ಜನರ ಮನದಲ್ಲಿ ಚಿರಸ್ಥಾಯಿಯಾದ ಶಿವಳ್ಳಿ


Team Udayavani, Mar 20, 2022, 11:50 AM IST

1

ಕುಂದಗೋಳ: ಹಳ್ಳಿ-ಹಳ್ಳಿ, ಓಣಿ-ಓಣಿಗಳನ್ನು ತಿರುಗಿ, ಜನರ ವಿಶ್ವಾಸ ಗಳಿಸಿ, ಮೂರು ಬಾರಿ ಶಾಸಕರಾಗಿ, ಸಚಿವರಾಗಿದ್ದ ದಿ| ಸಿ.ಎಸ್‌.ಶಿವಳ್ಳಿ ಜನರ ಮನಸ್ಸಿನಲ್ಲಿ ಇಂದಿಗೂ ಅಚ್ಚಳಿಯದೆ ಉಳಿದಿದ್ದಾರೆ. ಚಿರಸ್ಥಾಯಿಯಾಗಿದ್ದಾರೆ.

ಶಿವಳ್ಳಿಯವರ ಮೂರನೇ ವರ್ಷದ ಪುಣ್ಯತಿಥಿ ಅಂಗವಾಗಿ ಅವರ ಜನ್ಮಸ್ಥಳ ಯರಗುಪ್ಪಿಯಲ್ಲಿ ಮಾ.20ರಂದು ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯಲಿದ್ದು, ರಾಜಕೀಯ ಮುಖಂಡರು ಪುತ್ಥಳಿ ಅನಾವರಣಗೊಳಿಸಲಿದ್ದಾರೆ.

ಕುಂದಗೋಳ ತಾಲೂಕು ಯರಗುಪ್ಪಿ ಗ್ರಾಮದಲ್ಲಿ ಸತ್ಯಪ್ಪ ಹಾಗೂ ಗಂಗಮ್ಮ ದಂಪತಿಯ ದ್ವಿತೀಯ ಮಗನಾಗಿ 12-11-1956ರಂದು ಜನಿಸಿದ ಅವರು ಬಿಕಾಂ ಪದವಿ ಪಡೆದರು. ನಂತರ ರಾಜಕೀಯಕ್ಕೆ ಧುಮುಕಿದರು. ಯರಗುಪ್ಪಿ ಗ್ರಾಪಂಗೆ 1985ರಲ್ಲಿ ಸ್ಪರ್ಧಿಸಿ ಪರಾಜಿತನಾದಾಗ ತಂದೆ ದಿ| ಸತ್ಯಪ್ಪ ಅವರು ಶಾಸಕನಾಗಿ ಮನೆಗೆ ಬಾ ಎಂದು ಹರಸಿದರು. ಮನೆ ಬಿಟ್ಟು ಹೋದ ಶಿವಳ್ಳಿ ಅವರು ಸುಮ್ಮನೆ ಕೂಡದೆ, ಸೋಲೇ ಗೆಲುವಿನ ಮೆಟ್ಟಿಲೆಂದು ತಿಳಿದು 1953ರಲ್ಲಿ ದಿ| ಎಸ್‌.ಬಂಗಾರಪ್ಪನವರ ಕ್ರಾಂತಿರಂಗ ಪಕ್ಷದಿಂದ ಕುಂದಗೋಳ ಮತಕ್ಷೇತ್ರದಲ್ಲಿ ಶಾಸಕ ಸ್ಥಾನಕ್ಕೆ ಸ್ಪ ರ್ಧಿಸಿ ಪರಾಭವಗೊಂಡರು. ಆದರೂ ಎದೆಗುಂದದೆ ರಾಜಕುಮಾರ ಅಭಿಮಾನಿ ಬಳಗ ಕಟ್ಟಿಕೊಂಡು ಕುಂದಗೋಳದಲ್ಲಿ ಸಣ್ಣದೊಂದು ಕೊಠಡಿಯಲ್ಲಿ ನೆಲೆಸಿ, ಬಡಜನರ ಸೇವೆಗೆ ನಿಂತರು.

ಇಡೀ ತಾಲೂಕು ತಿರುಗಿ ಜನರನ್ನು ಸಂಘಟಿಸಿದರು. ಚಾಪೆ, ಪೇಪರ್‌ ಮೇಲೆ ಮಲಗಿ ತನ್ನ ರಾಜಕೀಯ ಭವಿಷ್ಯ ಗಟ್ಟಿಯಾಗಿಸಿಕೊಳ್ಳುತ್ತ ಸಾಗಿ, 1994ರಲ್ಲಿ ಬಂಗಾರಪ್ಪ ಅವರ ಅಭಿಮಾನಿಯಾಗಿ, ಅವರ ಗರಡಿಯಲ್ಲಿ ಬೆಳೆದು ಕರ್ನಾಟಕ ಕಾಂಗ್ರೆಸ್‌ ಪಕ್ಷದ ಮೂಲಕ ಸ್ಪರ್ಧಿಸಿ ಸೋತರು.

1999ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದಾಗ ಜನತೆಯೇ ತಮ್ಮ ಜೇಬಿನಿಂದ ಹಣ ಹಾಕಿ ಮೊದಲ ಬಾರಿಗೆ ವಿಧಾನಸಭೆಗೆ ಕಳುಹಿಸಿದರು. ನಂತರ ಕಾಂಗ್ರೆಸ್‌ ಸೇರಿದರು. 2006ರಲ್ಲಿ ಕಾಂಗ್ರೆಸ್‌ ಟಿಕೆಟ್‌ ಸಿಗದೆ ಪಕ್ಷೇತರನಾಗಿ ಸ್ಪರ್ಧಿಸಿ ಮತ್ತೆ ಪರಾಭವಗೊಂಡರು. 2013ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಮತ್ತೆ ವಿಧಾನಸಭೆ ಪ್ರವೇಶಿಸಿದರು. 2018ರಲ್ಲಿ ಕಾಂಗ್ರೆಸ್‌ ಮೂಲಕ ಸ್ಪರ್ಧಿಸಿ ಮೂರನೇ ಬಾರಿ ಗೆಲ್ಲಲಾಗದೆಂಬ ಮಾತು ಸುಳ್ಳು ಮಾಡಿ ಗೆದ್ದು ಬಂದರು. ನಂತರ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ಪೌರಾಡಳಿತ ಸಚಿವರಾದರೂ ಅವಧಿ ಪೂರ್ಣಗೊಳಿಸದೆ ವಿಧಿಯಾಟ ಅವರ ಜೀವವನ್ನೇ ಕಿತ್ತುಕೊಂಡಿತು. ಈಗ ಅವರ ಪತ್ನಿ ಕುಸುಮಾವತಿ ಶಿವಳ್ಳಿಯವರು ಶಾಸಕಿಯಾಗಿ ಪತಿಯ ಆದರ್ಶಗಳನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.

-ಶೀತಲ ಎಸ್‌.ಎಂ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.