Ayodhya; ಕರುನಾಡ ಭಕ್ತರಿಗೆ ರಾಮಲಲ್ಲಾ ದರ್ಶನ; ರಾಜ್ಯದಿಂದ ಎರಡು ರೈಲು


Team Udayavani, Jan 24, 2024, 6:45 AM IST

trainAyodhya; ಕರುನಾಡ ಭಕ್ತರಿಗೆ ರಾಮಲಲ್ಲಾ ದರ್ಶನ; ರಾಜ್ಯದಿಂದ ಎರಡು ರೈಲುAyodhya; ಕರುನಾಡ ಭಕ್ತರಿಗೆ ರಾಮಲಲ್ಲಾ ದರ್ಶನ; ರಾಜ್ಯದಿಂದ ಎರಡು ರೈಲು

ಹುಬ್ಬಳ್ಳಿ: ಕರುನಾಡ 3,500 ಭಕ್ತರಿಗೆ ಫೆ. 19ರಂದು ಅಯೋಧ್ಯೆ ರಾಮಲಲ್ಲಾನ ದರ್ಶನ ಭಾಗ್ಯ ಕಲ್ಪಿಸಲಾಗಿದ್ದು, ರಾಜ್ಯದಿಂದ ಎರಡು ವಿಶೇಷ ರೈಲುಗಳು ಅಯೋಧ್ಯೆಗೆ ತೆರಳಲಿವೆ.

ಉತ್ತರ ಭಾರತದಲ್ಲಿ ವಿಪರೀತ ಚಳಿ ಕಾರಣ ಅಲ್ಲಿನ ರಾಜ್ಯಗಳ ಭಕ್ತರಿಗೆ ಮೊದಲಿಗೆ ಶ್ರೀರಾಮಲಲ್ಲಾನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಫೆಬ್ರವರಿ ಎರಡನೇ ವಾರದಿಂದ ಚಳಿ ಕಡಿಮೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ರಾಜ್ಯಗಳ ಭಕ್ತರಿಗೆ ದರ್ಶನಕ್ಕೆ ಸೂಚಿಸಲಾಗಿದೆ. ವಿಶ್ವ ಹಿಂದೂ ಪರಿಷತ್‌ ಮತ್ತು ಸಂಘ ಪರಿವಾರ ಪ್ರಯಾಣದ ಸಂಯೋಜನ ಕಾರ್ಯ ಮಾಡಲಿದ್ದು, ಅಯೋಧ್ಯೆಯಲ್ಲಿ ವಸತಿ- ಪ್ರಸಾದ ವ್ಯವಸ್ಥೆ ಕಲ್ಪಿಸಲಿವೆ. ರೈಲ್ವೇ ಇಲಾಖೆ ವಿವಿಧ ರಾಜ್ಯಗಳಿಂದ ನೇರವಾಗಿ ಅಯೋಧ್ಯೆಗೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಿದ್ದು, ಪ್ರತೀ ರೈಲಿಗೆ ನೋಡಲ್‌ ಅಧಿಕಾರಿಯೊಬ್ಬರನ್ನು ನೇಮಕ ಮಾಡಿದೆ. ಭಕ್ತರು ವಿಶೇಷ ರೈಲಿನಲ್ಲಿ ಅಯೋಧ್ಯೆಗೆ ತೆರಳಲು ಮುಂಗಡ ಟಿಕೆಟ್‌ ಕಾಯ್ದಿರಿಸಿಕೊಳ್ಳಬೇಕಿದ್ದು, ಪ್ರಯಾಣ ವೇಳೆ ಉಪಾಹಾರ-ಊಟ ಕಲ್ಪಿಸಲಾಗುತ್ತಿದೆ.

ರಾಜ್ಯದಿಂದ ಎರಡು ರೈಲು
ಕರ್ನಾಟಕದ ಭಕ್ತರಿಗೆ ರಾಮಲಲ್ಲಾ ದರ್ಶನಕ್ಕೆ ಫೆಬ್ರವರಿ 19ರಂದು ಸಮಯ ನೀಡಲಾಗಿದ್ದು, ಇದಕ್ಕಾಗಿ ಮೈಸೂರು-ಬೆಳಗಾವಿಯಿಂದ ಎರಡು ವಿಶೇಷ ರೈಲುಗಳು ಅಯೋಧ್ಯೆಗೆ ತೆರಳಲಿವೆ. ಕರಾವಳಿ ಸೇರಿ ದಕ್ಷಿಣ ಪ್ರಾಂತದ ಸುಮಾರು ಎರಡು ಸಾವಿರ ಭಕ್ತರಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಈ ಭಾಗದವರು ಮೈಸೂರಿನಿಂದ ಹೊರಡುವ ರೈಲಿನಲ್ಲಿ ಪ್ರಯಾಣ ಬೆಳೆಸಬೇಕಿದೆ. ಉತ್ತರ ಪ್ರಾಂತದ ಭಕ್ತರು ಬೆಳಗಾವಿಯಿಂದ ಹೊರಡುವ ರೈಲಿನಲ್ಲಿ ಪ್ರಯಾಣ ಬೆಳೆಸಬಹುದಾಗಿದ್ದು, ಈ ಭಾಗದಿಂದ ಸುಮಾರು 1,500 ಭಕ್ತರಿಗೆ ಅವಕಾಶ ಕಲ್ಪಿಸಲಾಗುತ್ತಿದೆ.

42 ಎಕರೆಯಲ್ಲಿ ಅರಳಿದೆ ನಗರ
ಅಯೋಧ್ಯೆಗೆ ತೆರಳುವ ಭಕ್ತರು ತಂಗುವುದಕ್ಕಾಗಿ ವಿಶ್ವ ಹಿಂದೂ ಪರಿಷತ್‌ನಿಂದ ಅಯೋಧ್ಯೆಯ ರೈಲ್ವೇ ನಿಲ್ದಾಣಕ್ಕೆ ಅನತಿ ದೂರದಲ್ಲಿ ಸುಮಾರು 42 ಎಕರೆ ಜಮೀನು ಈ ಹಿಂದೆಯೇ ಖರೀದಿಸಿದ್ದು, ಅದೇ ಜಾಗದಲ್ಲಿ ತಾತ್ಕಾಲಿಕ ನಗರಗಳನ್ನು ರೂಪಿಸಲಾಗಿದೆ. ಅಂದಾಜು 5-6 ಸಾವಿರ ಜನರು ಉಳಿಯುವುದಕ್ಕೆ ಟೆಂಟ್‌ಗಳನ್ನು ನಿರ್ಮಿಸಲಾಗಿದೆ. ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ತೆರಳಿದ್ದ ಮಠಾಧೀಶರು, ಸಂತರು, ವಿವಿಧ ಕ್ಷೇತ್ರಗಳ ಗಣ್ಯರನ್ನು ಉಳಿಸಿದ್ದು ಇದೇ ಟೆಂಟ್‌ಗಳಲ್ಲಿ. ಈಗ ಅವುಗಳನ್ನು ರಾಮಲಲ್ಲಾ ದರ್ಶನಕ್ಕೆ ಬರುವ ಭಕ್ತರ ಬಳಕೆಗೆ ಉದ್ದೇಶಿಸಲಾಗಿದೆ.

ಇಂದು ಪರಿವಾರ ಸಭೆ
ಅಯೋಧ್ಯೆಯಲ್ಲಿ ರಾಮಲಲ್ಲಾ ದರ್ಶನಕ್ಕೆ ಯಾರಿಗೆಲ್ಲ ಅವಕಾಶ ನೀಡಬೇಕು, ಎಲ್ಲ ಸಮಾಜಗಳವರಿಗೂ ಅವಕಾಶ ದೊರಕಿಸುವುದು, ಪ್ರಯಾಣದ ವ್ಯವಸ್ಥೆ, ತಯಾರಿ ಇತ್ಯಾದಿ ವಿಷಯಗಳ ಕುರಿತು ಚರ್ಚಿಸಲು ಜ. 24ರಂದು ಸಂಘ ಪರಿವಾರದ ಮಹತ್ವದ ಸಭೆ ನಡೆಯಲಿದೆ ಎಂದರು.

ಟಾಪ್ ನ್ಯೂಸ್

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

Mahesh

Hubli; ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಬಿದ್ದರೆ ನಮ್ಮ ಹೈಕಮಾಂಡ್..: ಮಹೇಶ ಟೆಂಗಿನಕಾಯಿ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

12

Chowkidar Movie: ಚೌಕಿದಾರ್‌ಗೆ ಮುಹೂರ್ತ ಇಟ್ರಾ!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.