ಪಂ| ಬಸವರಾಜ ರಾಜಗುರು ಪುಣ್ಯಸ್ಮರಣೆ-ಸನ್ಮಾನ


Team Udayavani, Feb 16, 2017, 2:48 PM IST

hub7.jpg

ಧಾರವಾಡ: ಸ್ವರ ಸಾಮ್ರಾಟ್‌ ಪಂ| ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ವತಿಯಿಂದ ಬಸವರಾಜ ರಾಜಗುರು ಅವರ 25ನೇ ಪುಣ್ಯಸ್ಮರಣೆ ಪ್ರಯುಕ್ತ ನಗರದಲ್ಲಿ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ್‌ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ರಜತ ಮಹೋತ್ಸವ ಸಂಗೀತ ಸಮಾರೋಹ ಕಾರ್ಯಕ್ರಮಕ್ಕೆ ಬುಧವಾರ ಸಂಜೆ ಜಿಲ್ಲಾಧಿಕಾರಿ ಡಾ| ಬಿ.ಎಸ್‌.ಬೊಮ್ಮನಹಳ್ಳಿ ಚಾಲನೆ ನೀಡಿದರು. 

ಈ ವೇಳೆ ಟ್ರಸ್ಟ್‌ ಸದಸ್ಯ ನಿಜಗುಣ ರಾಜಗುರು ಮಾತನಾಡಿ, ಇಂದು ಗುರು-ಶಿಷ್ಯರ ಸಂಬಂಧ ಸಂಗೀತ ಕ್ಷೇತ್ರದಲ್ಲಿ ಮಾತ್ರ ಉಳಿದುಕೊಂಡಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಧಾರವಾಡವನ್ನು ಗುರುತಿಸಿದ ಡಾ| ಬಸವರಾಜ ರಾಜಗುರು ಅವರ ಹೆಸರನ್ನು ಉಳಿಸುವ ಮತ್ತು ಯುವ ಜನತೆಯಲ್ಲಿ ಅವರ ಕಾರ್ಯ ಸಾಧನೆ ಬಿತ್ತುವ ದೃಷ್ಟಿಯಿಂದ ಡಾ| ಬಸವರಾಜ ರಾಜಗುರು ಟ್ರಸ್ಟ್‌ ನಿರಂತರ ಇಂತಹ ಕಾರ್ಯಕ್ರಮ ಆಯೋಜಿಸುತ್ತಿದೆ.

ಅಲ್ಲದೇ ಶೀಘ್ರದಲ್ಲಿಯೇ ಡಾ| ಬಸವರಾಜ ರಾಜಗುರು ಅವರ ಕುರಿತಾದ ಸಾಕ್ಷéಚಿತ್ರ ಹೊರ ತರಲಾಗುವುದು ಎಂದರು. ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್‌ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಮಾತನಾಡಿ, ಗುರು-ಶಿಷ್ಯ ಪರಂಪರೆಯಲ್ಲಿ ಅಪಾರ ನಂಬಿಕೆಯಿದ್ದ ಡಾ| ಬಸವರಾಜ ರಾಜಗುರು ಅವರ ನೆನಪಿಗಾಗಿ ಟ್ರಸ್ಟ್‌ ವತಿಯಿಂದ ಅವರ ಮೊದಲ ಶಿಷ್ಯರನ್ನು ಸನ್ಮಾನಿಸುತ್ತಿರುವುದು ಶ್ಲಾಘನೀಯ ಎಂದರು. 

ಈ ಸಂದರ್ಭದಲ್ಲಿ ಡಾ| ಬಸವರಾಜ ರಾಜಗುರು ಅವರ ಮೊದಲ ಶಿಷ್ಯರಾದ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡ ಪಂ| ಸೋಮನಾಥ ಮರಡೂರ ಹಾಗೂ ಪಂ| ಗಣಪತಿ ಭಟ್‌ ಸೇರಿದಂತೆ ಸಂತೂರ ವಾದಕ ಮುಂಬೈನ ಪಂ| ಸತೀಶ ವ್ಯಾಸ ಅವರನ್ನು ಸನ್ಮಾನಿಸಲಾಯಿತು. ವಿಶ್ವರಾಜ  ರಾಜಗುರು ಹಾಗೂ ಪಂ| ಗಣಪತಿ ಭಟ್‌ ಅವರಿಂದ ಗಾಯನ ಹಾಗೂ ಮುಂಬಯಿಯ ಪಂ| ಸತೀಶ ವ್ಯಾಸ ಅವರಿಂದ ಸಂತೂರ್‌ ವಾದನ ಜರುಗಿತು.

ಟ್ರಸ್ಟ್‌ನ ಸದಸ್ಯರಾದ  ಭಾರತಿದೇವಿ ರಾಜಗುರು, ಡಾ| ಮುದ್ದು ಮೋಹನ, ಡಾ| ಉದಯಕುಮಾರ ದೇಸಾಯಿ, ಸಿದ್ಧಲಿಂಗೇಶ ರಂಗಣ್ಣವರ ಇದ್ದರು. ಫೆ.16ರಂದು ಸಂಗೀತಾ ಕಟ್ಟಿ (ಗಾಯನ),  ಪಂ| ಶ್ರೀಪಾದ ಹೆಗಡೆ (ಗಾಯನ), ಪಂ| ರೋಣು ಮುಜುಮದಾರ (ಕೊಳಲು ವಾದನ) ನಡೆಯಲಿದೆ. ಫೆ.17ರಂದು ಡಾ| ಮುದ್ದುಮೋಹನ್‌ (ಗಾಯನ), ಪಂ| ಪರಮೇಶ್ವರ ಹೆಗಡೆ  (ಗಾಯನ), ಡಾ| ಹನುಮಣ್ಣ ನಾಯಕ ದೊರೆ (ಗಾಯನ), ಪಂ| ಸೋಮನಾಥ ಮರಡೂರ (ಗಾಯನ) ಭಾಗಹಿಸಲಿದ್ದಾರೆ. 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

P.-Joshi

Bengaluru Jail: ಸರಕಾರದಿಂದಲೇ ದರ್ಶನ್‌ ಕೇಸ್‌ ಫೋಟೋ ವೈರಲ್‌: ಪ್ರಹ್ಲಾದ್‌ ಜೋಶಿ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.