ರಂಗಿನಾಟಕ್ಕೆ ಸಕಲ ಸಜ್ಜು


Team Udayavani, Mar 15, 2022, 12:01 PM IST

5

ಧಾರವಾಡ: ಕಳೆದ ಎರಡು ವರ್ಷ ಕೋವಿಡ್‌ -19 ಹಿನ್ನಲೆಯಲ್ಲಿ ಕಳೆಗುಂದಿದ್ದ ಹೋಳಿ ಹಬ್ಬ ಈ ಸಲ ರಂಗೇರಲು ಸಜ್ಜಾಗಿದ್ದು, ಕೋವಿಡ್‌ ಪ್ರಮಾಣ ತಗ್ಗಿದ್ದರಿಂದ ಜಿಲ್ಲಾಡಳಿತ ನಿರ್ಬಂಧಗಳನ್ನು ತೆಗೆದು ಹಾಕಿರುವ ಕಾರಣ ಕಾಮದೇವರ ಉತ್ಸವಕ್ಕೆ ಭರದ ಸಿದ್ಧತೆ ಆರಂಭಗೊಂಡಿದೆ.

ಈ ಹಿನ್ನೆಲೆಯಲ್ಲಿ ಧಾರವಾಡ ತಾಲೂಕಿನಲ್ಲಿ ಅಷ್ಟೇ ಅಲ್ಲ ಜಿಲ್ಲೆಯಲ್ಲಿಯೇ ಪ್ರಸಿದ್ಧಿ ಪಡೆದಿರುವ ಮುಳಮುತ್ತಲ ಕಾಮದೇವರ ಉತ್ಸವದ ರಂಗು-ರಂಗಿನಾಟಕ್ಕೆ ಸಿದ್ಧತೆ ಜೋರಾಗಿ ಸಾಗಿದೆ. ಅದರಲ್ಲೂ ಈ ಬಾರಿ ಮಾ.16ರಂದು ಹೋಳಿ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲು ಗ್ರಾಮದ ಕಾಮದೇವ ಸದ್ಭಕ್ತ ಮಂಡಳಿ ನಿರ್ಧರಿಸಿದೆ. ಅದರಲ್ಲೂ ಗುರುವಾರ (ಮಾ.17) ಬೆಳಿಗ್ಗೆ 5:00 ಗಂಟೆಗೆ ಹುಬ್ಟಾ ನಕ್ಷತ್ರದಲ್ಲಿ ಕಾಮದಹನ ನೆರವೇರಲಿದೆ. ಈ ಉತ್ಸವದ ಸಂದರ್ಭದಲ್ಲಿ ಕಾಮದೇವರಿಗೆ ದೀಡ ನಮಸ್ಕಾರ, ಎತ್ತುಗಳ ಮೆರವಣಿಗೆ, ಭಜನಾ ಸೇವೆ ಮತ್ತು ಮಹಾಪ್ರಸಾದ ಆಯೋಜಿಸಲಾಗಿದೆ.

ನೆರೆಯ ರಾಜ್ಯಗಳ ಭಕ್ತರು ಸಹಿತ ರಾಜ್ಯದ ವಿವಿಧ ಮೂಲೆಗಳಿಂದ ಮುಳಮುತ್ತಲ ಕಾಮಣ್ಣನಿಗೆ ಪೂಜೆ ಸಲ್ಲಿಸಲು ಜನ ಬರುತ್ತಾರೆ. ಸಾವಿರಾರು ಜನ ಸೇರುವುದರಿಂದ ಊರಿನಲ್ಲಿ ಜಾತ್ರೆಯ ಸಿದ್ಧತೆಯ ಕಳೆ ಕಟ್ಟಿದೆ. ಗ್ರಾಮದ ಮುಂಭಾಗದಲ್ಲಿ 12ಅಡಿ ಎತ್ತರದ ಮಂಟಪ ನಿರ್ಮಿಸಿ, ಸುತ್ತಲೂ ಕಟ್ಟಿಗೆಯ ಗೋಪುರದ ಮೇಲೆ ಕಾಮದೇವರ ಮೂರ್ತಿ ಪ್ರತಿಷ್ಠಾಪಿಸಲಾಗುತ್ತದೆ. ಜಾತಿ, ಧರ್ಮ, ಅಂತಸ್ತಿನ ಭೇದವಿಲ್ಲದೆ ಪ್ರತಿಯೊಬ್ಬರೂ ಪಾಲ್ಗೊಂಡು ಇಲ್ಲಿ ಸೇವೆ ಸಲ್ಲಿಸುವುದು ವಿಶೇಷ.

ಕಾಮದೇವರ ಪಾದರಕ್ಷೆಗಳಿಗೆ ಗ್ರಾಮದ ಹರಿಜನಕೇರಿಯಲ್ಲಿ ಪೂಜೆ ಸಲ್ಲಿಸಿ ಅಲ್ಲಿಂದ ಮೆರವಣಿಗೆ ಮೂಲಕ ತರಲಾಗುತ್ತದೆ. ಕಾಮಣ್ಣನ ಮೂರ್ತಿ ರಕ್ಷಣೆಗೆ ಗ್ರಾಮಸ್ಥರು ಆಯುಧ ಸಹಿತ ನಿಲ್ಲುವುದು ಇಲ್ಲಿನ ಮತ್ತೂಂದು ವಿಶೇಷ. ಹಬ್ಬದ ಆರಂಭದಿಂದ ಪೂರ್ಣಗೊಳ್ಳುವವರೆಗೂ ಮದ್ಯಪಾನ ಸಂಪೂರ್ಣ ನಿಷೇಧಿಸಲಾಗಿದೆ. ಕಾಮದಹನ ದಿನದಂದು ಗ್ರಾಮಸ್ಥರು ಚಪ್ಪಲಿ ಧರಿಸುವಂತಿಲ್ಲ. ಇನ್ನು ಅಣ್ಣಿಗೇರಿಯಿಂದ ಕಾಮಣ್ಣನ ರುಂಡ ತಂದು, ಪ್ರಾಣ ತ್ಯಾಗ ಮಾಡಿದ ಮುಳಮುತ್ತಲ ಗ್ರಾಮದ ಯುವಕರ ಸ್ಮರಣೆಯಲ್ಲಿ ಸಂಪ್ರದಾಯದಂತೆ ಈ ವರ್ಷವೂ ಬಣ್ಣದೋಕುಳಿ ಇಲ್ಲದೇ ಹೋಳಿ ಆಚರಣೆ ನಡೆಯಲಿದೆ.

ಕೋವಿಡ್‌ ನಿಯಮ ಸಡಿಲಿಕೆಯಿಂದ ಈ ಬಾರಿ ಕಾಮದೇವರ ಉತ್ಸವದಲ್ಲಿ ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ. ಈ ನಿಟ್ಟಿನಲ್ಲಿ ತಯಾರಿ ನಡೆದಿದ್ದು, ಬರುವ ಭಕ್ತರೆಲ್ಲರಿಗೂ ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಗ್ರಾಮದ ಅಕ್ಕಪಕ್ಕದಲ್ಲಿರುವ ಹೊಲಗಳನ್ನು ಸ್ವತ್ಛಗೊಳಿಸಿ ವಾಹನ ನಿಲ್ಲಿಸಲು ಸ್ಥಳಾವಕಾಶ ಕಲ್ಪಿಸಲಾಗಿದೆ. 30 ಕ್ವಿಂಟಲ್‌ನಲ್ಲಿ ಅನ್ನಪ್ರಸಾದ ಸೇವೆ ನಡೆಯಲಿದೆ. ಹರಕೆ ತೀರಿಸುವ ಭಕ್ತರಿಗೆ ಸೂಕ್ತ ವ್ಯವಸ್ಥೆ ಮಾಡಲಾಗುತ್ತಿದೆ. ಇನ್ನು ಉತ್ಸವದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯಬಾರದೆಂಬ ಉದ್ದೇಶದಿಂದ 50ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸುವಂತೆ ಗರಗ ಠಾಣಾ ಅಧಿಕಾರಿಗೆ ಮನವಿ ಸಲ್ಲಿಸಲಾಗಿದೆ ಎಂದು  ಕಾಮದೇವ ಸದ್ಭಕ್ತ ಮಂಡಳಿ ತಿಳಿಸಿದೆ.

ಉಪ್ಪಿನಬೆಟಗೇರಿಯಲ್ಲಿ ವರ್ಷ ಬಣ್ಣ ಇಲ್ಲ: ಸರಕಾರಿ ಕಾಮಣ್ಣ ಎಂಬ ಖ್ಯಾತಿ ಪಡೆದಿರುವ ಉಪ್ಪಿನಬೆಟಗೇರಿಯ ಚೌಡಿ ಕಾಮಣ್ಣನ ದಹನವು ಮಾ.19ರಂದು ನೆರವೇರಲಿದ್ದು, ಆದರೆ ಈ ವರ್ಷ ಗ್ರಾಮದಲ್ಲಿ ಬಣ್ಣದಾಟವಿಲ್ಲ. ಕಳೆದ 22 ವರ್ಷಗಳ ನಂತರ ಮೇ ತಿಂಗಳಲ್ಲಿ ಗ್ರಾಮದ ದೇವಿಯರಾದ ದ್ಯಾಮವ್ವ-ದುರ್ಗವ್ವ ಜಾತ್ರಾ ಮಹೋತ್ಸವ ನೆರವೇರಲು ನಿರ್ಧರಿಸಲಾಗಿದ್ದು, ಹೀಗಾಗಿ ಜಾತ್ರಾ ಮಹೋತ್ಸವಕ್ಕೂ ಮುನ್ನ ಬಣ್ಣದಾಟಕ್ಕೆ ಅವಕಾಶವಿಲ್ಲದಂತಾಗಿದೆ. ಗ್ರಾಮದ ಮೂರು ಸಾವಿರ ವಿರಕ್ತಮಠದಲ್ಲಿ ಈ ಕುರಿತಂತೆ ಹಿರಿಯರು ಸಭೆ ಕೈಗೊಂಡು, ಗ್ರಾಮ ದೇವಿಯರ ಜಾತ್ರಾ ಮಹೋತ್ಸವಕ್ಕೂ ಮುನ್ನವೇ ಈ ಸಲ ಬಣ್ಣದಾಟವಿಲ್ಲದೇ ಹೋಳಿ ಆಚರಣೆ ಮಾಡಲು ನಿರ್ಧರಿಸಲಾಗಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

P.-Joshi

Bengaluru Jail: ಸರಕಾರದಿಂದಲೇ ದರ್ಶನ್‌ ಕೇಸ್‌ ಫೋಟೋ ವೈರಲ್‌: ಪ್ರಹ್ಲಾದ್‌ ಜೋಶಿ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.