Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

ಹಾವೇರಿ: ಚರಂಡಿಗೆ ಬಿದ್ದು ಬಾಲಕ ಸಾವು; ಚಿತ್ರದುರ್ಗ:ಮನೆ ಕುಸಿದು ವೃದ್ಧೆ ಸಾವು

Team Udayavani, Oct 18, 2024, 12:34 AM IST

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

ಹುಬ್ಬಳ್ಳಿ: ವಾಯುಭಾರ ಕುಸಿತದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಉತ್ತರ ಕರ್ನಾಟಕ ಅಕ್ಷರಶಃ ತತ್ತರಿಸಿ ಹೋಗಿದೆ. ಕಟಾವಿಗೆ ಬಂದಿದ್ದ ಬೆಳೆ ಭಾರೀ ಪ್ರಮಾಣದಲ್ಲಿ ಹಾಳಾಗಿದ್ದು ರೈತರು ದಿಕ್ಕು ತೋಚದಂತಾಗಿದ್ದಾರೆ. ಹಾವೇರಿಯಲ್ಲಿ ಚರಂಡಿಗೆ ಬಿದ್ದು ಬಾಲಕ ಮೃತಪಟ್ಟರೆ, ಚಿತ್ರದುರ್ಗದಲ್ಲಿ ಮನೆ ಗೋಡೆ ಕುಸಿದು ವೃದ್ಧೆ ಅಸುನೀಗಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದೆ. ಗುರುವಾರ ಬೆಳಗ್ಗೆ ಎಸ್ಪಿ ಕಚೇರಿ ಎದುರು ಮಳೆ ನೀರಿನಲ್ಲಿ ರಸ್ತೆ ಕಾಣದೆ ಚರಂಡಿಗೆ ಬಿದ್ದು ಬಾಲಕ ಮೃತಪಟ್ಟಿದ್ದಾನೆ.

ಶಿವಾಜಿ ನಗರದ ನಿವಾಸಿ ನಿವೇದನ ಬಸವರಾಜ ಗುಡಿಗೇರ (12) ಬೆಳಗ್ಗೆ ತನ್ನ ಸಹಪಾಠಿಗಳೊಂದಿಗೆ ಶಿವಾಜಿ ನಗರದ ಬಳಿ ಗಿರಿಯಾಸ್‌ ಅಂಗಡಿ ಎದುರು ಆಟ ಆಡುತ್ತಿದ್ದ. ಈ ವೇಳೆ ತೆರೆದ ಕಾಲುವೆ ದಾಟಲು ಮುಂದಾದಾಗ ಕಾಲು ಜಾರಿ ಚರಂಡಿಯಲ್ಲಿ ಬಿದ್ದಿದ್ದಾನೆ. ಕಾರ್ಯಾಚರಣೆ ನಡೆಸಿ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫ‌ಲಿಸದೆ ಮೃತಪಟ್ಟಿದ್ದಾನೆ.

ಚಿತ್ರದುರ್ಗ ತಾಲೂಕು ಈಚಲನಾಗೇನಹಳ್ಳಿಯಲ್ಲಿ ಮನೆ ಗೋಡೆ ಕುಸಿದು ರಂಗಮ್ಮ (63) ಮೃತಪಟ್ಟಿದ್ದಾರೆ. ಹರಿಹರದ ಜೈಭೀಮ ನಗರದಲ್ಲಿ ಮನೆ ಗೋಡೆ ಕುಸಿದು ಬಾಲಕಿ ಆಯೇಷಾ (4) ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ದಾವಣಗೆರೆಯಲ್ಲಿ ಹರಿಹರ-ಹರಪನಹಳ್ಳಿ ಸಂಪರ್ಕ ಕಲ್ಪಿಸುವ ಪ್ರಮುಖ ಸೇತುವೆ ನೀರಿನಲ್ಲಿ ಮುಳುಗಿದ್ದರಿಂದ ರಸ್ತೆ ಮಾರ್ಗ ಬಂದ್‌ ಆಗಿದೆ. ದಾವಣಗೆರೆ-ಹಳೆ ಕುಂದುವಾಡ ರಸ್ತೆ ಸಂಪರ್ಕ ಕಡಿತಗೊಂಡಿದೆ. ಜಗಳೂರು ತಾಲೂಕಿನ ಜಿನಗಿ ಹಳ್ಳ ತುಂಬಿ ಹರಿಯುತ್ತಿದೆ. ಕೆರೆ ಕೋಡಿ ಹರಿದು ಹಿರೇಮಲ್ಲನಹೊಳೆ ಗ್ರಾಮ ಜಲಾವೃತವಾಗಿದ್ದರಿಂದ 40 ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.

ಹರಿಹರದಲ್ಲಿ ಕಾಲುವೆ ನೀರು ಮನೆಗಳಿಗೆ ನುಗ್ಗಿ 100 ಹೆಚ್ಚು ಕುಟುಂಗಳು ಅತಂತ್ರವಾಗಿವೆ. ಹೊಲಗಳಿಗೆ ನೀರು ನುಗ್ಗಿದ್ದರಿಂದ ಮೆಕ್ಕೆಜೋಳ, ಈರುಳ್ಳಿ ಬೆಳೆಗೆ ಅಪಾರ ಹಾನಿಯಾಗಿದೆ.

ಬಾಗಲಕೋಟೆ ಜಿಲ್ಲೆಯಲ್ಲಿ ಮುಂಗಾರಿಗೆ 31 ಸಾವಿರ ಹೆಕ್ಟೇರ್‌ ಈರುಳ್ಳಿ ಬೆಳೆಯಲಾಗಿತ್ತು. ಈ ಪೈಕಿ ಶೇ.25ರಷ್ಟು ಮಾತ್ರ ಕಟಾವು ಮಾಡಲಾಗಿದ್ದು ಶೇ.75ರಷ್ಟು ಬೆಳೆ ಹಾನಿಯಾಗುವ ಸ್ಥಿತಿ ನಿರ್ಮಾಣವಾಗಿದೆ. ಬಳ್ಳಾರಿ ಜಿಲ್ಲೆಯ ಸಂಡೂರು, ಸಿರಗುಪ್ಪ, ಕಂಪ್ಲಿಯಲ್ಲಿ ಸಾವಿರಾರು ಹೆಕ್ಟೇರ್‌ ಭತ್ತದ ಬೆಳೆ ನೆಲಕಚ್ಚಿದೆ. ಬೆಳಗಾವಿ ಜಿಲ್ಲೆಯಲ್ಲಿ ಗಾಳಿ ಮಳೆಗೆ ಕಬ್ಬು ನೆಲಕ್ಕುರುಳಿದೆ. ನೇಸರಗಿಯಲ್ಲಿ ಮನೆ ಗೋಡೆ ಕುಸಿದಿದ್ದು ಐವರು ಪಾರಾಗಿದ್ದಾರೆ. ಚಿಕ್ಕಮಗಳೂರಿನಲ್ಲಿ ಕಾಫಿ ಬೆಳೆ ನಷ್ಟವಾಗಿದೆ.

ಚಿತ್ರದುರ್ಗ ಜಿಲ್ಲೆ ಸಿರಿಗೆರೆ ತಾಲೂಕಿನ ಕೊಡಗವಳ್ಳಿ ಗ್ರಾಮದ ಕೆರೆ ತುಂಬಿ ತುಳುಕುತ್ತಿದ್ದು ಏರಿ ಕುಸಿಯುವ ಭೀತಿ ಎದುರಾಗಿದೆ. ಧಾರವಾಡ ಜಿಲ್ಲೆ ಕುಂದಗೋಳ ತಾಲೂಕು ದೇವನೂರು ಗ್ರಾಮದಲ್ಲಿ ಬೆಣ್ಣೆ ಹಳ್ಳದ ಪ್ರವಾಹಕ್ಕೆ ಸಿಲುಕಿದ್ದ 150 ಕುರಿ ಹಾಗೂ ಮೂವರು ಕುರಿಗಾಹಿಗಳನ್ನು ರಕ್ಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದೆ.

ಟಾಪ್ ನ್ಯೂಸ್

rathan-tata

Mumbai: ಅರಬಿ ಸಮುದ್ರದಲ್ಲಿ ರತನ್‌ ಟಾಟಾ ಚಿತಾ ಭಸ್ಮ ವಿಸರ್ಜನೆ

Salmana

Bollywood Actor: ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್‌: ಪೊಲೀಸ್‌

Priyanka-VA

By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

supreme-Court

Citizenship: ವಲಸಿಗರಿಗೆ ಪೌರತ್ವ ನೀಡುವ ಮಾನ್ಯತೆ ಎತ್ತಿಹಿಡಿದ ಸುಪ್ರೀಂಕೋರ್ಟ್‌

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

1-reeeeee

Udupi Shri Krishna Matha; 100 ಕಲಾವಿದರಿಂದ ನಿರಂತರ 14 ತಾಸು ನೃತ್ಯ ಪ್ರದರ್ಶನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

1-rss

Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ

Madhu Bangarappa

Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ

Will do Maratha Reservation Model protest for Reservation: Panchmasali Shri

ಮೀಸಲಾತಿಗಾಗಿ ಮರಾಠ ಮೀಸಲು ಮಾದರಿ ಉಗ್ರ‌ ಹೋರಾಟ: ಪಂಚಮಸಾಲಿ ಶ್ರೀ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

rathan-tata

Mumbai: ಅರಬಿ ಸಮುದ್ರದಲ್ಲಿ ರತನ್‌ ಟಾಟಾ ಚಿತಾ ಭಸ್ಮ ವಿಸರ್ಜನೆ

Salmana

Bollywood Actor: ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್‌: ಪೊಲೀಸ್‌

Priyanka-VA

By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

police crime

Sullia; ಸ್ತ್ರೀಯರ ಬಗ್ಗೆ ತುತ್ಛ ಹೇಳಿಕೆ ಆರೋಪ: ಅರಣ್ಯಾಧಿಕಾರಿ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.