![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 27, 2019, 9:23 AM IST
ಹುಬ್ಬಳ್ಳಿ: ‘ಸಾಹೇಬ್ರಾ ನಮ್ಮ ಹೊಲ್ದಾನ ಬೆಳಿ ಹೋಗಿದ್ದಿಕ್ಕಿಂತ ಹೆಚ್ಚಿನ ನೋವು ನಮ್ಮ ಹೊಲಾನಾ ಹೋಗಿದ್ದಕ್ಕೆ ಆಗೈತಿ. ಮೊದಲಿನಂತೆ ಹೊಲ ಮಾಡ್ಕೊಳ್ಳಿಕ್ಕೆ ಲಕ್ಷಾಂತರ ರೂಪಾಯಿ ಖರ್ಚಾಕ್ಕೈತಿ. ಸರಕಾರದಿಂದ ನಮ್ಮ ಹೊಲ ಸುದ್ದ ಮಾಡಿಕೊಡಿ. ಇಲ್ಲಾ ಅಂದ್ರ ರೈತಾಪಿ ಜನ ಬಿತ್ತಿ ಬೆಳೆಯೋದು ಹೆಂಗ’
ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದ ಬಳಿ ತುಪ್ಪರಿ ಹಳ್ಳದ ಪ್ರವಾಹದಿಂದ ಸಂಕಷ್ಟಕ್ಕೀಡಾಗಿರುವ ರೈತರು ಕೇಂದ್ರ ಪ್ರವಾಹ ಅಧ್ಯಯನ ತಂಡದ ಮುಂದೆ ಅಳಲು ತೋಡಿಕೊಂಡ ಪರಿ ಇದು. ಬೆಳೆ ನಾಶವಾದರೆ ಪರವಾಗಿಲ್ಲ ಭೂ ತಾಯಿ ಕೃಪೆ ತೋರಿದರೆ ಇನ್ನೊಂದು ಬೆಳೆ ಬೆಳೆದು ನಷ್ಟ ಸರಿದೂಗಿಸಿಕೊಳ್ಳಬಹುದು. ಆದರೆ ಕಳೆದ ನಾಲ್ಕೈದು ವರ್ಷಗಳಿಂದ ಬರದಿಂದ ತತ್ತರಿಸಿದ್ದೇವೆ. ಈ ವರ್ಷ ಪ್ರವಾಹ ಹಾಗೂ ಮಳೆಯಿಂದ ಜೀವನವನ್ನೇ ಕಳೆದುಕೊಂಡಿದ್ದೇವೆ ಎಂದು ತಮ್ಮ ಸಂಕಷ್ಟ ವ್ಯಕ್ತಪಡಿಸಿದರು.
ಹೊಲ ಪೂರ್ತಿ ಉಸುಕು: ಸಾಲಸೋಲ ಮಾಡಿ ಬಿತ್ತಿ ಬೆಳೆದು ನಿಂತ ಬೆಳೆ ಕಳೆದುಕೊಂಡಿರುವ ದುಃಖ ಒಂದೆಡೆಯಾದರೆ ಇಡೀ ಹೊಲವೇ ಹಳ್ಳವಾಗಿ ಮಾರ್ಪಾಡಾಗಿದೆ. ತುಪ್ಪರಿ ಹಳ್ಳದ ಅಕ್ಕಪಕ್ಕದಲ್ಲಿರುವ ಭೂಮಿಯಲ್ಲಿ ಫಲವತ್ತಾದ ಮಣ್ಣು ಕೊಚ್ಚಿ ಹೋಗಿ ಮೀಟರ್ ಎತ್ತರದಲ್ಲಿ ಮರಳು ತುಂಬಿಕೊಂಡಿದೆ. ಬೆಳೆ, ಹೊಲದ ಬದುವು, ಕೃಷಿ ಹೊಂಡ ಎಲ್ಲವೂ ಕೊಚ್ಚಿ ಹೋಗಿವೆ. ಒಂದು ಹೆಕ್ಟೇರ್ ಜಮೀನಿನ ಸುಧಾರಣೆಗೆ ಒಂದು ಲಕ್ಷ ರೂ. ಖರ್ಚಾಗುತ್ತದೆ. ಮೊದಲಿನಂತೆ ತಮ್ಮ ಜಮೀನನ್ನು ತಯಾರು ಮಾಡಿಕೊಳ್ಳುವುದು ಹೇಗೆ ಎಂಬ ಆತಂಕ ರೈತರಲ್ಲಿ ಮೂಡಿದೆ.
ಎನ್ಡಿಆರ್ಎಫ್ ನಿಯಮಾವಳಿ ಪ್ರಕಾರ ಒಂದು ಹೆಕ್ಟೇರ್ ಬೆಳೆ ನಾಶಕ್ಕೆ 6800 ರೂ. ಪರಿಹಾರ ನಿಗದಿ ಮಾಡಲಾಗಿದೆ. ಈ ಹಣ ಬೀಜಕ್ಕೆ ಸಾಲುವುದಿಲ್ಲ. ಬೆಳೆಯನ್ನೇ ನಂಬಿ ಬದುಕುವ ರೈತರ ಪಾಡೇನು. ಒಂದು ಎಕರೆಯಲ್ಲಿ 50-60 ಕ್ವಿಂಟಲ್ ಈರುಳ್ಳಿ, 5-6 ಕ್ವಿಂಟಲ್ ಹೆಸರು, 25 ಕ್ವಿಂಟಲ್ ಮೆಕ್ಕೆಜೋಳ ತೆಗೆಯುತ್ತಿದ್ದೆವು. ಇಂತಹ ಫಲವತ್ತಾದ ಭೂಮಿ ಮರಳುಗುಡ್ಡೆಯಾಗಿದೆ. ಹೊಲದ ಸುಧಾರಣೆ ಹೇಗೆ ಎಂದು ತಂಡದ ಮುಂದೆ ನೋವು ತೋಡಿಕೊಂಡರು.
ಸರಕಾರವೇ ಅಭಿವೃದ್ಧಿಪಡಿಸಲಿ: ಲಕ್ಷಾಂತರ ರೂ. ಖರ್ಚು ಮಾಡಿ ಹೊಲ ಸುಧಾರಣೆ ಮಾಡುವ ಸಾಮರ್ಥ್ಯ ಬಡ ರೈತರಿಗಿಲ್ಲ. ಹೀಗಾಗಿ ಸರಕಾರವೇ ಇಂತಹ ಹೊಲಗಳನ್ನು ಗುರುತಿಸಿ ಅಭಿವೃದ್ಧಿ ಪಡಿಸಲು ಮುಂದಾಗಬೇಕು. ಈ ನಿಟ್ಟಿನಲ್ಲಿ ಕೇಂದ್ರ ತಂಡ ಕೇಂದ್ರ ಸರಕಾರಕ್ಕೆ ಸಲ್ಲಿಸುವ ವರದಿಯಲ್ಲಿ ಪ್ರಸ್ತಾಪಿಸುವಂತೆ ರೈತರು ಮನವಿ ಮಾಡಿದರು.
ಮಳೆಯಿಂದ ಹಾನಿಯಾದ ಮನೆಗಳಿಗೆ 5200 ರೂ. ಪರಿಹಾರ ಚೆಕ್ ನೀಡುತ್ತಿದ್ದಾರೆ. ಈ ಮೊತ್ತದ ಹಣದಲ್ಲಿ ಮನೆ ದುರಸ್ತಿಯೂ ಆಗುವುದಿಲ್ಲ. ಮನೆ ಹಾನಿಗೆ ಇಷ್ಟೊಂದು ಸಣ್ಣ ಪ್ರಮಾಣದ ಪರಿಹಾರ ಜನರನ್ನು ಅವಮಾನಿಸಿದಂತೆ. ಕೆಲವೊಂದು ಮನೆಗಳು ಸಂಪೂರ್ಣವಾಗಿ ಬಿದ್ದಿದ್ದರೂ ಎಲ್ಲರಿಗೂ ಒಂದೇ ಮೊತ್ತದ ಪರಿಹಾರ ಚೆಕ್ ನೀಡುತ್ತಿದ್ದಾರೆ ಎನ್ನುವ ಕಾರಣದಿಂದ ಅಳಗವಾಡಿ ಗ್ರಾಮಸ್ಥರು ಮನೆ ಹಾನಿ ಪರಿಹಾರ ಚೆಕ್ ಪಡೆದುಕೊಂಡಿಲ್ಲ.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.