![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Oct 2, 2021, 1:05 PM IST
ಧಾರವಾಡ: ಸಿದ್ದರಾಮಯ್ಯಗೆ ಆರೆಸ್ಸೆಸ್ ಅಂದರೆ ಏನು ಗೊತ್ತು? ಮತ ಬ್ಯಾಂಕ್ ರಾಜಕಾರಣಕ್ಕೆ ಹೀಗೆ ಹೇಳಿಕೆ ನೀಡುತ್ತಾರೆ. ದೇಶದ ಜನಕ್ಕೆ ಆರೆಸ್ಸೆಸ್-ಬಿಜೆಪಿ ಏನಂತ ಗೊತ್ತಿದೆ. ಸಿದ್ದರಾಮಯ್ಯ ಆ ಬಗ್ಗೆ ಹೇಳಬೇಕಿಲ್ಲ. ನಾವು ಕಾಂಗ್ರೆಸ್ನವರಿಗೆ ಐಎಸ್ಐ ಏಜೆಂಟ್ ಅಂದರೆ ಏನು ಮಾಡ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಶ್ನಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ರಾಮಜನ್ಮಭೂಮಿ ವಿರೋಧ ಮಾಡಿದ್ದರು. ಮುಸ್ಲಿಂ ಮಹಿಳೆ ಜೀವನಾಂಶ ವಿಷಯಕ್ಕೂ ವಿರೋಧ ಮಾಡಿದ್ದರು. ಇದೆಲ್ಲದರಿಂದ ಕಾಂಗ್ರೆಸ್ ಅಧೋಗತಿಗೆ ಇಳಿದಿದೆ. ಇವರು ಸುಧಾರಿಸಬೇಕು. ಸಿದ್ದರಾಮಯ್ಯ ಗೌರವಾನ್ವಿತ ನಾಯಕ. ವೈಯಕ್ತಿಕವಾಗಿ ಅವರ ಬಗ್ಗೆ ಗೌರವ ಇದೆ. ಆದರೆ ಮಾತನಾಡುವಾಗ ಇತಿಮಿತಿ ಇರಬೇಕು. ಹಣದಾಸೆ, ಮೋಸ, ಒತ್ತಾಯದಿಂದ ಮತಾಂತರ ನಡೆಯುತ್ತಿದೆ. ಮುಗ್ಧ ಜನರನ್ನು ತಪ್ಪು ದಾರಿಗೆ ಎಳೆದು ಮತಾಂತರ ಮಾಡಲಾಗುತ್ತಿದೆ. ಮತಾಂತರ ಬಗ್ಗೆ ಯಾವುದೇ ಅನುಮಾನ ಇಲ್ಲ. ಇದು ನಿಲ್ಲಬೇಕು. ಇದಕ್ಕೆ ಅಗತ್ಯವಾದ ಕಾನೂನು ತಿದ್ದುಪಡಿ ರಾಜ್ಯ ಸರ್ಕಾರ ಮಾಡಬೇಕು. ಜತೆಗೆ ಇದನ್ನು ತಡೆಯಲು ಸರ್ವ ರೀತಿಯ ಪ್ರಯತ್ನ ಆಗಬೇಕು ಎಂದರು.
ಹಿಂದೆ ಬಾಟ್ಲಾಹೌಸ್ ಶೂಟ್ ಪ್ರಕರಣ ಆಗಿತ್ತು. ಮೋಹನ ಚಂದ್ರ ಶರ್ಮಾ ಮೃತಪಟ್ಟಿದ್ದರು. ಆಗ ಸೋನಿಯಾ ಅವರು ಶರ್ಮಾ ಮೃತಪಟ್ಟಿದ್ದಕ್ಕೆ ಅತ್ತಿರಲಿಲ್ಲ. ಆದರೆ, ಅಲ್ಲಿ ಟೆರರಿಸ್ಟ್ ಸತ್ತಿದ್ದಕ್ಕೆ ಅತ್ತಿದ್ದರು. ಇವರ ಸಹಜ ಸ್ವಭಾವವೇ ಇದು. ಮುಸ್ಲಿಂ ತುಷ್ಟೀಕರಣಕ್ಕಾಗಿ ಸಿದ್ದರಾಮಯ್ಯ ಈ ಹೇಳಿಕೆ ನೀಡುತ್ತಾರೆ ಎಂದರು.
ಸಮರ್ಥನೀಯವಲ್ಲ: ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ ಬಗ್ಗೆ ಸಂಜಯ ಪಾಟೀಲ ಹೇಳಿಕೆ ಸಮರ್ಥನೀಯವಲ್ಲ. ನಾನು ಅವರಿಗೆ ವೈಯಕ್ತಿಕವಾಗಿ ತಿಳಿ ಹೇಳುತ್ತೇನೆ. ಶನಿವಾರ ಬೆಳಗಾವಿಗೆ ತೆರಳಿ ಮಾತನಾಡುತ್ತೇನೆ. ಕಾಂಗ್ರೆಸ್ ಪಕ್ಷದವರು ಸಹ ಬೇರೆಯವರ ಬಗ್ಗೆ ಮಾತನಾಡಿದ್ದಾರೆ. ಆಗ ಆ ಪಕ್ಷದವರ ಪ್ರತಿಕ್ರಿಯೆ ಹೇಗಿತ್ತು? ಲಕ್ಷ್ಮೀ ಹೆಬ್ಟಾಳಕರ ಬಗ್ಗೆ ಮಾತನಾಡಬಾರದು. ಅದರ ಬಗ್ಗೆ ಎರಡು ಮಾತಿಲ್ಲ. ಆದರೆ ನರೇಂದ್ರ ಮೋದಿ ಬಗ್ಗೆ ಇವರು ಯಾವ ರೀತಿ ಮಾತನಾಡಿದ್ದರು. ದೇಶದ ಪ್ರಧಾನಿ ಬಗ್ಗೆಯೇ ಮಾತನಾಡಿದ್ದರು. ಆದರೆ ಆಗ ನಾವು ಸಂಜಯ್ ಪಾಟೀಲರಿಗೆ ಹೇಳಿದಂತೆ ಕಾಂಗ್ರೆಸ್ನವರು ಹೇಳಲಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಸಂಸ್ಕೃತಿ ಇರುವ ನಾಯಕರಿಲ್ಲ. ನಮ್ಮ ಪಕ್ಷದಲ್ಲಿ ಸಂಸ್ಕೃತಿ ಇದೆ. ಲಕ್ಷ್ಮೀ ಹೆಬ್ಟಾಳಕರ ಜನ ಆಯ್ಕೆ ಮಾಡಿದ ಶಾಸಕರು. ಹೀಗಾಗಿ ಅವರಿಗೆ ಗೌರವ ಕೊಡಬೇಕು ಎಂದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Namma Santhe: ಕಟಲ್ ಬೋನ್ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್
Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್ ಸೇರಿ ಮತ್ತೆ ನಾಲ್ವರ ಬಂಧನ
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು
You seem to have an Ad Blocker on.
To continue reading, please turn it off or whitelist Udayavani.