ವಿವಿ ಧನಸಹಾಯ ಆಯೋಗದ ಶಿಫಾರಸ್ಸಿಗೆ ಶೀಘ್ರ ಒಪ್ಪಿಗೆ ಭರವಸೆ
Team Udayavani, Jul 26, 2017, 12:31 PM IST
ಹುಬ್ಬಳ್ಳಿ: ವಿಶ್ವವಿದ್ಯಾಲಯ ಧನಸಹಾಯ ಆಯೋಗ 7ನೇ ವೇತನ ಪರಿಷ್ಕರಣೆಗೆ ರಚಿಸಿದ ಚವ್ಹಾಣ ಸಮಿತಿ ವರದಿಯನ್ನು ಜುಲೈ ಅಂತ್ಯದಲ್ಲಿ ಅನುಷ್ಠಾನಕ್ಕೆ ಒಪ್ಪಿಗೆ ನೀಡಲು ತೀರ್ಮಾನಿಸಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ ಜಾವಡೇಕರ ಅವರು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶೈಕ್ಷಿಕ ಸಂಘ ಹಾಗೂ ಅಖೀಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಸಂಘದ ನಿಯೋಗಕ್ಕೆ ತಿಳಿಸಿದರು.
ನವದೆಹಲಿಯಲ್ಲಿ ನಿಯೋಗವು ಸಚಿವರನ್ನು ಭೇಟಿ ಮಾಡಿತು. ಈ ವೇಳೆ ಪ್ರಕಾಶ ಜಾವಡೇಕರ ಹಾಗೂ ರಾಜ್ಯ ಸಚಿವ ಡಾ| ಮಹೇಂದ್ರನಾಥ ಪಾಂಡೆ ಸಮ್ಮುಖದಲ್ಲಿ ನಡೆದ ಚರ್ಚೆಯಲ್ಲಿ 6ನೇ ವೇತನ ಆಯೋಗದ ತಾರತಮ್ಯಗಳಿಗೆ ಪರಿಹಾರ, ಹೊಸ ಪಿಂಚಣಿ ಯೋಜನೆಯ ಬದಲಾಗಿ 2004ಕ್ಕಿಂತ ಮೊದಲಿದ್ದ ಹಳೆಯ ಪಿಂಚಣಿಗೆ ಒತ್ತಾಯ, ಕಾರ್ಯನಿರತ ಅಧ್ಯಾಪಕರಿಗೆ ಪಿಎಚ್ಡಿ ಕೋರ್ಸ್ ವಕ್ನಿಂದ ವಿನಾಯಿತಿ,
ಪ್ರಾಚಾರ್ಯರ ಸೇವಾವಧಿಯನ್ನು ನಿವೃತ್ತಿಯವರೆಗೆ ವಿಸ್ತರಣೆ, ಕಾಲ ಕಾಲಕ್ಕೆ ಅಧ್ಯಾಪಕರ ನೇಮಕಾತಿ ಹೀಗೆ ಹಲವಾರು ವಿಷಯಗಳ ಕುರಿತು ಒತ್ತಾಯಿಸಲಾಯಿತು. ಸಚಿವರು ಇವುಗಳನ್ನು ಪರಿಹರಿಸಲು ತಾತ್ವಿಕ ಒಪ್ಪಿಗೆ ನೀಡಿದರು ಹಾಗೂ ವಿಶೇಷವಾಗಿ ವಿಶ್ವವಿದ್ಯಾಲಯ ಹಾಗೂ ಕಾಲೇಜು ಅಧ್ಯಾಪಕರಿಗೆ 7ನೇ ವೇತನದ ಆಯೋಗ ಶಿಫಾರಸ್ಸುಗಳನ್ನು ಜುಲೈ ಕೊನೆಯಲ್ಲಿ ಕ್ಯಾಬಿನೆಟ್ ಒಪ್ಪಿಗೆ ಪಡೆದು ಅನುಷ್ಠಾನಗೊಳಿಸಲಾಗುವುದು ಎಂದು ಸಚಿವರು ಹೇಳಿದರು.
ನಿಯೋಗದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ| ಜಗದೀಶ ಪ್ರಸಾದ ಸಿಂಗಾಲ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಮಹೇಂದ್ರ ಕಪೂರ, ಮಹೇಂದ್ರಕುಮಾರ, ಅನುರಾಗ ಮಿಶ್ರಾ ಇದ್ದರು. ಸಚಿವರಿಗೆ ಹಾಗೂ ರಾಷ್ಟ್ರೀಯ ಶೈಕ್ಷಿಕ ಸಂಘದ ಪದಾಧಿಕಾರಿಗಳಿಗೆ ಕಾಲೇಜು ಶಿಕ್ಷಕ ಸಂಘದ ಡಾ| ರಘು ಅಕ್ಮಂಚಿ, ಡಾ| ಗುರುನಾಥ ಬಡಿಗೇರ, ಡಾ| ರಾಜಣ್ಣ, ನಾರಾಯಣ ಉಪಾಧ್ಯ ಕೃತಜ್ಞತೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ
Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Flipkart Big Billion Day ಸೆ. 27 ರಿಂದ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.