ಕಾಂಗ್ರೆಸ್ ಜತೆ ಬಹಿರಂಗ ಚರ್ಚೆಗೆ ಸಿದ್ಧ
Team Udayavani, Oct 23, 2017, 1:09 PM IST
ಹುಬ್ಬಳ್ಳಿ: ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹುಬ್ಬಳ್ಳಿ-ಧಾರವಾಡ ಭಾಗಕ್ಕೆ ನೀಡಿದ ಅನುದಾನ ಹಾಗೂ ಮಾಡಿದ ಕಾಮಗಾರಿ ಕುರಿತು ಕಾಂಗ್ರೆಸ್ ಮುಖಂಡರಾದ ಡಾ| ಮಹೇಶ ನಾಲವಾಡ ಹಾಗೂ ವಸಂತ ಲದವಾ ಅವರೊಂದಿಗೆ ಬಹಿರಂಗ ಚರ್ಚೆಗೆ ಸಿದ್ಧ ಎಂದು ಪಾಲಿಕೆ ಸದಸ್ಯರಾದ ವೀರಣ್ಣ ಸವಡಿ ಹಾಗೂ ಸುಧೀರ ಸರಾಫ ಸವಾಲು ಹಾಕಿದ್ದಾರೆ.
ಜಗದೀಶ ಶೆಟ್ಟರ ಅವರಿಗೆ ಕಾಂಗ್ರೆಸ್ ಸರಕಾರದ ಸಾಧನೆಯ ಬಗ್ಗೆ ಮಾಹಿತಿ ಇಲ್ಲವೆಂದು ಮಹೇಶ ನಾಲವಾಡ ಹಾಗೂ ವಸಂತ ಲದವಾ ಆರೋಪಿಸಿದ್ದು, ಕಾಂಗ್ರೆಸ್ ಸರಕಾರದ ಸಾಧನೆಯ ಕೈಪಿಡಿಯನ್ನು ಅಂಚೆ ಮೂಲಕ ಕಳಿಸಿಕೊಡುವುದಾಗಿ ಹೇಳಿಕೆ ನೀಡಿದ್ದಾರೆ.
ಕಳೆದ 10 ವರ್ಷಗಳಲ್ಲಿ ಅಧಿ ಕಾರದಲ್ಲಿದ್ದ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರಗಳು ನೀಡಿದ ಅನುದಾನದ ಕುರಿತು ಬಹಿರಂಗ ಚರ್ಚೆ ನಡೆಯಲಿ. ಮಹೇಶ ನಾಲವಾಡ ಅವರಿಗೆ ರಾಜ್ಯ ಸರಕಾರದಿಂದ ಮಹಾನಗರ ಪಾಲಿಕೆಗಾದ ಅನ್ಯಾಯದ ಬಗ್ಗೆ ಮಾಹಿತಿಯಿಲ್ಲ.
ಜಗದೀಶ ಶೆಟ್ಟರ ಅವರಿಗೆ ಮಾಹಿತಿ ಇಲ್ಲವೆಂದು ಹೇಳಿರುವುದು ಹಾಸ್ಯಸ್ಪದ. ಹುಬ್ಬಳ್ಳಿ-ಧಾರವಾಡ ಮಹಾನಗರದ ರಸ್ತೆಗಳು ಹದಗೆಟ್ಟಿರುವುದಕ್ಕೆ ಕಾರಣ ಪಾಲಿಕೆಯ ಅನುದಾನ ನಿವೃತ್ತ ನೌಕರರ ಪಿಂಚಣಿ ನೀಡಲು ಖರ್ಚಾಗುತ್ತಿದೆ. ರಾಜ್ಯ ಸರಕಾರ ಮಹಾನಗರ ಪಾಲಿಕೆಗೆ ತಾವು ನೀಡಬೇಕಾದ ನಿವೃತ್ತಿ ನೌಕರರ ಬಾಕಿ ವೇತನವನ್ನು ನೀಡುತ್ತಿಲ್ಲ.
ಪ್ರತಿ ತಿಂಗಳು 3 ಕೋಟಿ ರೂ. ಹಣವನ್ನು ಪಾಲಿಕೆಯ ನಿವೃತ್ತ ನೌಕರರಿಗೆ ನೀಡಲಾಗುತ್ತಿದೆ. ಮಹೇಶ ನಾಲವಾಡ ಹಾಗೂ ವಸಂತ ಲದವಾ ಅವರು ತಮ್ಮ ನಾಯಕರನ್ನು ಮೆಚ್ಚಿಸಲು ಸುದ್ದಿಗೋಷ್ಠಿ ನಡೆಸದೆ ಬಹಿರಂಗ ಚರ್ಚೆಗೆ ಸ್ಥಳ ಹಾಗೂ ದಿನಾಂಕ ನಿಗದಿಪಡಿಸಲಿ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ
MUDA Case: ಸಿದ್ದರಾಮಯ್ಯ ಅಧಿಕಾರದಲ್ಲಿದ್ರೆ ತನಿಖೆ ಮೇಲೆ ಪ್ರಭಾವ ಖಚಿತ: ಶಾಸಕ ಯತ್ನಾಳ್
Hubli; ಕೋರ್ಟ್ ಆದೇಶಕ್ಕೆ ತಲೆಬಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಪ್ರಮೋದ ಮುತಾಲಿಕ್
Hubli: ಗೌರವ ಉಳಿಯಬೇಕೆಂದರೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಬಸವರಾಜ ಬೊಮ್ಮಾಯಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.