Dharwad: ಕಬ್ಬಿನ ಗದ್ದೆಯಲ್ಲಿ ಪತ್ತೆಯಾಯ್ತು ಆರು ಅಡಿ ಉದ್ದದ ಹೆಬ್ಬಾವು
Team Udayavani, Oct 1, 2024, 1:19 PM IST
ಧಾರವಾಡ: ಧಾರವಾಡ ತಾಲೂಕಿನ ನಿಗದಿ ಗ್ರಾಮದ ರೈತರ ಕಬ್ಬಿನ ಗದ್ದೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅದನ್ನು ರಕ್ಷಣೆ ಮಾಡಿ ಸುರಕ್ಷಿತವಾಗಿ ಮರಳಿ ಅರಣ್ಯಕ್ಕೆ ಬಿಡಲಾಗಿದೆ.
ನಿಗದಿ ಗ್ರಾಮದ ರೈತ ಸಿದ್ಧಬಸಪ್ಪ ಹಳಿಯಾಳ ಎಂಬ ರೈತ ಅಂಬ್ಲಿಕೊಪ್ಪ ಗ್ರಾಮದ ಹದ್ದಿನಲ್ಲಿ ಕಬ್ಬಿನ ಜಮೀನು ಹೊಂದಿದ್ದು, ಕಬ್ಬಿನ ಸೋಗೆ ಸುಲಿಯುವ ಸಂದರ್ಭದಲ್ಲಿ ಈ ಹೆಬ್ಬಾವು ರೈತನ ಕಣ್ಣಿಗೆ ಬಿದ್ದಿದೆ. ಕೂಡಲೇ ಈ ಮಾಹಿತಿಯನ್ನು ಉರಗ ರಕ್ಷಕ ಯಲ್ಲಪ್ಪ ಜೋಡಳ್ಳಿ ಅವರ ಗಮನಕ್ಕೆ ತಂದಾಗ ಯಲ್ಲಪ್ಪ ಮತ್ತು ಆತನ ಸಂಗಡಿಗರು ಸ್ಥಳಕ್ಕೆ ಹೋಗಿ ಆ ಹೆಬ್ಬಾವನ್ನು ರಕ್ಷಣೆ ಮಾಡಿದ್ದಾರೆ.
ಅಂದಾಜು 4 ವರ್ಷದ ಹೆಣ್ಣು ಹೆಬ್ಬಾವು ಇದಾಗಿದ್ದು, ಸುಮಾರು 20-25 ಕೆಜಿ ತೂಕದ ಜತೆಗೆ ಆರು ಅಡಿ ಉದ್ದವಿದೆ. ಕಬ್ಬಿನ ಗದ್ದೆಯಲ್ಲಿ ಕಾರ್ಯಾಚರಣೆ ನಡೆಸಿ ಯಲ್ಲಪ್ಪ ಅವರು ಆ ಹೆಬ್ಬಾವನ್ನು ರಕ್ಷಣೆ ಮಾಡಿ ಧಾರವಾಡದ ಅರಣ್ಯ ಇಲಾಖೆಗೆ ತಂದಿದ್ದರು. ಅಲ್ಲಿ ಅರಣ್ಯ ಇಲಾಖೆಯವರ ಆದೇಶದಂತೆ ಆ ಹಾವನ್ನು ಮರಳಿ ಅರಣ್ಯಕ್ಕೆ ಬಿಟ್ಟಿದ್ದಾರೆ.
ಇದನ್ನೂ ಓದಿ: Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಮಹಿಳೆಯರಿಬ್ಬರ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಮಹಿಳೆಯರಿಬ್ಬರ ಬಂಧನ
ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ
Political: ಡಿಸಿಎಂ ಡಿ.ಕೆ.ಶಿವಕುಮಾರ್ -ಪರಮೇಶ್ವರ್ ರಹಸ್ಯ ಭೇಟಿ; ಮಾತುಕತೆ
Illegal immigration: ಪಾಕಿಸ್ಥಾನಿಗರ ವಿಚಾರಣೆ ನಡೆಯುತ್ತಿದೆ: ಗೃಹ ಸಚಿವ ಪರಮೇಶ್ವರ್
Govt.,: ಆರ್ಥಿಕ ಹೊರೆ ತಗ್ಗಿಸಲು ನಿಗಮ-ಮಂಡಳಿ ವಿಲೀನ?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Karkala: ಕೆಮ್ಮಣ್ಣು ತಿರುವಿನಲ್ಲಿ ಅಪಾಯಕಾರಿ ಮರ !
Thekkatte: ಕುಸಿತದ ಭೀತಿಯಲ್ಲಿದೆ ಕನ್ನುಕೆರೆ ತಡೆಗೋಡೆ
Tragedy: ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಶಾಲಾ ಬಸ್ ಬೆಂಕಿಗಾಹುತಿ… 25 ಮಂದಿ ಸಜೀವ ದಹನ
ಲಡಾಖ್ ನಿಂದ ದೆಹಲಿ ಚಲೋ ಪಾದಯಾತ್ರೆ-ವಾಂಗ್ಚುಕ್ ವಶಕ್ಕೆ: ವಿಪಕ್ಷಗಳ ಆಕ್ರೋಶ
Kundapura: ರಾಷ್ಟ್ರೀಯ ಹೆದ್ದಾರಿ ಬದಿ ವಿದ್ಯಾರ್ಥಿಗಳು ರಸ್ತೆಯಲ್ಲೇ ಬಾಕಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.