದರಿಂದ ಧೂಳಿನ ರಸ್ತೆಗಳಿಗೆ ಮುಕ್ತಿ ಸಿಕ್ಕಿತು ಎಂದು ಸಮಾಧಾನ ಪಟ್ಟುಕೊಂಡಿದ್ದ ಜನರು ಕಳಪೆ ಕಾಮಗಾರಿಯಿಂದಾಗಿ ಮತ್ತೆ ಆತಂಕಕ್ಕೀಡಾಗಿದ್ದಾರೆ.

ಒಂದೆಡೆ ರಸ್ತೆಗೆ ಹಾಕಿದ ಡಾಂಬರ್‌ ಎರಡನೇ ದಿನಕ್ಕೆ ಕಿತ್ತುಕೊಂಡು ಹೋಗುತ್ತಿದ್ದರೆ, ಇನ್ನೊಂದೆಡೆ ರಸ್ತೆಗೆ ಹಾಕಲಾದ ಖಡಿ ರಸ್ತೆಯ ತುಂಬೆಲ್ಲ ಹರಡಿ ಸಂಚಾರವನ್ನು ದುಸ್ತರವಾಗಿಸಿದೆ.

ಒಟ್ಟಿನಲ್ಲಿ ಅವಳಿನಗರದ ರಸ್ತೆಗಳ ಸ್ಥಿತಿ ಅಧೋಗತಿ ಎಂಬಂತಾಗಿದೆ. ಎಲ್ಲಿ ನೋಡಿದರೂ ಧೂಳು-ತಗ್ಗುಗಳ ದರ್ಶನ ಎಂದು ಜನರು ಬೊಬ್ಬೆ ಹೊಡೆಯುತ್ತಿದ್ದಾಗ, ಮಳೆ ಸೇರಿದಂತೆ ಇನ್ನಿತರ ಕಾರಣಗಳನ್ನು ನೀಡಿ ಹು-ಧಾ ಮಹಾನಗರ ಪಾಲಿಕೆ ಸಮಯ ಕಳೆಯುತ್ತಾ, ಇದೀಗ ಅವಳಿನಗರದಲ್ಲಿ ಎಲ್ಲೆಡೆ ತಗ್ಗು ಗುಂಡಿಗಳನ್ನು ಮುಚ್ಚುವ ಕೆಲಸಕ್ಕೆ ಕೈ ಹಾಕಿದೆ. ಆದರೆ ಅದರಲ್ಲೂ ಕಳಪೆ ಕಾಮಗಾರಿ ಮಾಡುವ ಮೂಲಕ ಮತ್ತೆ ಜನರ ಅಕ್ರೋಶಕ್ಕೆ ತುತ್ತಾಗುತ್ತಿದೆ.

ಹು-ಧಾ ಮಹಾನಗರ ಪಾಲಿಕೆ ಕಚೇರಿಯ ಕೂಗಳತೆ ದೂರದಲ್ಲಿ ಸರ್‌ ಸಿದ್ದಪ್ಪ ಕಂಬಳಿ ಪ್ರತಿಮೆ ಮುಂಭಾಗದಲ್ಲಿ ಸಿಗ್ನಲ್‌ ಅಳವಡಿಕೆಗಾಗಿ ತೆಗೆಯಲಾಗಿದ್ದ ಗುಂಡಿಯನ್ನು ಕಳೆದ ಎರಡು ದಿನಗಳ ಕೆಳಗೆ ಡಾಂಬರ್‌ ಹಾಕಿ ಮುಚ್ಚಲಾಗಿತ್ತು. ಆದರೆ ಎರಡೇ ದಿನಕ್ಕೆ ಡಾಂಬರ್‌ ಕಿತ್ತುಕೊಂಡು ಹೋಗುತ್ತಿದೆ. ಇದು ಕಾಮಗಾರಿಯ ಸ್ಥಿತಿ-ಗತಿ ಬಿಂಬಿಸುತ್ತಿದೆ.

ಕಾಟಾಚಾರಕ್ಕೆ ತೇಪ : ಅವಳಿನಗರದಲ್ಲಿ ತಗ್ಗು-ಗುಂಡಿ ಮುಚ್ಚುವ ಕಾರ್ಯಕ್ಕೆ ಕೈ ಹಾಕಿರುವ ಹು-ಧಾ ಮಹಾನಗರ ಪಾಲಿಕೆ ಕಾಟಾಚಾರಕ್ಕೆಂಬಂತೆ ತೇಪೆ ಕಾರ್ಯ ಮಾಡಿಸುತ್ತಿದೆ. ಒಂದು ಗುಂಡಿ ಮುಚ್ಚಿದರೆ ಇನ್ನೊಂದು ಗುಂಡಿ ಹಾಗೇ ಬಿಟ್ಟು ಹೋಗುತ್ತಿದ್ದಾರೆ. ದೊಡ್ಡ ದೊಡ್ಡ ಗುಂಡಿಗಳ ಸನಿಹದಲ್ಲಿ ಗುಂಡಿಗಳನ್ನು ಮುಚ್ಚಿದರೆ ಪಕ್ಕದಲ್ಲಿರುವ ಗುಂಡಿಗಳನ್ನು ಮುಚ್ಚುತ್ತಿಲ್ಲ. ಇದೀಗ ಕೋರ್ಟ್‌ ವೃತ್ತದಲ್ಲಿ ಬಿದ್ದಿರುವ ದೊಡ್ಡ ಗುಂಡಿಯನ್ನು ಈಗಾಗಲೇ ಮುಚ್ಚಲಾಗಿದೆ.

ಆದರೆ ಅಲ್ಲಿಯೇ ಪಕ್ಕದಲ್ಲಿರುವ ಕಿತ್ತೂರು ಚನ್ನಮ್ಮ ವೃತ್ತದಿಂದ ಕೋರ್ಟ್‌ ವೃತ್ತಕ್ಕೆ ಬರುವ ರಸ್ತೆಯಲ್ಲಿ ಬಿದ್ದಿರುವ ದೊಡ್ಡ ಗುಂಡಿ ಹಾಗೆಯೇ ಬಿಡಲಾಗಿದೆ. ಇನ್ನು ಕೋರ್ಟ್‌ ವೃತ್ತದಿಂದ ಸಾಯಿಬಾಬಾ ಮಂದಿರದ ಮುಂಭಾಗದಲ್ಲಿ ಬಿದ್ದಿರುವ ತಗ್ಗುಗಳು ಇವರಿಗೇಕೆ ಕಾಣುವುದಿಲ್ಲ ಎನ್ನುವುದು ಸಾರ್ವಜನಿಕರ ಪ್ರಶ್ನೆಯಾಗಿದೆ. ಅವಳಿನಗರದಲ್ಲಿ ನಡೆಯುತ್ತಿರುವ ತೇಪೆ ಕಾರ್ಯಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಸಿಕ್ಕಿತ್ತು. ಎಲ್ಲೆಡೆ ಧೂಳು ಎನ್ನುತ್ತಿದ್ದ ಜನರು ತೇಪೆ ಕಾರ್ಯ ಮಾಡುತ್ತಿದ್ದಾರೆ ಎಂದು ಸಂತಸ ಪಡುವಷ್ಟರಲ್ಲಿಯೇ, ಹಾಕಿರುವ ತೇಪೆ ಕಿತ್ತು ಹೋಗುತ್ತಿದೆ.

ಜನಾಕ್ರೋಶದ ನಂತರ ಪಾಲಿಕೆ ಇದೀಗ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸಕ್ಕೆ ಕೈ ಹಾಕಿದೆ. ಇಲ್ಲಿ ನೋಡಿದರೆ ಹಾಕಿದ ಎರಡೇ ದಿನಕ್ಕೆ ಡಾಂಬರ್‌ ಕಿತ್ತುಕೊಂಡು ಹೋಗುತ್ತಿದೆ. ಕಳಪೆ ಕಾಮಗಾರಿ ನಡೆದಿರುವುದು ಎದ್ದು ಕಾಣುತ್ತಿದ್ದು, ಪಾಲಿಕೆ ಕೂಡಲೇ ಎಚ್ಚೆತ್ತುಕೊಂಡು ಸರಿಯಾಗಿ ಗುಂಡಿ ಮುಚ್ಚಿಸುವ ಕೆಲಸ ಮಾಡಬೇಕು. ಕಳಪೆ ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರರ ಮೇಲೆ ಶಿಸ್ತುಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು.  -ಶೇಖರಯ್ಯ ಮಠಪತಿ, ಹು-ಧಾ ಆಟೋ ರಿಕ್ಷಾ ಮಾಲೀಕರು-ಚಾಲಕರ ಸಂಘದ ಅಧ್ಯಕ್ಷ

 

-ಬಸವರಾಜ ಹೂಗಾರ

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.