ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ; ಸರ್ಕಾರದ ಮೌನ ಸರಿಯಲ್ಲ
Team Udayavani, Aug 13, 2021, 1:27 PM IST
ಹುಬ್ಬಳ್ಳಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸುವುದಾಗಿ ಸರಕಾರ ನೀಡಿದ ಭರವಸೆ ಸೆಪ್ಟೆಂಬರ್ಗೆ ಅಂತ್ಯವಾಗಲಿದ್ದು, ಸರಕಾರದ ಮೌನ ಸರಿಯಲ್ಲ. ಅಧಿವೇಶನದಲ್ಲಿ ದಾಖಲಾಗಿರುವುದನ್ನು ಕಾರ್ಯಗತಗೊಳಿಸಬೇಕು. ಇಲ್ಲದಿದ್ದರೆ ಸಮಾಜ ಮತ್ತೂಂದು ಹಂತದ ಹೋರಾಟಕ್ಕೆ ಮುಂದಾಗಲಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದ್ದಾರೆ.
ಗುರುವಾರ ಖಾಸಗಿ ಹೋಟೆಲ್ನಲ್ಲಿ ಪಂಚಮಸಾಲಿ ಮೀಸಲಾತಿಗಾಗಿ ಚಳವಳಿಗಾರ ದುಂಡು ಮೇಜಿನ ಸಭೆ ಹಾಗೂ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ರಾಜ್ಯ ಅಭಿಯಾನದ ನೇತೃತ್ವ ವಹಿಸಿ ಮಾತನಾಡಿದರು. ಸಮಾಜದ 10 ಲಕ್ಷ ಜನರು ಹೋರಾಟ ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಸರಕಾರ ಅಧಿವೇಶನದಲ್ಲಿ ಭರವಸೆ ನೀಡಿ ಪಡೆದಿದ್ದ ಕಾಲಾವಕಾಶ ಸೆಪ್ಟೆಂಬರ್ ಗೆ ಪೂರ್ಣಗೊಳ್ಳಲಿದೆ. ಆದರೆ ಸರಕಾರದಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಸರಕಾರವನ್ನು ಎಚ್ಚರಿಸುವ ಕಾರಣಕ್ಕೆ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
ಹಿಂದಿನ ಮುಖ್ಯಮಂತ್ರಿಗಳ ಪುತ್ರ ಸಮಾವೇಶಕ್ಕೆ ಅರಮನೆ ಮೈದಾನ ದೊರೆಯದಂತೆ ಕುತಂತ್ರ ಮಾಡಿದರು. ಅಂದಿನ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಮೈದಾನ ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸಿದ್ದರು. ಪಂಚಮಸಾಲಿ ಸಮಾಜದ ಮುಖಂಡರೊಬ್ಬರು ಮುಖ್ಯಮಂತ್ರಿಯಾಗುತ್ತಿದ್ದರು. ಆದರೆ ಅದನ್ನು ಅವರದೇ ಪಕ್ಷದ ನಾಯಕರು ತಪ್ಪಿಸಿದರು. ಕೆಲ ಸಮಾಜದ ಮಠಗಳಿಗೆ ಇಂತಹವರೇ ಮುಖ್ಯಮಂತ್ರಿಯಾಗಬೇಕು ಎಂಬುದಿದೆ. ಆದರೆ ಪಂಚಮಸಾಲಿ ಪೀಠ ತನ್ನ ಸಮಾಜದ ಮಕ್ಕಳಿಗೆ ಮೀಸಲಾತಿ ದೊರಕಿಸಲು ಮೊದಲ ಆದ್ಯತೆ ನೀಡಿದೆ. ಪಂಚಮಸಾಲಿ ಸಮಾಜದ ವಿಶ್ವಾಸದ್ರೋಹ ಮಾಡಿ ಅಧಿಕಾರ ಕಳೆದುಕೊಂಡ ಉದಾಹರಣೆಗಳಿವೆ ಎಂದರು.
ಪಂಚಮಸಾಲಿ ಸಮಾಜ 2ಎ ಹಾಗೂ ಉಳಿದ ಲಿಂಗಾಯತ ಸಮಾಜಗಳನ್ನು ಒಗ್ಗೂಡಿಸಿಕೊಂಡು ಹೋಗುವ ಮನಸ್ಥಿತಿ ಹೊಂದಿದೆ. ಒಬಿಸಿ ಮೀಸಲಾತಿ ವಿಚಾರದಲ್ಲಿ ಕೇಂದ್ರ ಸರಕಾರ ತೆಗೆದುಕೊಂಡ ನಿರ್ಧಾರ ಸ್ವಾಗತಾರ್ಹ. ಈ ನಿರ್ಧಾರದ ಹಿಂದೆ ಪಂಚಮಸಾಲಿ ಹೋರಾಟದ ಫಲವಿದೆ. ಹಿಂದಿನ ಹೋರಾಟದ ಸಂದರ್ಭದಲ್ಲಿ ಕೆಲ ಸಚಿವರು, ಶಾಸಕರು ತದ್ವಿರುದ್ಧ ಹೇಳಿಕೆ ನೀಡಿ ದಾರಿ ತಪ್ಪಿಸುವ ಕೆಲಸ ಮಾಡಿದರು ಎಂದರು.
ಶಾಸಕ ಹಾಗೂ ಮೀಸಲಾತಿ ಚಳವಳಿ ಸ್ವಾಗತ ಸಮಿತಿ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ, ಮಾಜಿ ಶಾಸಕ ಹಾಗೂ ಪಂಚಮಸಾಲಿ ಮಹಾಸಭಾ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ನಂದಿಹಳ್ಳಿ ಹಾಲಪ್ಪ, ಮಲ್ಲೇಶ, ಸಂಗಮೇಶ, ರಮೇಶಗೌಡ, ದಿನೇಶ ಪಾಟೀಲ, ಪಂಚನಗೌಡ ಪಾಟೀಲ, ನಾಗರಾಜ ಗೌರಿ, ಬಸಲಿಂಗಪ್ಪ ಬೂಟಿಹಾಳ, ಲಿಂಗಪ್ಪ , ಅನೀಲ ಪಾಟೀಲ, ಪುಟ್ಟಸ್ವಾಮಿ, ಅಮರೇಶ ನಾಗೂರು ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.