ಹಾಸ್ಟೆಲ್ ವಿದ್ಯಾರ್ಥಿಗಳಿಂದ ಪ್ರತಿಭಟನೆ
Team Udayavani, Sep 20, 2017, 12:31 PM IST
ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದ ಲೋಕಪ್ಪನ ಹಕ್ಕಲದಲ್ಲಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವೈದ್ಯಕೀಯ ಮತ್ತು ತಾಂತ್ರಿಕ ವಸತಿ ನಿಲಯದಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ಮಂಗಳವಾರ ನಿಲಯದ ವಿದ್ಯಾರ್ಥಿಗಳು ಪ್ರತಿಭಟಿಸಿದರು.
ಅಲ್ಲದೆ ನಿಲಯ ಪಾಲಕ (ವಾರ್ಡನ್) ಹಾಗೂ ಅಡುಗೆ ಕೆಲಸಗಾರರನ್ನು ಬದಲಿಸಬೇಕೆಂದು ಒತ್ತಾಯಿಸಿದರು. ಲೋಕಪ್ಪನ ಹಕ್ಕಲದಲ್ಲಿರುವ ಬಿಸಿಎಂ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಕಳೆದ 2-3 ವರ್ಷಗಳಿಂದ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ. ಆಹಾರದಲ್ಲಿ ಕಲ್ಲು, ಇಲಿಯ ಹಿಕ್ಕಿ, ನುಸಿ, ಹುಳು ಸೇರಿದಂತೆ ಇನ್ನಿತರೆ ಕ್ರಿಮಿಗಳು ಬರುತ್ತಿವೆ.
ವಾರದ ಹಿಂದೆಯೇ ಖರೀದಿಸಿದ ಕಾಯಿಪಲ್ಲೆ ನೀಡಲಾಗುತ್ತಿದೆ. ಇದರಿಂದ ನಿಲಯದ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗುತ್ತಿದೆ. ಈ ಬಗ್ಗೆ ನಮ್ಮಲ್ಲಿ ಸಾಕ್ಷ್ಯಾಧಾರಗಳಿವೆ. ಕಳಪೆ ಆಹಾರ ಕುರಿತು ವಾರ್ಡನ್ ಅವರಿಗೆ ಅನೇಕ ಬಾರಿ ತಿಳಿಸಿದರೂ ವಿದ್ಯಾರ್ಥಿಗಳ ಮೇಲೆಯೇ ಆಪಾದನೆ ಮಾಡುತ್ತಾರೆ ಹಾಗೂ ಅವಾಚ್ಯವಾಗಿ ನಿಂದಿಸುತ್ತಾರೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆರೋಪಿಸಿದರು.
ದೂರಿತ್ತವರನ್ನೇ ಗುರಿಯಾಗಿಸಿಕೊಂಡು ಅವರ ಮೇಲೆ ವಾರ್ಡನ್ ಇನ್ನಿಲ್ಲದ ಆರೋಪ ಮಾಡುತ್ತಾರೆ. ನಿಲಯದಿಂದ ಹೊರಗೆ ಹಾಕುತ್ತಾರೆ. ಎರಡು ಚಪಾತಿಗಿಂತ ಹೆಚ್ಚಿಗೆ ಕೊಡಲ್ಲ. ನಿಗದಿತ ಸಮಯಕ್ಕಿಂತ ಅರ್ಧ ತಾಸು ಮುಂಚಿತವೇ ಊಟ ಕೊಡುವುದನ್ನು ನಿಲ್ಲಿಸುತ್ತಾರೆ. ಆಹಾರದಲ್ಲಿ ಹುಳು ಬಂದಿದೆ ಎಂದರೆ, ನೀವೇನು ಚಿಕನ್ ತಿನ್ನಲ್ಲವೆ.
ನಿಮಗೆ ಈ ಊಟ ಹೊಂದಲ್ಲ. ಬೇಕಾದರೆ ಫೈವ್ ಸ್ಟಾರ್ ಹೋಟೆಲ್ಗೆ ಹೋಗಿ ಎನ್ನುತ್ತಾರೆ. ನಿಲಯದಲ್ಲಿ ಸದ್ಯ 70 ವಿದ್ಯಾರ್ಥಿಗಳಿದ್ದೇವೆ. ಹೊಸದಾಗಿ 20 ವಿದ್ಯಾರ್ಥಿಗಳು ಬರುವವರಿದ್ದಾರೆ. ಇಲ್ಲಿನ ಅಡುಗೆ ಸಿಬ್ಬಂದಿಯು ಎಲೆ-ಅಡಿಕೆ, ತಂಬಾಕು ತಿನ್ನುತ್ತಲೇ ಆಹಾರ ತಯಾರಿಸುತ್ತಾರೆ. ಧೂಮ್ರಪಾನ ಮಾಡುತ್ತಾರೆ.
ಮದ್ಯ ಸೇವಿಸಿಕೊಂಡು ಬರುತ್ತಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು. ನಿಲಯದಲ್ಲಿ ರವಿವಾರ ನೀಡಿದ್ದ ಆಹಾರದಲ್ಲಿ ಇಲಿಯ ಹಿಕ್ಕಿ ಬಂದಿತ್ತು. ಇದರಿಂದಾಗಿ ಮೂವರು ವಿದ್ಯಾರ್ಥಿಗಳು ವಾಂತಿ ಮಾಡಿದ್ದರು. ಈ ಕುರಿತು ನಿಲಯ ಪಾಲಕರಿಗೆ ತಿಳಿಸಿದರೆ ನೀವೇ ಉದ್ದೇಶಪೂರ್ವಕವಾಗಿ ಮಾಡಿದ್ದೀರಿ ಎಂದು ನಮ್ಮ ಮೇಲೆಯೇ ದಬಾಯಿಸಿದ್ದಾರೆ.
ಹೀಗಾಗಿ ನಾವೆಲ್ಲ ಸೋಮವಾರದಿಂದ ನಿಲಯದಲ್ಲಿ ಊಟ ಮಾಡುವುದನ್ನು ಬಿಟ್ಟಿದ್ದೇವೆ ಎಂದರು. ಈ ಕುರಿತು ಸಮಾಜ ಕಲ್ಯಾಣ ಇಲಾಖೆ ತಾಲೂಕಾಧಿಕಾರಿ ಗಮನಕ್ಕೆ ತಂದರೂ ಪ್ರಯೋಜವಾಗಿಲ್ಲ. ಇನ್ನಾದರೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಆಯುಕ್ತರು ಇತ್ತ ಗಮನ ಹರಿಸಬೇಕು. ನಿಲಯ ಪಾಲಕ ಮತ್ತು ಅಡುಗೆ ಸಿಬ್ಬಂದಿ ಬದಲಾಯಿಸಬೇಕೆಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿ-ನ್ಯಾ| ಸಂತೋಷ ಹೆಗ್ಡೆ
Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.