ಕುಲಪತಿ ಪಕ್ಷಪಾತ ಧೋರಣೆ ಖಂಡಿಸಿ ಸಿಬ್ಬಂದಿ ಪ್ರತಿಭಟನೆ 


Team Udayavani, Aug 1, 2018, 4:59 PM IST

1-agust-19.jpg

ಬಾಗಲಕೋಟೆ: ಇಲ್ಲಿನ ತೋಟಗಾರಿಕೆ ವಿವಿಯ ಪ್ರಭಾರಿ ಕುಲಪತಿ, ಸಿಬ್ಬಂದಿ ವರ್ಗಾವಣೆ ವಿಷಯದಲ್ಲಿ ಪಕ್ಷಪಾತಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ವಿವಿಯ ಪ್ರಾಧ್ಯಾಪಕರು ಹಾಗೂ ಸಿಬ್ಬಂದಿ ಮಂಗಳವಾರ ಪ್ರತಿಭಟನೆ ನಡೆಸಿದರು.

ತೋಟಗಾರಿಕೆ ವಿವಿಯ ಹಂಗಾಮಿ ಕುಲಪತಿ ಡಾ|ಎಚ್‌.ಬಿ. ಲಿಂಗಯ್ಯ ಅವರು ಸಿಬ್ಬಂದಿ ವರ್ಗಾವಣೆಯಲ್ಲಿ ಏಕಪಕ್ಷೀಯ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಹಂಗಾಮಿ ಕುಲಪತಿ ಆಗಿರುವ ಅವರು ಯಾವುದೇ ವರ್ಗಾವಣೆಗೆ ಅಧಿಕಾರವೂ ಹೊಂದಿಲ್ಲ. ಈ ಕುರಿತು ಸರ್ಕಾರದ ಸ್ಪಷ್ಟ ನಿರ್ದೇಶನವಿದೆ. ಆದರೂ, ಹಂಗಾಮಿ ಕುಲಪತಿಗಳು ತಮಗೆ ಬೇಕಾದ ಸಿಬ್ಬಂದಿಯನ್ನು, ಬೇಕಾದಂತೆ ವರ್ಗಾವಣೆ ಮಾಡುತ್ತಿದ್ದಾರೆ ಎಂದು ಹೋರಾಟ ನಿರತ ಸಿಬ್ಬಂದಿ ಆರೋಪಿಸಿದರು.

ವಿವಿಯ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್‌.ಎಲ್‌. ಜಗದೀಶ ಮಾತನಾಡಿ, ಸರ್ಕಾರದ ನಿಯಮದಂತೆ ಒಂದು ವಾರದ ಹಿಂದೆಯೇ ವರ್ಗಾವಣೆ ಮಾಡುವಂತೆ ಎಲ್ಲ ಸಿಬ್ಬಂದಿ ಮೂಲಕ ಮನವಿ ಮಾಡಿದ್ದೇವು. ಆದರೆ, ವರ್ಗಾವಣೆಗೆ ಅವಕಾಶವಿಲ್ಲ ಎಂದು ಕುಲಪತಿಗಳು ಹೇಳಿದ್ದರು. ಈಗ ಜು. 28ರಂದು ಓರ್ವ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಯನ್ನು ವರ್ಗ ಮಾಡಿದ್ದಾರೆ. ಇದು ಪಕ್ಷಪಾತಿ ಧೋರಣೆಯಾಗಿದೆ ಎಂದು ದೂರಿದರು. ಈ ನಿಯಮ ಬಾಹಿರ ವರ್ಗಾವಣೆಯನ್ನು ತಕ್ಷಣ ತಡೆ ಹಿಡಿಯಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

ಬೆಂಗಳೂರಿನಿಂದಲೇ ನಿರ್ವಹಣೆ ? : ವಿವಿಯ ಶಿಕ್ಷಕೇತರ ನೌಕರರ ಸಂಘದ ಅಧ್ಯಕ್ಷ ರಾಜಶೇಖರ ಬಡಿಗೇರ ಮಾತನಾಡಿ, ಕಳೆದ 2ರಿಂದ 3 ವರ್ಷಗಳ ಅವಧಿ ಯಲ್ಲಿ ಯಾವುದೇ ಶಿಕ್ಷಕೇತರ ಸಿಬ್ಬಂದಿ ವರ್ಗಾವಣೆಯಾಗಿಲ್ಲ. ಈವರೆಗೆ 7 ಜನ ಉಪ ಕುಲಪತಿಗಳನ್ನು ಕಂಡ ನಾವು, ಸದ್ಯದ ಹಂಗಾಮಿ ಉಪ ಕುಲಪತಿಗಳಿಂದ ವಿಚಿತ್ರ ಆಡಳಿತ ಅನುಭವ ಪಡೆಯುತ್ತಿದ್ದೇವೆ. ನಾವೆಲ್ಲ ಹಲವಾರು ವರ್ಷಗಳಿಂದ ವರ್ಗಾವಣೆಗೆ ಮನವಿ ಮಾಡಿದರೂ ಆಗಿಲ್ಲ. ಆದರೆ, ಈಗ ಏಕಾಏಕಿ ವರ್ಗ ಮಾಡಲಾಗುತ್ತಿದೆ. ತೋಟಗಾರಿಕೆ ವಿವಿಯ ಕೇಂದ್ರ ಕಚೇರಿ ಬಾಗಲಕೋಟೆಯಲ್ಲಿದ್ದರೂ, ಅದರ ನಿರ್ವಹಣೆ ಮಾತ್ರ ಬೆಂಗಳೂರಿನಿಂದ ಆಗುತ್ತಿದೆ ಎಂದು ಆರೋಪಿಸಿದರು. ಬಳಿಕ ನೂತನ ಉಪಕುಲಪತಿ ಕೆ.ಎಂ.ಇಂದಿರೇಶ, ಪ್ರತಿಭಟನೆ ನಡೆಸುತ್ತಿದ್ದ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ಮನವಿ ಆಲಿಸಿ, ಪ್ರತಿಭಟನೆ ಹಿಂಪಡೆಯಲು ಮನವಿ ಮಾಡಿದರು.

ವಿವಿಯ ಪ್ರಾಧ್ಯಾಪಕರಾದ ಡಾ|ಪ್ರಸನ್ನ, ಡಾ|ಗೋಳಗಿ, ಡಾ|ಶಿವಯೋಗಿ ರ್ಯಾವಲದ, ಡಾ|ತಮದಡ್ಡಿ, ಡಾ|ಕೆರೂಟಗಿ, ಶಿಕ್ಷಕೇತರ ಸಿಬ್ಬಂದಿಗಳಾದ ರವೀಂದ್ರ ಪೂಜಾರ, ಬಿ.ಎಸ್‌. ಮಲ್ಲಿಗವಾಡ, ಜಿ.ಎಸ್‌. ಕೆಂಗಾಪುರ, ರವಿಶಂಕರ, ಎಸ್‌.ಬಿ. ಸುರಕೋಡ, ರೂಪಾ ಹಾವರಗಿ, ಎಸ್‌.ಬಿ. ಕಬ್ಬೇರಹಳ್ಳಿ, ಎಚ್‌.ಆರ್‌. ಚಿನ್ನಣ್ಣವರ ಮುಂತಾದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

1-rss

Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ

Madhu Bangarappa

Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.