ಪರರಿಗಾಗಿ ಜೀವನ ಮುಡಿಪಾಗಿಟ್ಟಿದ್ದ ಶಿವಳ್ಳಿ

ಯರಗುಪ್ಪಿಯಲ್ಲಿ ದಿ| ಸಿ.ಎಸ್‌. ಶಿವಳ್ಳಿ ತೃತೀಯ ಪುಣ್ಯಸ್ಮರಣೆ

Team Udayavani, Mar 21, 2022, 10:46 AM IST

2

ಕುಂದಗೋಳ: ಮನುಷ್ಯನ ದೇಹ ಹೋದ ಮೇಲೂ ಅವರ ಹೆಸರು ಜನರ ಬಾಯಲ್ಲಿ ಇದ್ದಾಗ ಮಾತ್ರ ಬದುಕಿಗೊಂದು ಅರ್ಥ ಬರುತ್ತದೆ. ಆ ದಾರಿಯಲ್ಲಿ ನಿಮ್ಮ ನಾಯಕ ಸಿ.ಎಸ್‌. ಶಿವಳ್ಳಿಯವರು ಬದುಕಿ ತೋರಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಎಸ್‌.ಸಿದ್ದರಾಮಯ್ಯ ಹೇಳಿದರು.

ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ರವಿವಾರ ಮಾಜಿ ಸಚಿವ ದಿ| ಸಿ.ಎಸ್‌. ಶಿವಳ್ಳಿಯವರ ತೃತೀಯ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮೂರ್ತಿ ಅನಾವರಣಗೊಳಿಸಿ ಮಾತನಾಡಿದ ಅವರು, ಮನುಷ್ಯರಲ್ಲಿ ಎರಡು ವಿಧ. ಒಂದು ಅವರಿಗೋಸ್ಕರ ಬದುಕುವ ಜನ, ಇನ್ನೊಂದು ಪರರಿಗೋಸ್ಕರ ಬದುಕುವ ಜನ. ಶಿವಳ್ಳಿಯವರು ಬದುಕಿನುದ್ದಕ್ಕೂ ಪರರಿಗೋಸ್ಕರ ಜೀವನ ಮುಡುಪಾಗಿಟ್ಟಿದ್ದರು.ಇಂದು ನೆರೆದ ಜನರೆ ಇದಕ್ಕೆ ಸಾಕ್ಷಿ ಎಂದರು.

ಬಸವಣ್ಣ ಸೇರಿದಂತೆ ಅನೇಕ ಮಹಾತ್ಮರು ಜಾತಿಯನ್ನು ಹೋಗಲಾಡಿಸಲು ಶ್ರಮಿಸಿದ್ದಾರೆ. ಆದರಿಂದು ಜಾತಿ ಗಟ್ಟಿಯಾಗಿದ್ದು, ಕೆಳವರ್ಗದ ಜನರು ಇನ್ನೂ ಶೋಷಣೆಗೆ ಒಳಗಾಗುತ್ತಿದ್ದಾರೆ. ಯಾರೂ ಸಹ ಹುಟ್ಟುವಾಗ ಇಂತಹ ಜಾತಿ ಬೇಕೆಂದು ಅರ್ಜಿ ಹಾಕಿ ಹುಟ್ಟುವುದಿಲ್ಲ. ಹಾಗಿದ್ದರೆ ನಾನು ಸಹ ಮೇಲ್ಜಾತಿಯಲ್ಲಿ ಹುಟ್ಟಲು ಅರ್ಜಿ ಹಾಕುತ್ತಿದ್ದೆ. ನಾವೆಲ್ಲ ಮನುಷ್ಯರೇ ಆಗಿದ್ದು, ಎಲ್ಲರೂ ಕೂಡಿ ಬಾಳಬೇಕು. ಶಿಕ್ಷಣ ಪಡೆದು ಸ್ವಾಭಿಮಾನ ಬದುಕು ಸಾಗಿಸಬೇಕು ಎಂದರು.

ರಾಜಕೀಯ ಜೀವನದಲ್ಲಿ ಪ್ರಾಮಾಣಿಕರು ಸಿಗುವುದು ಅಪರೂಪ. ಅಂದು ಕೈ-ಬಾಯಿ ಸ್ವಚ್ಛವಿಟ್ಟುಕೊಂಡ ಶಿವಳ್ಳಿಯವರನ್ನು ಸಚಿವರನ್ನಾಗಿ ಮಾಡಲಾಗಿತ್ತು. ಅವರಲ್ಲಿ ಎಳ್ಳಷ್ಟು ಅಹಂಕಾರ ಇರಲಿಲ್ಲ, ಆದರೆ ಕೆಲವರು ಶಾಸಕರಾದರೆ ಸಾಕು ಅಹಂಕಾರ ತುಂಬಿ ತುಳುಕುತ್ತಿರುತ್ತದೆ. ಆದರೆ ಶಿವಳ್ಳಿ ಅವರ ಹಾದಿಯನ್ನೇ ದೀಪವಾಗಿಸಿಕೊಂಡ ಕುಸುಮಾವತಿ ಅವರು ಸಹ ಸರಳತೆಯಿಂದ ಬಡಜನರ ಕೆಲಸ ಮಾಡುತ್ತಿದ್ದಾರೆ ಎಂದರು.

ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಬದುಕಿದರೆ ಶಿವಳ್ಳಿಯವರ ಹಾಗೆ ಬದುಕಬೇಕು. ಅಂದಾಗ ಮಾತ್ರ ಭೂಮಿಯ ಮೇಲಿನ ಹುಟ್ಟು ಸ್ವಾರ್ಥಕವಾದಂತೆ. ಕುಸುಮಾವತಿ ಶಿವಳ್ಳಿಯವರು ಮಹಿಳೆಯಾದರೂ ತಾಲೂಕಿನಲ್ಲಿ ಓಡಾಡಿಕೊಂಡು ಉತ್ತಮ ಶಾಸಕತ್ವ ನಿರ್ವಹಿಸುತ್ತಿದ್ದಾರೆ ಎಂದರು.

ಶಾಸಕಿ ಕುಸುಮಾವತಿ ಶಿವಳ್ಳಿ ಮಾತನಾಡಿ, ನಾನು ರಾಜಕೀಯ ಕುಟುಂಬದಿಂದ ಬಂದಿಲ್ಲ, ರಾಜಕಾರಣ ಕಂಡಿಲ್ಲ, ಆದರೆ ನಿಮ್ಮೆಲ್ಲರ ಪ್ರೀತಿಯಿಂದ ಶಾಸಕಿಯಾಗಿದ್ದೇನೆ. ನನ್ನ ಪತಿದೇವರ ಹಾದಿಯಲ್ಲಿಯೇ ಸಾಗುತ್ತಿದ್ದೇನೆ. ನಿಮ್ಮೆಲ್ಲರ ಪ್ರೀತಿ-ವಿಶ್ವಾಸ ನಮ್ಮ ಪತಿಯ ಮೇಲಿದ್ದು ಅದಕ್ಕೆ ಚ್ಯುತಿ ಬರದಂತೆ ನಡೆದುಕೊಳ್ಳುತ್ತೇನೆ ಎಂದು ಹೇಳಿದರು.

ಶಾಸಕರಾದ ಶ್ರೀನಿವಾಸ ಮಾನೆ, ಪ್ರಸಾದ ಅಬ್ಬಯ್ಯ, ಸಲೀಂ ಅಹ್ಮದ, ಮಾಜಿ ಶಾಸಕ ಎನ್‌.ಎಚ್‌ ಕೋನರಡ್ಡಿ, ಮಾಜಿ ಸಭಾಪತಿ ವೀರಣ್ಣ ಮತ್ತಿಗಟ್ಟಿ, ಮಾಜಿ ಶಾಸಕ ಎಮ್‌. ಎಸ್‌. ಅಕ್ಕಿ ಮಾತನಾಡಿ, ಶಿವಳ್ಳಿಯವರ ಆದರ್ಶಗಳು ನಮ್ಮ ರಾಜಕೀಯ ಜೀವನಕ್ಕೆ ದಾರಿ ದೀಪವಾಗಿದ್ದು, ಅವರ ಬದುಕು ಅರ್ಥಪೂರ್ಣವಾಗಿತ್ತು ಎಂದು ಹೇಳಿದರು.

ಮುಕ್ತಿಮಂದಿರದ ಶ್ರೀ ವಿಮಲರೇಣುಕ ಮುಕ್ತಿಮನಿ ಸ್ವಾಮೀಜಿ, ಕಲ್ಯಾಣಪುರ ಶ್ರೀ ಬಸವಣ್ಣಜ್ಜನವರು, ಬೆಳಗಾವಿಯ ಮುಕ್ತಿಮಠದ ಶ್ರೀ ಶಿವಸಿದ್ಧ ಸೋಮೇಶ್ವರ ಸ್ವಾಮೀಜಿ, ಮನಸೂರ ಶ್ರೀ ಬಸವರಾಜ ದೇವರು ಆರ್ಶೀವಚನ ನೀಡಿದರು.

ಮುಖಂಡರಾದ ಅಡಿವೆಪ್ಪ ಶಿವಳ್ಳಿ, ಷಣ್ಮುಖ ಶಿವಳ್ಳಿ, ಮುತ್ತು ಶಿವಳ್ಳಿ, ಅಮರಶಿವಾ ಶಿವಳ್ಳಿ, ಬಾಬಣ್ಣ ಬೆಟಗೇರಿ, ಅರವಿಂದ ಕಟಗಿ, ವಿಜಯಕುಮಾರ ಹಾಲಿ, ಸಕ್ರಪ್ಪ ಲಮಾಣಿ, ದಯಾನಂದ ಕುನ್ನೂರ, ಜಗದೀಶ ಉಪ್ಪಿನ, ಸುರೇಶ ಗಂಗಾಯಿ, ಚಂದ್ರಶೇಖರ ಜುಟ್ಟಲ, ಉಮೇಶ ಹೆಬಸೂರ, ಎಚ್‌.ಎಸ್‌. ಲಕ್ಷ್ಮೇಶ್ವರ, ಗುರು ಚಲವಾದಿ, ಬಸವರಾಜ ಸಿರಸಂಗಿ ಇತರರಿದ್ದರು.

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

ShreeKanth

Meet Friends: ಧಾರವಾಡದ ಹಳೆಯ ಗೆಳೆಯರ ಭೇಟಿಯಾದ ತೆಲುಗು ನಟ ಶ್ರೀಕಾಂತ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.