ವರ್ಷದ ಹಿಂದೆ ಹೂತಿದ್ದ ಶವ ಮರುಪರೀಕ್ಷೆ


Team Udayavani, Nov 24, 2019, 10:32 AM IST

huballi-tdy-1

ನವಲಗುಂದ: ವರ್ಷದ ಹಿಂದೆ ಹೂಳಿದ್ದ ಅಪರಿಚಿತ ಯುವಕನ ಶವವನ್ನು ಕೊಲೆ ಪ್ರಕರಣ ಸಂಬಂಧ ಮೇಲಕ್ಕೆತ್ತಿ ಮರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ವಿದ್ಯಮಾನ ಪಟ್ಟಣದ ರುದ್ರಭೂಮಿಯಲ್ಲಿ ಶನಿವಾರ ನಡೆದಿದೆ.

2018ರ ಡಿ. 4ರಂದು ಇಬ್ರಾಹಿಂಪುರ ಬಳಿ ಮಲಪ್ರಭಾ ಕಾಲುವೆಯಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿತ್ತು. ವಾರಸುದಾರರು ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ಪಂಚನಾಮೆ ಮಾಡಿ, ಮರಣೋತ್ತರ ಪರೀಕ್ಷೆ ನಡೆಸಿ ಪಟ್ಟಣದ ರುದ್ರಭೂಮಿಯಲ್ಲಿ ಶವಸಂಸ್ಕಾರ ನಡೆಸಿದ್ದರು. ಯುವಕನ ಪೋಟೋವನ್ನು ರಾಜ್ಯಾದ್ಯಂತ ಎಲ್ಲ ಠಾಣೆಗಳಿಗೆ ಕಳುಹಿಸಿಕೊಡಲಾಗಿತ್ತು.

ಸಾಮ್ಯತೆ: ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ದೊಡ್ಡವಾಡ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬೈಲಹೊಂಗಲ ತಾಲೂಕಿನ ಹಿರೇಬೆಳ್ಳಕಟ್ಟಿಯ ಶಿವಪ್ಪ ಬಸಪ್ಪ ಬಿಜ್ಜಣ್ಣವರ(26) ಎಂಬಾತ ಕೊಲೆಯಾದ ಪ್ರಕರಣ ದಾಖಲಾಗಿತ್ತು. ಈತನ ಫೋಟೋಕ್ಕೂ, ಕಾಲುವೆಯಲ್ಲಿ ಶವವಾಗಿ ದೊರೆತಿದ್ದವನ ಫೋಟೋಕ್ಕೂ ಸಾಮ್ಯತೆ ಕಂಡುಬಂದ ಹಿನ್ನೆಲೆಯಲ್ಲಿ ಹೂಳಿದ್ದ ಶವ ಮೇಲಕ್ಕೆತ್ತಿ ಪರೀಕ್ಷೆಗೆ ಒಳಪಡಿಸಲಾಗಿದೆ.

ಹೈದ್ರಾಬಾದ್‌ಗೆ ಸ್ಯಾಂಪಲ್‌: ಹುಬ್ಬಳ್ಳಿ ಕಿಮ್ಸ್‌ ಪ್ರಯೋಗಾಲಯ ತಜ್ಞ ವೈದ್ಯರಾದ ಡಾ| ತಲಯವಾಡು ತಂಡದವರು, ಉಪವಿಭಾಗಾಧಿಕಾರಿ ಮಹಮ್ಮದ್‌ ಜುಬೇರ್‌, ತಹಶೀಲ್ದಾರ್‌ ನವೀನ ಹುಲ್ಲೂರು ನೇತೃತ್ವದಲ್ಲಿ ಮೂರು ತಾಸುಗಳ ಕಾರ್ಯಾಚರಣೆ ಬಳಿಕ ಶವದ ಪಳೆಯುಳಿಕೆ ಹೊರ ತೆಗೆಯಲಾಯಿತು. ಡಿಎನ್‌ಎ ಪರೀಕ್ಷೆಗೆ ಬೇಕಾದ ಮಾದರಿಗಳನ್ನು ಸಂಗ್ರಹಿಸಿ ಹೈದರಾಬಾದ್‌ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಿಕೊಡಲಾಯಿತು. ಸ್ಥಳದಲ್ಲಿ ಪಿಎಸ್‌ಐ ಜಯಪಾಲ ಪಾಟೀಲ, ಪೊಲೀಸ್‌ ಹಾಗೂ ಪುರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.

ಮನೆಯವರಿಂದ್ಲೇ ಕೊಲೆಯಾದನೇ!:  ಬೈಲಹೊಂಗಲ ತಾಲೂಕಿನ ಹಿರೇಬೆಳ್ಳಕಟ್ಟಿಯ ಶಿವಪ್ಪ ಬಿಜ್ಜಣ್ಣವರ ಕೊಲೆ ಪ್ರಕರಣದಲ್ಲಿ ಆತನ ಕುಟುಂಬದವರೇ ಐವರು ಆರೋಪಿತರಾಗಿದ್ದು, ಬಂಧನಕ್ಕೊಳಗಾಗಿದ್ದಾರೆ. ಲೈಂಗಿಕ ಕಿರುಕುಳ ಹಿನ್ನೆಲೆಯಲ್ಲಿ ಮಲಪ್ರಭಾ ಕಾಲುವೆಗೆ ನೂಕಿ ಕೊಲೆ ಮಾಡಿದ್ದಾಗಿ ಅವರು ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡ ಸಿಪಿಐ ಶ್ರೀಕಾಂತ ತೋಟಗಿ ಅವರಿಗೆ, ನವಲಗುಂದ ಠಾಣೆಯಿಂದ ಬಂದಿದ್ದ ಅಪರಿಚಿತ ಯುವಕನ ಶವದ ಪೋಟೋದೊಂದಿಗೆ ಸಾಮ್ಯತೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ವರ್ಷದ ಹಿಂದೆ ಮಲಪ್ರಭಾ ಕಾಲುವೆಯಲ್ಲಿ ಇಬ್ರಾಹಿಂಪುರ ಬಳಿ ದೊರೆತಿದ್ದ ಶವವನ್ನು ರುದ್ರಭೂಮಿಯಿಂದ ಮೇಲಕ್ಕೆತ್ತಿ ಮರು ಪರೀಕ್ಷೆಗೆ ಒಳಪಡಿಸಲಾಗಿದೆ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.