Rice Issue; ಕೇಂದ್ರ ಸರಕಾರದ ಮೇಲೆ ಕಾಂಗ್ರೆಸ್ ಗೂಬೆಕೂರಿಸುವ ಯತ್ನ: ಪ್ರಹ್ಲಾದ್ ಜೋಶಿ


Team Udayavani, Jun 21, 2023, 11:07 AM IST

Rice Issue; ಕೇಂದ್ರ ಸರಕಾರದ ಮೇಲೆ ಕಾಂಗ್ರೆಸ್ ಗೂಬೆಕೂರಿಸುವ ಯತ್ನ:  ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ವಿಧಾನಸಭೆ ಚುನಾವಣೆಯಲ್ಲಿ ಜನರಿಂದ ಮತಗಳನ್ನು ಪಡೆಯುವಾಗ ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿಯನ್ನು ನೀಡುವುದಾಗಿ ಘೋಷಣೆ ಮಾಡಿದ್ದ ಕಾಂಗ್ರೆಸ್, ಇದೀಗ ಕೇಂದ್ರ ಸರಕಾರ ಅಕ್ಕಿ ಕೊಡುತ್ತಿಲ್ಲ ಎಂಬ ಕುಂಟು ನೆಪ ತೆಗೆದಿದ್ದು ಇದು ಜನರಿಗೆ ಮಾಡುವ ಮೋಸವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ.

ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರ ಎಲ್ಲ ರಾಜ್ಯಗಳಿಗೆ ಪ್ರತಿಯೊಬ್ಬರಿಗೆ 5 ಕೆಜಿಯಂತೆ ಅಕ್ಕಿ ನೀಡುತ್ತಿದ್ದು ಕರ್ನಾಟಕಕ್ಕೂ ಅದೇ ಮಾದರಿಯಲ್ಲಿ ಅಕ್ಕಿ ದೊರೆಯುತ್ತಿದೆ ಆದರೆ ಕಾಂಗ್ರೆಸ್ ಘೋಷಿಸಿದಂತೆ ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿಯನ್ನು ನೀಡುವುದು ಆ ಪಕ್ಷದ ಜವಾಬ್ದಾರಿಯಾಗಿದೆ. ಹೆಚ್ಚುವರಿ ಐದು ಕೆಜಿಯನ್ನು ಘೋಷಣೆ ಮಾಡುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಕೇಳಿದ್ದರೆ ಅಥವಾ ಚುನಾವಣೆ ಸಂದರ್ಭದಲ್ಲಿ ಜನರಿಗೆ 10 ಕೆಜಿ ಅಕ್ಕಿಯ ನೀಡಿಕೆ ಘೋಷಣೆ ವೇಳೆ ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ 5 ಕೆ.ಜಿ ನೀಡಿದರೆ ಅಕ್ಕಿ ನೀಡುವುದಾಗಿ ಹೇಳಿದ್ದರೆ ಎಂದು ಪ್ರಶ್ನಿಸಿದರು.

ಚುನಾವಣೆಯಲ್ಲಿ ಮತ ಪಡೆಯುವುದಕ್ಕಾಗಿ ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದ ಕಾಂಗ್ರೆಸ್, ಇದೀಗ ಕೇಂದ್ರ ಸರಕಾರದ ಮೇಲೆ ಗೂಬೆಕೂರಿಸುವ ಯತ್ನಕ್ಕೆ ಮುಂದಾಗಿದೆ. ಕೇಂದ್ರ ಸರಕಾರ ಹೆಚ್ಚುರಿಯಾಗಿ ಅಕ್ಕಿ ನೀಡಲು ಸಾಧ್ಯವಿಲ್ಲ ಇಂತಿಷ್ಟು ಅಕ್ಕಿ ಸಂಗ್ರಹ ಇರಬೇಕೆಂಬ ನಿಯಮ ಇದೆ ಎಂದರು.

ಕಾಂಗ್ರೆಸ್ ಸರಕಾರ ಚುನಾವಣೆ ವೇಳೆ ಘೋಷಿಸಿದ ಐದು ಗ್ಯಾರಂಟಿ ಗಳಿಗೆ ದಿನಕ್ಕೊಂದು ಷರತ್ತು ವಿಧಿಸುವ ಮೂಲಕ ಜನರಿಗೆ ಮೋಸ ಮಾಡುವ ಕೆಲಸಕ್ಕೆ ಮುಂದಾಗಿದೆ ಎಂದು ಜೋಶಿ ಆರೋಪಿಸಿದರು.

ರಾಜ್ಯ ಸರಕಾರ ಗ್ಯಾರೆಂಟಿ ಯೋಜನೆಗಳ ಜಾರಿಗೆ ಬಳಕೆಯಾಗುವ ಸರ್ವರ್ ನ್ನು ಕೇಂದ್ರ ಸರ್ಕಾರ ಹ್ಯಾಕ್ ಮಾಡುತ್ತಿದೆ ಎಂಬ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯೆಸಿದ ಕೇಂದ್ರ ಸಚಿವ ಜೋಶಿ, ಇದೊಂದು ಅತ್ಯಂತ ಹಾಸ್ಯಾಸ್ಪದ ಹೇಳಿಕೆಯಾಗಿದೆ ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುವ ಮುನ್ನ ಸಚಿವರು ಯೋಚಿಸಬೇಕಾಗಿತ್ತು.

ಸಚಿವ ಜಾರಕಿಹೊಳಿಯವರು ಸರ್ವರ್ ಹ್ಯಾಕ್ ಆಗಿದೆ ಎಂಬ ಹೇಳಿಕೆ ಸಂದರ್ಭದಲ್ಲಿ ಇವಿಎಂ ಯಂತ್ರಗಳನ್ನು ಹ್ಯಾಕ್ ಮಾಡಿದ ಮಾದರಿಯಲ್ಲಿ ಸರ್ವರ್ ಹ್ಯಾಕ್ ಮಾಡಲಾಗಿದೆ ಎಂದಿದ್ದಾರೆ ಅದೇ ಇವಿಎಂ ಯಂತ್ರಗಳ ಸಹಾಯದಿಂದಲೇ ರಾಜ್ಯದಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಪಡೆದು ಅಧಿಕಾರ ಕೇಳಿದೆ ಎಂಬುದನ್ನು ಅವರು ಮರೆತಂತಿದೆ ಎಂದು ಜೋಶಿ ವ್ಯಂಗ್ಯವಾಡಿದರು.

ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಸರಕಾರದ ವಿರುದ್ಧ ಪೋಸ್ಟ್ ಹಾಕುವವರ ವಿರುದ್ಧ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶದ ಬಗ್ಗೆ ಪ್ರತಿಕ್ರಿಯಿಸಿ , ಅದೇ ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಇಲ್ಲಸಲ್ಲದ ಹೇಳಿಕೆ ಹಾಕುವಾಗ ಇದು ನೆನಪಾಗಲಿಲ್ಲವೇ ಮುಖ್ಯಮಂತ್ರಿಯವರೇ, ಸರ್ವಾಧಿಕಾರ ಧೋರಣೆ ಸರಿಯಲ್ಲ ಜನರು ನಿಮಗೆ ನಿಮಗೆ ಅಧಿಕಾರ ನೀಡಿದ್ದು ವಿನಮ್ರತೆಯಿಂದ ಆಡಳಿತ ನಡೆಸುವ, ರಾಜ್ಯದ ಅಭಿವೃದ್ಧಿಗೆ ಶ್ರಮಿಸುವಂತೆ ಸಲಹೆ ನೀಡಿದರು.

ರಾಜ್ಯ ಸರಕಾರ ಸಾರಿಗೆ ಸಂಸ್ಥೆ ಗಳ ಬಸ್ಸುಗಳಲ್ಲಿ ಮಹಿಳೆಯರ ಉಚಿತ ಪ್ರವಾಸಕ್ಕೆ ಅವಕಾಶ ನೀಡಿದ್ದು ಬಸ್ಸುಗಳ ಸಂಖ್ಯೆ ಹೆಚ್ಚಳ ಮಾಡದೆ ಇರುವುದರಿಂದ ನಿಗದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಸಂಚರಿಸುವಂತಿದ್ದು ಇದರಿಂದ ಅನೇಕ ಅಪಘಾತ ಅವಘಡಗಳು ನಡೆಯುತ್ತಿವೆ ಎಂದರು.

ಮಾಜಿ ಸಚಿವ ಶಂಕರ ಪಾಟೀಲ ಮುನೇನ ಕೊಪ್ಪ ಅವರು ಕಾಂಗ್ರೆಸ್ ಸೇರುವುದಿಲ್ಲ ಬಿಜೆಪಿಯ ತಳಮಟ್ಟದ ಕಾರ್ಯಕರ್ತರಾಗಿ ಬಂದಿರುವ ಅವರು ಪಕ್ಷದಲ್ಲಿಯೇ ಮುಂದುವರಿಯಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.