ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ
Team Udayavani, Apr 20, 2018, 4:12 PM IST
ಹುಬ್ಬಳ್ಳಿ: ಕುಂದಗೋಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ನ್ನು ಪಕ್ಷದ ಮುಖಂಡ ಎಂ.ಆರ್.ಪಾಟೀಲರಿಗೆ ನೀಡಬೇಕೆಂದು ಒತ್ತಾಯಿಸಿ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದರೆ, ಟಿಕೆಟ್ ನೀಡದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆಂಬಲಿಗರು ಬೆದರಿಕೆಯೊಡ್ಡಿದ್ದಾರೆ.
ಗುರುವಾರ ರಾತ್ರಿ ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ ಅವರ ನಿವಾಸಕ್ಕೆ ಆಗಮಿಸಿದ ಪಾಟೀಲರ ಬೆಂಬಲಿಗರು ಹಾಗೂ ಅಭಿಮಾನಿಗಳು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಕುಂದಗೋಳ ತಾಲೂಕಿನ ಚಿಕ್ಕನರ್ತಿ ಗ್ರಾಮದ ಕಲ್ಮೇಶ ಬೆಳವಟಗಿ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲೆತ್ನಿಸಿದಾಗ ತಡೆಯಲಾಯಿತು. ನಂತರ ಪೊಲೀಸರು ಆತನನ್ನು ವಶಕ್ಕೆ ಪಡೆದರು.
ಎಂ.ಆರ್.ಪಾಟೀಲರ ಬೆಂಬಲಿಗರು ಜಗದೀಶ ಶೆಟ್ಟರ ಅವರ ನಿವಾಸಕ್ಕೆ ಮುತ್ತಿಗೆ ಹಾಕಿರುವ ವಿಷಯ ತಿಳಿದು ಸಂಸದ ಪ್ರಹ್ಲಾದ ಜೋಶಿ ಶೆಟ್ಟರ ನಿವಾಸಕ್ಕೆ ದೌಡಾಯಿಸಿದರು. ಟಿಕೆಟ್ ನೀಡಲೇಬೇಕು ಎಂಬ ಕೂಗು ಹೆಚ್ಚಾದ ಹಿನ್ನೆಲೆಯಲ್ಲಿ ಜಗದೀಶ ಶೆಟ್ಟರ ಹಾಗೂ ಪ್ರಹ್ಲಾದ ಜೋಶಿ ಅವರು ಗೌಪ್ಯಸಭೆ ನಡೆಸಿದರು. ನಂತರ ಪಾಟೀಲ ಬೆಂಬಲಿಗ ಪ್ರಮುಖರನ್ನು ಕರೆದು ಚರ್ಚಿಸಿದರು.
ಪ್ರಮುಖರು ಹೊರ ಬಂದು ಟಿಕೆಟ್ ನೀಡುವ ಬಗ್ಗೆ ನಾಯಕರು ಭರವಸೆ ನೀಡಿದ್ದು, ಪ್ರತಿಭಟನೆ ಕೈಬಿಟ್ಟು ಕ್ಷೇತ್ರಕ್ಕೆ ಹಿಂದಿರುಗೋಣ ಎಂದು ಹೇಳಿದರಾದರೂ, ಪ್ರಮುಖರ ಮಾತನ್ನು ನಂಬದ ಬೆಂಬಲಿಗರು ಹಾಗೂ ಕಾರ್ಯಕರ್ತರು ಬಿ ಫಾರಂ ನೀಡದ ಹೊರತು ನಾವು ಇಲ್ಲಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದರು.
ತಾಯಿ-ಪತ್ನಿ ಮನವಿ: ಎಂ.ಆರ್.ಪಾಟೀಲರ ಪತ್ನಿ ಶಶಿಕಲಾ ಪಾಟೀಲ ಹಾಗೂ ತಾಯಿ ಶಾರದಾಬಾಯಿ
ಪಾಟೀಲ ಹಾಗೂ ಕುಟುಂಬದವರು ಟಿಕೆಟ್ ನೀಡುವಂತೆ ಜಗದೀಶ ಶೆಟ್ಟರ ಅವರಿಗೆ ಕೈ ಮುಗಿದು
ಬೇಡಿಕೊಂಡರು. ಇದೇ ಸಂದರ್ಭದಲ್ಲಿ ಪಾಟೀಲ ಬೆಂಬಲಿಗರು ಜಗದೀಶ ಶೆಟ್ಟರ ಅವರ ಕಾಲಿಗೆ ಬಿದ್ದು ಟಿಕೆಟ್ ನೀಡುವಂತೆ ಒತ್ತಾಯಿಸಿದರು.
ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಚುನಾವಣೆ ಕಾರ್ಯಕ್ಕೆ ನಿಯೋಜನೆ ಗೊಂಡಿರುವ ಕ್ಷಿಪ್ರ ಕಾರ್ಯಾಚರಣೆ ಪಡೆ(ಆರ್ಎಎಫ್)ಪಡೆ ಜಗದೀಶ ಶೆಟ್ಟರ ಅವರ ನಿವಾಸದ ಬಳಿ ಜಮಾಯಿಸಿತ್ತಾದರೂ, ಸಂಸದ ಪ್ರಹ್ಲಾದ ಜೋಶಿ ಇವರು ನಮ್ಮ ಪಕ್ಷದ ಕಾರ್ಯಕರ್ತರು. ಅವರನ್ನು ಹಿಂದಕ್ಕೆ ಕಳುಹಿಸಿ ಎಂದು ಪೊಲೀಸರಿಗೆ ತಿಳಿಸಿದರು. ಪ್ರತಿಭಟನೆ ಕೈಬಿಟ್ಟು ತೆರಳುವಂತೆ ಎಂ.ಆರ್.ಪಾಟೀಲ ಬೆಂಬಲಿಗರು ಹಾಗೂ ಕುಟುಂಬದವರಿಗೆ ಮನವಿ ಮಾಡಿದರು.
ಲಾಠಿ ಪ್ರಹಾರ ಮಾಡಿದರೂ ಸರಿಯೇ ಇಲ್ಲಿಂದ ನಾವು ಕದಲುವುದಿಲ್ಲ. ಎಂ.ಆರ್.ಪಾಟೀಲರಿಗೆ ಟಿಕೆಟ್ ಘೋಷಿಸಬೇಕು. ಬಿ ಫಾರಂ ನೀಡಬೇಕೆಂದು ಇದಕ್ಕೂ ಪಾಟೀಲ ಬೆಂಬಲಿಗರು ಹಾಗೂ ಕಾರ್ಯಕರ್ತರು ಪಟ್ಟು ಹಿಡಿದರು.
ಶೆಟ್ಟರ ಅಸಮಾಧಾನ: ಎಂ.ಆರ್.ಪಾಟೀಲರಿಗೆ ಟಿಕೆಟ್ ನೀಡಬೇಕೆಂಬುದು ನಮ್ಮ ಇಚ್ಚೆಯಾಗಿದೆ. ಈ ಕುರಿತು ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಯುತ್ತಿದೆ. ನಿಮ್ಮ ಮನವಿಗೆ ನಾವು ಸ್ಪಂದಿಸಿದ್ದೇವೆ. ಯಾವುದೇ ವರ್ತನೆ ಅತಿರೇಕವಾಗುವುದು ಸರಿಯಲ್ಲ ಎಂದು ಜಗದೀಶ ಶೆಟ್ಟರ ಅಸಮಾಧಾನ ವ್ಯಕ್ತಪಡಿಸಿದರು.
ಶೆಟ್ಟರ ಜತೆ ನಿಂಬಣ್ಣವರ ಚರ್ಚೆ
ಕುಂದಗೋಳದಿಂದ ಎಂ.ಆರ್.ಪಾಟೀಲರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿ ಅವರ ಬೆಂಬಲಿಗರು ಜಗದೀಶ ಶೆಟ್ಟರ ಅವರ ನಿವಾಸಕ್ಕೆ ಆಗಮಿಸುವ ಕೆಲ ಸಮಯ ಮೊದಲು ಕಲಘಟಗಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಸಿ.ಎಂ.ನಿಂಬಣ್ಣವರ, ಶೆಟ್ಟರ ನಿವಾಸಕ್ಕೆ ಆಗಮಿಸಿ ಚರ್ಚಿಸಿದರು. ಎಂ.ಆರ್.ಪಾಟೀಲರ ಬೆಂಬಲಿಗರ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆಯೇ ನಿಂಬಣ್ಣವರ ಚರ್ಚೆ ಅಪೂರ್ಣಗೊಳಿಸಿ ಅಲ್ಲಿಂದ ತೆರಳಿದರು.
ಕುಂದಗೋಳ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಪಡೆಯಲು ಮಾಜಿ ಶಾಸಕ ಎಸ್.ಐ. ಚಿಕ್ಕನಗೌಡ್ರ ಹಾಗೂ ಎಂ.ಆರ್.ಪಾಟೀಲರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಇಬ್ಬರು ಟಿಕೆಟ್ಗಾಗಿ ಪಟ್ಟು ಹಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ
Flight: ಹುಬ್ಬಳ್ಳಿ-ಅಹ್ಮದಾಬಾದ್ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ
Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು
Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ
Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.